Santosh Lad: ಸಚಿವ ಬೆಂಕಿ ಕುಂಡ ಹೊತ್ತು ನೃತ್ಯ, ಕಳೆಗಟ್ಟಿದ ಶಿಕ್ಷಕರ ದಿನಾಚರಣೆ
ಧಾರವಾಡ, ಸೆಪ್ಟಂಬರ್ 06: ಸದಾ ತಮ್ಮ ಮಾತುಗಾರಿಕೆಯಿಂದ ವಿಭಿನ್ನವಾಗಿ ಗುರತಿಸಿಕೊಳ್ಳುವ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಶುಕ್ರವಾರ ಸಂಜೆ ಧಾರವಾಡದಲ್ಲಿ ಜರುಗಿದ ಜಿಲ್ಲಾಮಟ್ಟದ 'ಶಿಕ್ಷಕ ದಿನಾಚರಣೆ'ಯಲ್ಲಿ ಶಿಕ್ಷಕರು ಪ್ರಸ್ತುತಪಡಿಸಿದ ಜಾನಪದ ನೃತ್ಯದಲ್ಲಿ 'ಬೆಂಕಿ ಕುಂಡ'ವನ್ನು ತಲೆ ಮೇಲೆ ಹೊತ್ತು ನೃತ್ಯ ಮಾಡಿದರು. ಈ ಮೂಲಕ ಶಿಕ್ಷಕರ ಜೊತೆಗೆ ಸಂಭ್ರಮದ ಕ್ಷಣಗಳಲ್ಲಿ ಹೆಜ್ಜೆ ಹಾಕಿ ಜೊತೆಯಾದರು.
ಸಚಿವ ಸಂತೋಷ ಲಾಡ್ ಅವರು, ಶುಕ್ರವಾರ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮತ್ತು ವಿಶಿಷ್ಟವಾದ ಜೋಗುತಿ ಜಾನಪದ ನೃತ್ಯಕ್ಕೆ ಕಲಾವಿದ ಶಿಕ್ಷಕ, ಶಿಕ್ಷಿಯರ ಜೊತೆಗೆ ಬೆಂಕಿ ಕುಂಡವನ್ನು ತಲೆ ಮೇಲೆ ಹೊತ್ತು ನೃತ್ಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಶಿಕ್ಷಕ ಕಲಾವಿದರ ಸಿರಿಗಂಧ ಜಾನಪದ ಕಲಾಬಳಗದ ಪ್ರಕಾಶ ಕಂಬಳಿ ಮತ್ತು ಜಯಲಕ್ಷ್ಮಿ ಎಚ್. ಅವರು ತಮ್ಮ ಸಹ ಕಲಾ ಶಿಕ್ಷಕರೊಂದಿಗೆ ಜಾನಪದ ನೃತ್ಯ ಪ್ರದರ್ಶಿಸಿ, ಪ್ರೇಕ್ಷಕರ ಮನಸೆಳೆದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
ಕರ್ನಾಟಕ ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದೆ. ಅಂದು ಎಲ್ಲರೂ ಸೇರಿ ಸಂಭ್ರಮಿಸೋಣ. ಪ್ರತಿ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

31 ಜಿಲ್ಲೆಗಳಲ್ಲಿ ಮಾನವ ಸರಪಳಿ
ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವ ಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಸೂಚಿಸಿದರು.
ಜಿಲ್ಲೆಯ 51 ಕಿ.ಮೀ ಮಾರ್ಗದಲ್ಲಿ ಮಾನವಸರಪಳಿ ನಿರ್ಮಿಸಲಾಗುತ್ತಿದೆ. ಪ್ರತಿ ಕಿ.ಮೀರ್ ನೇಮಿಸುವ ನೊಡಲ್ ಅಧಿಕಾರಿ ಯೋಜಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ವಿವರಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications