ಮೊಬೈಲ್ ಟವರ್ ಏರಿ ಕುಳಿತ ಕಳ್ಳತನದ ಆರೋಪಿ: ನ್ಯಾಯಾಧೀಶರು ಸ್ಥಳಕ್ಕೆ ಬರುವಂತೆ ಪಟ್ಟು
ಧಾರವಾಡ, ಜನವರಿ 17: ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಜ್ಯುಬಿಲಿ ವೃತ್ತದ ಬಳಿ ಇರುವ ಮೊಬೈಲ್ ಟವರ್ ಏರಿರುವ ಈ ವ್ಯಕ್ತಿ ಟವರ್ನ ತುತ್ತ ತುದಿಗೆ ಹೋಗಿ ಕುಳಿತಿದ್ದಾನೆ.
ಮಂಗಳವಾರ ಮಧ್ಯಾಹ್ನನದ ವೇಳೆ ಈ ವ್ಯಕ್ತಿ ಮೊಬೈಲ್ ಟವರ್ ಏರಿ ಕುಳಿತಿದ್ದು, ಮೊದಲು ಈತನನ್ನು ಮಾನಸಿಕ ಅಸ್ವಸ್ಥನಿರಬಹುದು ಎಂದು ಶಂಕಿಸಲಾಗಿತ್ತು. ವ್ಯಕ್ತಿಯ ರಕ್ಷಣೆಗೆ ಮುಂದಾದ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ಹರಸಾಹಸ ಪಟ್ಟಿದ್ದಾರೆ.
ಮೊಬೈಲ್ ಟವರ್ ಏರಿ ಕುಳಿತಿದ್ದ ವ್ಯಕ್ತಿಯನ್ನು ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ರಕ್ಷಣೆ ಮಾಡಿ ಕೆಳಗಿಳಿಸಿದ್ದಾರೆ. ಈ ರೀತಿ ಟವರ್ ಏರಿ ಕುಳಿತ ವ್ಯಕ್ತಿ ಧಾರವಾಡ ಮೂಲದ ಜಾವೇದ್ ಎಂದು ತಿಳಿದುಬಂದಿದೆ.

ಜಾವೇದ್ ಕಳ್ಳತನ ಪ್ರಕರಣದ ಆರೋಪಿ ಎಂದು ಗೊತ್ತಾಗಿದ್ದು, ಈತ ನಗರದ ಹಲವು ಕಡೆಗಳಲ್ಲಿ ಕಳ್ಳತನ ಮಾಡಿದ್ದಾನೆ. ಅಲ್ಲದೇ ಈತನ ಮೇಲೆ ಅರೆಸ್ಟ್ ವಾರೆಂಟ್ ಸಹ ಇದೆ ಎನ್ನಲಾಗಿದೆ. ಹೀಗಾಗಿ ಈತ ಜಿಲ್ಲಾ ನ್ಯಾಯಾಧೀಶರು ಸ್ಥಳಕ್ಕೆ ಬರುವವರೆಗೂ ನಾನು ಟವರ್ ಬಿಟ್ಟು ಕೆಳಗೆ ಇಳಿದು ಬರುವುದಿಲ್ಲ ಎಂದು ಮೂರು ಗಂಟೆಗಳ ಕಾಲ ಪಟ್ಟು ಹಿಡಿದು ಅಲ್ಲೇ ಕುಳಿತಿದ್ದನು.
ಆತನ ರಕ್ಷಣೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ರಕ್ಷಣಾ ತಂಡದ ಇಬ್ಬರು ಸಿಬ್ಬಂದಿ ಟವರ್ ಏರಿ ಆತನಿಗೆ ನೀರು ಹಾಗೂ ಊಟವನ್ನು ಕೊಟ್ಟು ಕೆಳಗಿಳಿಯುವಂತೆ ಸೂಚನೆ ನೀಡಿದ್ದರು. ಆದರೆ, ಆ ವ್ಯಕ್ತಿ ಊಟ ಕೆಳಗೆ ಎಸೆದು ಕೇವಲ ನೀರು ಮಾತ್ರ ಕುಡಿದು ಕೆಳಗೆ ಇಳಿದು ಬರುವುದಿಲ್ಲ ಎಂದು ಹುಚ್ಚಾಟ ನಡೆಸಿದ್ದನು. ಅಲ್ಲದೇ ತನಗೆ ಸಿಗರೇಟ್ ಕೊಡುವಂತೆ ಬೇಡಿಕೆ ಇಟ್ಟಿದ್ದನು ಎನ್ನಲಾಗಿದೆ.
ಸತತ ಮೂರು ಗಂಟೆಗಳ ಬಳಿಕ ರಕ್ಷಣಾ ತಂಡದ ಸಿಬ್ಬಂದಿ ಆತನ ಮನವೊಲಿಸಿ ಸುರಕ್ಷಿತವಾಗಿ ಕೆಳಗಿಳಿಸಿ, ಆತನನ್ನು ಉಪನಗರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications