ಮಹದಾಯಿ ವಿವಾದ: ಕೋರ್ಟ್ ಗೆ ಮಹತ್ವದ ದಾಖಲೆ ಸಲ್ಲಿಸಲು ರಾಜ್ಯ ಸಿದ್ಧತೆ
ಧಾರವಾಡ, ಡಿಸೆಂಬರ್ 20 : ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಇಲಾಖೆ ನೀಡಿದ್ದ ಅನುಮತಿ ಪತ್ರದ ದಾಖಲೆಯನ್ನು ವಿಚಾರಣೆ ವೇಳೆ ಹಾಜರಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹದಾಯಿ ವಿಚಾರವಾಗಿ ಲಾಭ ನಷ್ಟದ ಲೆಕ್ಕಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಇಲಾಖೆ 2003ರ ಆ.28 ರಂದು ನೀಡಿದ್ದ ಅನುಮತಿ ಪತ್ರದ ದಾಖಲೆಯನ್ನು 2018 ರ ಫೆ.6 ರಂದು ನಡೆಯುವ ವಿಚಾರಣೆ ವೇಳೆ ಹಾಜರು ಪಡಿಸಲು ನಿರ್ಧರಿಸಿದೆ.

ರಾಜ್ಯ ಸರ್ಕಾರಕ್ಕೆ ಗೋವಾ ವಿರುದ್ದ ವಾದ ಮಂಡಿಸಲು ಈ ದಾಖಲೆ ಪ್ರಬಲ ಅಸ್ತ್ರ ಎಂದೇ ಪರಿಗಣಿಸಲಾಗಿದೆ. ಮಂಗಖವಾರ ಸಭೆ ನಡೆಸಿದ ಹಿರಿಯ ಅಧಿಕಾರಿಗಳ ಕೇಂದ್ರದ ಅನುಮತಿ ಪತ್ರದ ಬಗ್ಗೆ ಚರ್ಚಿಸಿದ್ದು ವಿಚಾರಣೆಯಲ್ಲಿ ಇದೇ ದಾಖಲೆ ಪ್ರಮುಖವಾಗಿಸಿ ವಾದ ಮಂಡಿಸುವಂತೆ ರಾಜ್ಯದ ಪರ ವಕೀಲ ಮೋಹನ್ ಕಾತರಕಿಗೆ ತಿಳಿಸಲು ತೀರ್ಮಾನಿಸಿದೆ.
ಅಚ್ಚರಿ ಎಂದರೆ 2003ರಲ್ಲೇ ಯೋಜನೆಗೆ ಅನುಮತಿ ದೊರೆತರೂ ಜಲಸಂಪನ್ಮೂಲ ಇಲಾಖೆಯಲ್ಲಿ ಈ ಬಗ್ಗೆ ದಾಖಲೆ ಇರಲಿಲ್ಲ. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅನುಮತಿ ಪತ್ರ ಪಡೆದುಕೊಂಡಿರು ಬಗ್ಗೆ ಪ್ರಸ್ತಾಪಿಸಿದ್ದರೂ, ಸರ್ಕಾರದ ಬಳಿ ದಾಖಲೆ ಇರದ ಕಾರಣ ಪರಿಸರಕ್ಕೆ ಹಾನಿಯಾಗುತ್ತದೆ ಎಂದೇ ಗೋವಾ ಖ್ಯಾತೆ ತೆಗೆದಿತ್ತು.
ಸುಪ್ರೀಂಕೋರ್ಟ್ ಸಹ ಇದೇ ವಾದ ಮಂಡಿಸಿತ್ತು. ಅಂತಿಮವಾಗಿ ಸಚಿವ ಎಚ್.ಕೆ. ಪಾಟೀಲ್ ವಿಶೇಷ ಕರ್ತವ್ಯಾಧಿಕಾರಿ ಲಕ್ಷ್ಮೀಕಾಂತ ಜೋಷಿ ಆರ್ ಟಿ ಐ ಮೂಲಕ ದಾಖಲೆ ಪಡೆದಿದ್ದಾರೆ.
ಡಿ.22ರಂದು ಬಿಜೆಪಿ ಸಭೆ: ಡಿ.21ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯಲ್ಲಿ ಮಹದಾಯಿ ವಿವಾದ ಪರಿಹಾರ ಸೂತ್ರ ಘೋಷಿಸುವ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಪರಿವರ್ತನಾ ಯಾತ್ರೆ ಡಿ.೨೨ಕ್ಕೆ ಮುಂದೂಡಲಾಗಿದೆ. ಗೋವಾ ಸಿಎಂ ಹಾಗೂ ಬಿಜೆಪಿ ವರಿಷ್ಠರ ಜತೆಗೆ ಸಭೆ ನಡೆಸಲು ರಾಜ್ಯ ನಾಯಕರು ತೀರ್ಮಾನಿಸಿದ್ದಾರೆ. ಗುರುವಾರ ಮಹತ್ವದ ಸಭೆ ಸಾಧ್ಯತೆ ಇದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications