ಮೊಬೈಲ್ ಟವರ್ ಏರಿ ಕುಳಿತ ಕಳ್ಳತನದ ಆರೋಪಿ: ನ್ಯಾಯಾಧೀಶರು ಸ್ಥಳಕ್ಕೆ ಬರುವಂತೆ ಪಟ್ಟು
ಧಾರವಾಡ, ಜನವರಿ 17: ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಜ್ಯುಬಿಲಿ ವೃತ್ತದ ಬಳಿ ಇರುವ ಮೊಬೈಲ್ ಟವರ್ ಏರಿರುವ ಈ ವ್ಯಕ್ತಿ ಟವರ್ನ ತುತ್ತ ತುದಿಗೆ ಹೋಗಿ ಕುಳಿತಿದ್ದಾನೆ.
ಮಂಗಳವಾರ ಮಧ್ಯಾಹ್ನನದ ವೇಳೆ ಈ ವ್ಯಕ್ತಿ ಮೊಬೈಲ್ ಟವರ್ ಏರಿ ಕುಳಿತಿದ್ದು, ಮೊದಲು ಈತನನ್ನು ಮಾನಸಿಕ ಅಸ್ವಸ್ಥನಿರಬಹುದು ಎಂದು ಶಂಕಿಸಲಾಗಿತ್ತು. ವ್ಯಕ್ತಿಯ ರಕ್ಷಣೆಗೆ ಮುಂದಾದ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ಹರಸಾಹಸ ಪಟ್ಟಿದ್ದಾರೆ.
ಮೊಬೈಲ್ ಟವರ್ ಏರಿ ಕುಳಿತಿದ್ದ ವ್ಯಕ್ತಿಯನ್ನು ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ರಕ್ಷಣೆ ಮಾಡಿ ಕೆಳಗಿಳಿಸಿದ್ದಾರೆ. ಈ ರೀತಿ ಟವರ್ ಏರಿ ಕುಳಿತ ವ್ಯಕ್ತಿ ಧಾರವಾಡ ಮೂಲದ ಜಾವೇದ್ ಎಂದು ತಿಳಿದುಬಂದಿದೆ.

ಜಾವೇದ್ ಕಳ್ಳತನ ಪ್ರಕರಣದ ಆರೋಪಿ ಎಂದು ಗೊತ್ತಾಗಿದ್ದು, ಈತ ನಗರದ ಹಲವು ಕಡೆಗಳಲ್ಲಿ ಕಳ್ಳತನ ಮಾಡಿದ್ದಾನೆ. ಅಲ್ಲದೇ ಈತನ ಮೇಲೆ ಅರೆಸ್ಟ್ ವಾರೆಂಟ್ ಸಹ ಇದೆ ಎನ್ನಲಾಗಿದೆ. ಹೀಗಾಗಿ ಈತ ಜಿಲ್ಲಾ ನ್ಯಾಯಾಧೀಶರು ಸ್ಥಳಕ್ಕೆ ಬರುವವರೆಗೂ ನಾನು ಟವರ್ ಬಿಟ್ಟು ಕೆಳಗೆ ಇಳಿದು ಬರುವುದಿಲ್ಲ ಎಂದು ಮೂರು ಗಂಟೆಗಳ ಕಾಲ ಪಟ್ಟು ಹಿಡಿದು ಅಲ್ಲೇ ಕುಳಿತಿದ್ದನು.
ಆತನ ರಕ್ಷಣೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ರಕ್ಷಣಾ ತಂಡದ ಇಬ್ಬರು ಸಿಬ್ಬಂದಿ ಟವರ್ ಏರಿ ಆತನಿಗೆ ನೀರು ಹಾಗೂ ಊಟವನ್ನು ಕೊಟ್ಟು ಕೆಳಗಿಳಿಯುವಂತೆ ಸೂಚನೆ ನೀಡಿದ್ದರು. ಆದರೆ, ಆ ವ್ಯಕ್ತಿ ಊಟ ಕೆಳಗೆ ಎಸೆದು ಕೇವಲ ನೀರು ಮಾತ್ರ ಕುಡಿದು ಕೆಳಗೆ ಇಳಿದು ಬರುವುದಿಲ್ಲ ಎಂದು ಹುಚ್ಚಾಟ ನಡೆಸಿದ್ದನು. ಅಲ್ಲದೇ ತನಗೆ ಸಿಗರೇಟ್ ಕೊಡುವಂತೆ ಬೇಡಿಕೆ ಇಟ್ಟಿದ್ದನು ಎನ್ನಲಾಗಿದೆ.
ಸತತ ಮೂರು ಗಂಟೆಗಳ ಬಳಿಕ ರಕ್ಷಣಾ ತಂಡದ ಸಿಬ್ಬಂದಿ ಆತನ ಮನವೊಲಿಸಿ ಸುರಕ್ಷಿತವಾಗಿ ಕೆಳಗಿಳಿಸಿ, ಆತನನ್ನು ಉಪನಗರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications