ಧಾರವಾಡದಲ್ಲಿ ಭಾವೈಕ್ಯತೆಯ ಶ್ರೀಕೃಷ್ಣ ಜನ್ಮಾಷ್ಟಮಿ: ಕೃಷ್ಣ-ರಾಧೆಯರ ವೇಷ ತೊಟ್ಟ ಮುಸ್ಲಿಂ ವಿದ್ಯಾರ್ಥಿಗಳು
ಧಾರವಾಡ, ಸೆಪ್ಟೆಂಬರ್ 07: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಧಾರವಾಡ ನಗರದ ಆಲೂರು ವೆಂಕಟರಾವ್ ವೃತ್ತದ ಬಳಿಯ ಶಿಕ್ಷಕರ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಸರ್ಕಾರಿ ಮಾದರಿ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಪೋಷಕರು ಧರ್ಮಾತೀತವಾಗಿ ಭಾಗವಹಿಸಿ ಹಬ್ಬವನ್ನು ಸಂಭ್ರಮಿಸಿದ್ದಾರೆ.
ಶ್ರೀಕೃಷ್ಣ ಲೀಲೆಗಳಿಗೆ ಮಾರು ಹೋಗದವರೇ ಇಲ್ಲ. ಹೀಗಾಗಿ ಹಿಂದೂ ದೇವರ ಪೈಕಿ ಅತ್ಯಂತ ಹೆಚ್ಚು ಭಕ್ತರನ್ನು ಹೊಂದಿದ ದೇವರೆಂದರೆ ಅದು ಶ್ರೀಕೃಷ್ಣನೇ. ಇಂತಹ ಶ್ರೀಕೃಷ್ಣನ ಲೀಲೆಗಳಿಗೆ ಧಾರವಾಡದ ಮುಸ್ಲಿಂ ಸಮಾಜದ ಭಾಂದವರು ಕೂಡ ಮಾರು ಹೋಗಿದ್ದು, ಸರ್ಕಾರಿ ಶಾಲೆಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗವಹಿಸಿದ್ದಾರೆ.

ಧಾರವಾಡದ ಸರ್ಕಾರಿ ಮಾದರಿ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಈ ಶಾಲೆಯ ವಿಶೇಷವೇನೆಂದರೆ, ಶಾಲೆಯಲ್ಲಿ 1ರಿಂದ 8 ನೇ ತರಗತಿಯವರೆಗೆ 320 ಬಾಲಕಿಯರು ಓದುತ್ತಿದ್ದಾರೆ. ಈ ಪೈಕಿ ಶೇ. 60 ರಷ್ಟು ಬಾಲಕಿಯರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ. ಆದರೂ ಇಲ್ಲಿ ಶ್ರೀಕೃಷ್ಣ-ರಾಧೆಯರ ವೇಷ ತೊಟ್ಟು ತಮ್ಮ ಪೋಷಕರೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯಲ್ಲಿ ಸಂಭ್ರಮದಿಂದ ಭಾಗಿಯಾಗಿದ್ದರು.
ಈ ಶಾಲೆಯಲ್ಲಿ ನೂರು ವರ್ಷಗಳಷ್ಟು ಹಳೆಯದಾದ ತೊಟ್ಟಿಲೊಂದಿದೆ. ಮೊದಲಿನಿಂದಲೂ ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಇದೇ ತೊಟ್ಟಿಲನ್ನು ಬಳಸಲಾಗುತ್ತಿದೆ. ಪ್ರತಿವರ್ಷ ಶ್ರೀಕೃಷ್ಣನ ಪ್ರತಿಮೆಯನ್ನು ಇದರಲ್ಲಿ ಇಟ್ಟು ತೊಟ್ಟಿಲು ತೂಗಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಈ ವರ್ಷವು ಕೂಡ ಶಿಕ್ಷಕಿಯರು, ಮಕ್ಕಳ ತಾಯಂದಿರು ಕೃಷ್ಣನ ಪ್ರತಿಮೆಯನ್ನು ತೊಟ್ಟಿಲಲ್ಲಿ ಇಟ್ಟು ತೂಗಿ ಸಂಭ್ರಮಿಸಿದರು.

ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತಿ, ಅದರಿಂದ ಲಾಭ ಪಡೆದುಕೊಳ್ಳುತ್ತಿರುವ ಜನರ ಮಧ್ಯೆ ದೇವರು ಎಲ್ಲರಿಗೂ ಒಂದೇ ಎನ್ನುವ ಸಂದೇಶವನ್ನು ಧಾರವಾಡದ ಸರ್ಕಾರಿ ಶಾಲೆಯಲ್ಲಿ ಸಾರಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications