ಚೆಕ್ ಬೌನ್ಸ್ ಪ್ರಕರಣ:ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಜೈಲು ಪಾಲು
ಧಾರವಾಡ, ಜನವರಿ 7: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡನಾಗಿದ್ದ ಶ್ರೀಕಾಂತ ತಿರಕಪ್ಪ ಜಮನಾಳಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಧಾರವಾಡ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಂಜುನಾಥ ಗುರುಸಂಗಪ್ಪ ದನ್ನೂರ ಎನ್ನುವವರ ಆರೋಪದ ಮೇರೆಗೆ ಶ್ರೀಕಾಂತ ತಿರಕಪ್ಪ ಜಮನಾಳ ವಿರುದ್ಧ 2018ರಲ್ಲಿ ದೂರು ಸಲ್ಲಿಸಲಾಗಿತ್ತು.
ಈ ಹಿಂದೆ ಜಮನಾಳ, ಪಿರ್ಯಾದಿದಾರರಿಂದ ಐದು ಲಕ್ಷ ಹಣ ಪಡೆದುಕೊಂಡು ಮರಳಿ ನೀಡದೆ ಚೆಕ್ ಕೊಟಿದ್ದರು. ಬಳಿಕ ಚೆಕ್ ಅನ್ನು ಬ್ಯಾಂಕ್ನಲ್ಲಿ ಹಾಕಿದಾಗ ಚೆಕ್ ಬೌನ್ಸ್ ಆಗಿದ್ದು, ಪಿರ್ಯಾದಿದಾರರು ಆರೋಪಿತನ ಮೇಲೆ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

2019ರಲ್ಲಿ ಜಮನಾಳ, ಪಿರ್ಯಾದಿದಾರರಿಗೆ ಐದು ಲಕ್ಷ ಹಣ ಕೊಡುವುದಾಗಿ ನ್ಯಾಯಾಲಯದಲ್ಲಿ ರಾಜಿ ಮಾಡಿಕೊಂಡಿದ್ದರು.
ಆದರೆ, ಇಲ್ಲಿಯವರೆಗೆ ಹಣ ನೀಡದೆ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಕಾಂತ ಜಮನಾಳ ವಿರುದ್ಧ ನ್ಯಾಯಾಲಯವು ಪತ್ತೆಗಾಗಿ ದಸ್ತಗಿರಿ ವಾರಂಟ್ ಹೊರಡಿಸಿತ್ತು.
ಧಾರವಾಡದ ಉಪನಗರ ಪೊಲೀಸರು ಶುಕ್ರವಾರ ಆರೋಪಿಯನ್ನು ದಸ್ತಗಿರಿ ನಡೆಸಿ ಪ್ರಧಾನ ಸಿ.ಜೆ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗಿರೀಶ್ ಆರ್.ಬಿ ಅವರು ಆರೋಪಿತನಿಗೆ ಮೂರು ತಿಂಗಳ ಸಾದಾ ಕಾರಾಗೃಹ ವಾಸ ಶಿಕ್ಷೆಯನ್ನು ವಿಧಿಸಿ ಆದೇಶಿಸಿದರು. ಇದರಿಂದಾಗಿ ಆರೋಪಿ ಶ್ರೀಕಾಂತ ಜಮನಾಳ ಇದೀಗ ಧಾರವಾಡ ಕೇಂದ್ರ ಕಾರಾಗೃಹದ ಪಾಲಾಗಿದ್ದಾನೆ.
ಈ ಆದೇಶ ಪ್ರಕಟಗೊಳ್ಳುತ್ತಿದ್ದಂತೆ ನ್ಯಾಯಾಲಯದಿಂದಲೇ ಜಮನಾಳ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಬೆನ್ನು ಹತ್ತಿ ಆತನನ್ನು ಹಿಡಿದು ಸಾರ್ವಜನಿಕವಾಗಿಯೇ ಹಿಡಿದು ಜೈಲಿಗೆ ಅಟ್ಟಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications