ಚೀನಾದಿಂದ ಸಂಕಷ್ಟ: ಕರ್ನಾಟಕದಲ್ಲಿ ಕುಸಿದ ಜವಾರಿ ಬೆಳ್ಳುಳ್ಳಿ ಬೆಲೆ!
ಕರ್ನಾಟಕದ ಜವಾರಿ ಬೆಳ್ಳುಳ್ಳಿಗೆ ಚೀನಾದಿಂದ ಇದೀಗ ಸಂಕಷ್ಟ ಎದುರಾಗಿದ್ದು. ರಾಜ್ಯದ ಬೆಳ್ಳುಳ್ಳಿ ಬೆಳೆಗಾಗರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು ನೆರೆಯ ಚೀನಾದಿಂದ ತೀವ್ರ ಪೈಪೋಟಿ ಎದುರಾಗಿದ್ದು. ರಾಜ್ಯದ ಬೆಳ್ಳುಳ್ಳಿ ಬೆಳೆಗಾರರು ಸಂಕಷ್ಟ ಎದುರಾಗಿದೆ. ಚೀನಾದ ಹೈಬ್ರಿಡ್ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿರುವುದರಿಂದ ಸ್ಥಳೀಯವಾಗಿ ಬೆಳೆದ ಜವಾರಿ ಬೆಳ್ಳುಳ್ಳಿ ದರ ಕುಸಿತ ಕಂಡಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಧಾರವಾಡ ಜಿಲ್ಲೆಯ ಬಹುತೇಕ ರೈತರು ಈಗ ಬೆಳ್ಳುಳ್ಳಿ ಬೆಳೆದು ಕಂಗಾಲಾಗಿದ್ದಾರೆ. ಅದರಲ್ಲೂ ನವಲಗುಂದ ತಾಲ್ಲೂಕಿನ ಬೆಳಹಾರ, ಶಿರಕೋಳ, ಮೊರಬ, ಕುಂದಗೋಳ ತಾಲ್ಲೂಕಿನ ಗುಡಗೇರಿ, ಗೌಡಗೇರಿ, ಹರಲಾಪುರ, ಸಂಕ್ಲೀಪುರ, ಕಳಸ ,ಧಾರವಾಡ ತಾಲ್ಲೂಕಿನ ನರೇಂದ್ರ, ಮುಮ್ಮಿಗಟ್ಟಿ, ನೀರಲಕಟ್ಟಿ ಹಾಗೂ ಗರಗ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಿಂಗಾರು ಬೆಳೆಯಾಗಿ ಬೆಳ್ಳುಳ್ಳಿ ಬೆಳೆಯಲಾಗಿದೆ.

ಒಂದೂವರೆ ಎಕರೆಯಲ್ಲಿ ಬೆಳ್ಳುಳ್ಳಿ ಬೆಳೆದಿದ್ದು, ಬೀಜ, ಗೊಬ್ಬರ ಸೇರಿ 1.30 ಲಕ್ಷ ವೆಚ್ಚ ಮಾಡಿದ್ದೇನೆ. ಈಗ ದರ ಕುಸಿದಿದ್ದು, ಹಾಕಿದ ಬಂಡವಾಳವೂ ಬಾರದ ಸ್ಥಿತಿ ಇದೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಬೆಳ್ಳುಳ್ಳಿ ಬೆಳೆಗೂ ಸೂಕ್ತ ಧಾರಣಿ ಇಲ್ಲ. ಇದರಿಂದ ರೈತರು ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಇಲ್ಲಿನ ಬೆಳ್ಳುಳ್ಳಿ ಬೆಳೆಗಾರರು ಹೇಳಿದ್ದಾರೆ.
ಗರಿಷ್ಠ ಬೆಲೆಗೆ ಮಾರಾಟವಾಗಿತ್ತು: ಇನ್ನು ಹುಬ್ಬಳ್ಳಿ ಹಾಗೂ ಹುಬ್ಬಳ್ಳಿಯ ಸುತ್ತಮುತ್ತಲಿನ ಭಾಗದಲ್ಲಿ ಈಚೆಗೆ ಬೆಳ್ಳುಳ್ಳಿ ಬೆಲೆಯು ಭರ್ಜರಿ ಏರಿಕೆ ಕಂಡಿತ್ತು. ಈಚೆಗೆ ಬೆಳ್ಳುಳ್ಳಿ ಬೆಲೆಯು ಪ್ರತಿ ಕೆಜಿಗೆ ಈ ಭಾಗದಲ್ಲಿ 450ರಿಂದ 500 ರೂಪಾಯಿಯ ವರೆಗೆ ತಲುಪಿತ್ತು. ಹವಾಮಾನ ವೈಪರೀತ್ಯದಿಂದ ಇತ್ತೀಚಿನ ದಿನಗಳಲ್ಲಿ ಬೆಳ್ಳುಳ್ಳಿ ಬೆಲೆ ಗಗನಮುಖಿಯಾಗಿತ್ತು. ಆದರೆ, ಇದರಿಂದ ಬೆಳ್ಳುಳ್ಳಿ ಬೆಳೆದ ರೈತರಿಗೆ ನೇರವಾಗಿ ಲಾಭವಾಗಿರಲಿಲ್ಲ. ಇದೀಗ ಬೆಳ್ಳುಳ್ಳಿ ಬೆಲೆ ಕುಸಿತ ಕಂಡಿರುವುದು ರೈತರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ.

ಚೀನಾದ ಹೈಬ್ರಿಡ್ ಬೆಳ್ಳುಳ್ಳಿ ನಿಲ್ಲಸಲು ಆಗ್ರಹ: ಇನ್ನು ಧಾರವಾಡ ಹಾಗೂ ವಿವಿಧ ಭಾಗದಲ್ಲಿ ಚೀನಾದ ಹೈಬ್ರಿಡ್ ಬೆಳ್ಳುಳ್ಳಿ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ಇದರಿಂದ ರೈತರಿಗೆ ಸಮಸ್ಯೆ ಆಗುತ್ತಿದೆ. ಅದನ್ನು ತಪ್ಪಿಸುವ ಉದ್ದೇಶದಿಂದ ಚೀನಾದ ಹೈಬ್ರಿಡ್ ಬೆಳ್ಳುಳ್ಳಿ ಆಮದು ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು ಎನ್ನುವ ಆಗ್ರಹ ಸಹ ಕೇಳಿ ಬಂದಿದೆ.
ಹವಾಮಾನ ವೈಪರೀತ್ಯದಿಂದ ಸಂಕಷ್ಟ: ಇನ್ನು ಈ ಭಾಗದ ಬೆಳ್ಳುಳ್ಳಿ ಬೆಳಗಾರರಿಗೆ ಈಚೆಗೆ ಹವಾಮಾನದಲ್ಲಿ ವೈಪರೀತ್ಯವುಂಟಾಗಿ ಭಾರೀ ಸಂಕಷ್ಟ ಎದುರಾಗಿತ್ತು. ಇದೀಗ ಇನ್ನೊಂದು ಸಮಸ್ಯೆ ಎದುರಾಗಿದೆ. ಧಾರವಾಡದ ಜವಾರಿ ಬೆಳ್ಳುಳ್ಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಆದರೆ, ಕರ್ನಾಟಕದ ಜವಾರಿ ಬೆಳ್ಳುಳ್ಳಿಗೆ ಚೀನಾದ ಹೈಬ್ರಿಡ್ ಬೆಳ್ಳುಳ್ಳಿ ತೀವ್ರ ಪೈಪೋಟಿ ನೀಡುತ್ತಿದೆ. ಚೀನಾದ ಹೈಬ್ರಿಡ್ ಬೆಳ್ಳುಳ್ಳಿ ಬೆಲೆಯು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ ಕರ್ನಾಟಕದ ಬೆಳ್ಳುಳ್ಳಿ ಬೆಲೆಗೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗಿದೆ. ಇನ್ನು ಇದರಿಂದ ಕರ್ನಾಟಕದ ಬೆಳಗಾರರಿಗೆ ಸಂಕಷ್ಟ ಎದುರಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications