ಧಾರವಾಡ-ಉಣಕಲ್ ಜೋಡಿಹಳಿ ರೈಲು ಸಂಚಾರಕ್ಕೆ ಮುಕ್ತ
ಧಾರವಾಡ, ಅಕ್ಟೋಬರ್ 20 : ಧಾರವಾಡ-ಉಣಕಲ್ ನಡುವಿನ ಜೋಡಿಹಳಿಯಲ್ಲಿ ಗೂಡ್ಸ್ ಮತ್ತು ಪ್ರಯಾಣಿಕರ ರೈಲು ಸಂಚಾರಕ್ಕೆ ಸುರಕ್ಷತಾ ಆಯುಕ್ತರು ಒಪ್ಪಿಗೆ ನೀಡಿದ್ದಾರೆ. ಇದರಿಂದಾಗಿ ಹುಬ್ಬಳ್ಳಿ-ಧಾರವಾಡ ನಡುವೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಸಹಾಯಕವಾಗಲಿದೆ.
ನೈಋತ್ಯ ರೈಲ್ವೆ ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಅಕ್ಟೋಬರ್ 14ರಂದು ಧಾರವಾಡ-ಉಣಕಲ್ ನಡುವಿನ 17 ಕಿ. ಮೀ. ಜೋಡಿ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ಪರಿಶೀಲನೆ ನಡೆಸಿದ್ದರು. ಈಗ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ.
ಹೊಸಪೇಟೆ-ವಾಸ್ಕೋ ನಡುವಿನ ಜೋಡಿಹಳಿ ಯೋಜನೆಯ ಭಾಗವಾಗಿ ಹುಬ್ಬಳ್ಳಿ-ಧಾರವಾಡ ನಡುವಿನ ಜೋಡಿಹಳಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ರೈಲು ನಂಬರ್ 02630 ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 16ರಂದು ಮೊದಲ ಬಾರಿಗೆ ಹೊಸ ಮಾರ್ಗದಲ್ಲಿ ಸಂಚಾರ ನಡೆಸಿದೆ.

ಉಣಕಲ್ನಲ್ಲಿ ಹೊಸ ರೈಲು ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. ಹೊಸ ಫ್ಲಾಟ್ ಫಾರಂ, ಮೇಲು ಸೇತುವೆಗಳನ್ನು ನಿರ್ಮಾಣ ಮಾಡಲಾಗಿದೆ. ಧಾರವಾಡ-ಉಣಕಲ್, ಉಣಕಲ್-ಹುಬ್ಬಳ್ಳಿ ಎಂದು ಎರಡು ಭಾಗ ಮಾಡಿಕೊಂಡು ಜೋಡಿಹಳಿ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿತ್ತು.
ಉಣಕಲ್-ಹುಬ್ಬಳ್ಳಿ ನಡುವಿನ ಜೋಡಿಹಳಿ ಕಾಮಗಾರಿ 2021ರ ಜನವರಿಯಲ್ಲಿ ಪೂರ್ಣಗೊಳ್ಳಲಿದೆ. ಆಗ ಅವಳಿ ನಗರಗಳ ನಡುವಿನ ರೈಲು ಸಂಚಾರದ ಅವಧಿ 20 ರಿಂದ 30 ನಿಮಿಷಕ್ಕೆ ಇಳಿಕೆಯಾಗಲಿದೆ. ಬೇರೆ ರೈಲುಗಳು ಬಂದರೆ ಕ್ರಾಸಿಂಗ್ಗಾಗಿ ಕಾಯುವುದು ತಪ್ಪಲಿದೆ.
ನೈಋತ್ಯ ರೈಲ್ವೆ ಧಾರವಾಡ-ಉಣಕಲ್ ನಡುವಿನ ಜೋಡಿಹಳಿ ನಿರ್ಮಾಣ ಕಾಮಗಾರಿಯನ್ನು 62.17 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿತ್ತು. ಹೊಸಪೇಟೆ-ವಾಸ್ಕೋ ನಡುವಿನ ಕಾಮಗಾರಿಯ ಮೊತ್ತ 1,200 ಕೋಟಿ ರೂ.ಗಳು.
-
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications