Get Updates
Get notified of breaking news, exclusive insights, and must-see stories!

ಚೆಕ್ ಬೌನ್ಸ್ ಪ್ರಕರಣ:ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಜೈಲು ಪಾಲು

ಧಾರವಾಡ, ಜನವರಿ 7: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡನಾಗಿದ್ದ ಶ್ರೀಕಾಂತ ತಿರಕಪ್ಪ ಜಮನಾಳಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಧಾರವಾಡ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.

ಮಂಜುನಾಥ ಗುರುಸಂಗಪ್ಪ ದನ್ನೂರ ಎನ್ನುವವರ ಆರೋಪದ ಮೇರೆಗೆ ಶ್ರೀಕಾಂತ ತಿರಕಪ್ಪ ಜಮನಾಳ ವಿರುದ್ಧ 2018ರಲ್ಲಿ ದೂರು ಸಲ್ಲಿಸಲಾಗಿತ್ತು.

ಈ ಹಿಂದೆ ಜಮನಾಳ, ಪಿರ್ಯಾದಿದಾರರಿಂದ ಐದು ಲಕ್ಷ ಹಣ ಪಡೆದುಕೊಂಡು ಮರಳಿ‌ ನೀಡದೆ ಚೆಕ್ ಕೊಟಿದ್ದರು. ಬಳಿಕ ಚೆಕ್‌ ಅನ್ನು ಬ್ಯಾಂಕ್‌ನಲ್ಲಿ ಹಾಕಿದಾಗ ಚೆಕ್ ಬೌನ್ಸ್‌ ಆಗಿದ್ದು, ಪಿರ್ಯಾದಿದಾರರು ಆರೋಪಿತನ ಮೇಲೆ ನ್ಯಾಯಾಲಯದಲ್ಲಿ ದೂರು‌ ದಾಖಲಿಸಿದ್ದರು.

Srikanta Jamanala Arrested In Cheque Bounce Case

2019ರಲ್ಲಿ ಜಮನಾಳ, ಪಿರ್ಯಾದಿದಾರರಿಗೆ ಐದು ಲಕ್ಷ ಹಣ ಕೊಡುವುದಾಗಿ ನ್ಯಾಯಾಲಯದಲ್ಲಿ ರಾಜಿ ಮಾಡಿಕೊಂಡಿದ್ದರು.

ಆದರೆ, ಇಲ್ಲಿಯವರೆಗೆ ಹಣ ನೀಡದೆ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಕಾಂತ ಜಮನಾಳ ವಿರುದ್ಧ ನ್ಯಾಯಾಲಯವು ಪತ್ತೆಗಾಗಿ ದಸ್ತಗಿರಿ ವಾರಂಟ್ ಹೊರಡಿಸಿತ್ತು.

ಧಾರವಾಡದ ಉಪನಗರ ಪೊಲೀಸರು ಶುಕ್ರವಾರ ಆರೋಪಿಯನ್ನು ದಸ್ತಗಿರಿ ನಡೆಸಿ ಪ್ರಧಾನ ಸಿ.ಜೆ ಮತ್ತು‌ ಜೆ.ಎಮ್.ಎಫ್.ಸಿ‌ ನ್ಯಾಯಾಲಯದ ಮುಂದೆ‌ ಹಾಜರು ಪಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗಿರೀಶ್‌ ಆರ್.ಬಿ ಅವರು ಆರೋಪಿತನಿಗೆ ಮೂರು ತಿಂಗಳ ಸಾದಾ ಕಾರಾಗೃಹ ವಾಸ ಶಿಕ್ಷೆಯನ್ನು ವಿಧಿಸಿ ಆದೇಶಿಸಿದರು. ಇದರಿಂದಾಗಿ ಆರೋಪಿ ಶ್ರೀಕಾಂತ ಜಮನಾಳ ಇದೀಗ ಧಾರವಾಡ ಕೇಂದ್ರ ಕಾರಾಗೃಹದ ಪಾಲಾಗಿದ್ದಾನೆ.

ಈ ಆದೇಶ ಪ್ರಕಟಗೊಳ್ಳುತ್ತಿದ್ದಂತೆ ನ್ಯಾಯಾಲಯದಿಂದಲೇ ಜಮನಾಳ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಬೆನ್ನು ಹತ್ತಿ ಆತನನ್ನು ಹಿಡಿದು ಸಾರ್ವಜನಿಕವಾಗಿಯೇ ಹಿಡಿದು ಜೈಲಿಗೆ ಅಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+