ಹತ್ತಿಗೆ ಬೆಂಬಲ ಬೆಲೆ ನಿಗದಿ, ಯಾವ್ಯಾವ ತಳಿಗೆ ಎಷ್ಟು?-ಅಂಕಿಅಂಶಗಳ ವಿವರ
ಧಾರವಾಡ, ಡಿಸೆಂಬರ್, 11: ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಭಾರತ ಸರ್ಕಾರವು ಹತ್ತಿಯ ಎರಡು ಮೂಲ ತಳಿಗಳ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ. ಹಾಗಾದರೆ ಅಂಕಿಂಅಶಗಳ ವಿವರವನ್ನು ಇಲ್ಲಿ ತಿಳಿಯಿರಿ.
ಆ ಎರಡು ತಳಿಗಳೆಂದರೆ ಮಧ್ಯಮ ಸ್ಟೇಪಲ್ ಹತ್ತಿ 24.5 ರಿಂದ 25.5 ಮಿಮೀ ಉದ್ದವನ್ನು ಹೊಂದಿರುವ ಮೈಕ್ರೊನೈರ್ ಮೌಲ್ಯವು 4.3 ರಿಂದ 5.1 ಮತ್ತು ಉದ್ದವಾದ ಹತ್ತಿಗೆ ಸ್ಟೇಪಲ್. ಹತ್ತಿ ಸೀಸನ್ 2023-24 (ಅಕ್ಟೋಬರ್-ಸೆಪ್ಟೆಂಬರ್) ಫೇರ್ ಎವರೇಜ್ ಕ್ವಾಲಿಟಿಯ (ಎಫ್ಎಕ್ಯೂ) ನ್ಯೂ ಕ್ರಾಪ್ ಸೀಡ್ ಕಾಟನ್ (ಕಪಾಸ್) 3.5 ರಿಂದ 4.3 ಮೈಕ್ರೋನೈರ್ ಮೌಲ್ಯದೊಂದಿಗೆ 29.5 ರಿಂದ 30.5 ಮಿಮೀ ಉದ್ದ ಇರುತ್ತದೆ.

ಮಧ್ಯಮ ಹತ್ತಿಯ ಬೆಂಬಲ ಬೆಲೆ ಕ್ವಿಂಟಾಲ್ಗೆ 6,620 ರೂಪಾಯಿಗೆ ನಿಗದಿಪಡಿಸಲಾಗಿದೆ ಮತ್ತು ಉದ್ದವಾದ ಸ್ಟೇಪಲ್ ಹತ್ತಿಗೆ 7,020 ರೂಪಾಯಿ ನಿಗದಿಪಡಿಸಲಾಗಿದೆ. ಇನ್ನು ಶ್ರೀ ಲಕ್ಷ್ಮೀ ಕಾಟನ್ಸ್, ಪ್ಲಾಟ್ ನಂ: 135, 3ನೇ ಬೇಲೂರು ಇಂಡಸ್ಟ್ರೀಯಲ್ ಏರಿಯಾ, ಧಾರವಾಡ 580011 ಮತ್ತು ಅನಿಲಕುಮಾರ್ ಆ್ಯಂಡ್ ಕಂಪನಿ ಅಮ್ಮಿನಭಾವಿ ಧಾರವಾಡ 580201 ಹತ್ತಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಭಾರತೀಯ ಹತ್ತಿ ನಿಗಮ ಲಿ.ವ್ಯವಸ್ಥಾಪಕ ಪ್ರಮೋದ ಇವರ ಮೊ.ಸಂ. 9028155111 ಸಂಪರ್ಕಿಸಬಹುದು. ಹಾಗೂ ಹತ್ತಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಕಟಣೆ ತಿಳಿಸಿದೆ.
ಸಂಕಷ್ಟದಲ್ಲಿ ರೈತ
ಬೆಲೆ ಕುಸಿತದಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಪ್ರಸಕ್ತ ವರ್ಷ ಬರಗಾಲ ಆವರಿಸಿದ್ದರೂ ಈ ಭಾಗದಲ್ಲಿ ಅನೇಕ ರೈತರು ಹತ್ತಿ ಬೆಳೆದಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಸತತ ದರ ಕಡಿಮೆಯಾಗುತ್ತಿದ್ದು, ರೈತರು ಹತ್ತಿ ಇಟ್ಟುಕೊಳ್ಳಲು ಆಗದೆ, ಅತ್ತ ಮಾರಾಟ ಮಾಡಲೂ ಸಾಧ್ಯವಾಗದೆ ಸಮಸ್ಯೆ ಅನುಭವಿಸುತ್ತಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ಪ್ರತಿ ಕ್ವಿಂಟಲ್ಗೆ ₹7,800ಕ್ಕೂ ಹೆಚ್ಚಿದ್ದ ಹತ್ತಿ ಬೆಲೆ ಈಗ ₹6,500ಕ್ಕೆ ಕುಸಿದಿದೆ. ಇದರಿಂದ ಅಧಿಕ ಖರ್ಚು ಮಾಡಿ ಹತ್ತಿ ಬೆಳೆದ ರೈತರಿಗೆ ನಷ್ಟ ಉಂಟಾಗಿದೆ. ಈ ವರ್ಷ ಮಳೆ ಕೊರತೆಯಿಂದ ಇಳುವರಿ ನೆಲಕಚ್ಚಿದ್ದು ಒಂದೆಡೆಯಾದರೆ, ದರ ಕುಸಿತ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇನ್ನು ಹಾಕಿದ ದುಡ್ಡು ಕೈಗೆ ಬರುವುದು ಅನುಮಾನವಾಗಿದೆ. ದಿನೇ ದಿನೇ ದರ ಕುಸಿಯುತ್ತಿರುವ ಪರಿಣಾಮ ರೈತರಿಂದ ಹತ್ತಿ ಖರೀದಿಸಿದ ವರ್ತಕರೂ ನಷ್ಟ ಅನುಭವಿಸುತ್ತಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications