ಮಣಿಪುರ ಅಷ್ಟೇ ಅಲ್ಲ, ಪಶ್ಚಿಮ ಬಂಗಾಳ ಗಲಭೆ ಸಹ ಅಧಿವೇಶನದಲ್ಲಿ ಚರ್ಚೆ ಆಗಲಿ- ಶೋಭಾ ಕರಂದ್ಲಾಜೆ
ಹುಬ್ಬಳ್ಳಿ, ಜುಲೈ 22: ಮಣಿಪುರದಲ್ಲಿ ಮಹಿಳೆಯರನ್ನ ಬೆತ್ತಲೆ ಮಾಡಿದ್ದು ದೇಶಕ್ಕೆ ನೋವು ತರುವಂತಹದ್ದು. ಈ ಪ್ರಕರಣ ಹಾಗೂ ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಯಲ್ಲಿ ನಡೆದ ಸಂಘರ್ಷ ಸಹ ಅಧಿವೇಶನ ಹಾಗೂ ಮಾಧ್ಯಮಗಳಲ್ಲಿ ಪಾರದರ್ಶಕವಾಗಿ ಚರ್ಚೆ ಆಗಬೇಕು ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಆಗ್ರಹಿಸಿದರು.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಣಿಪುರದಲ್ಲಿ ಜಾತಿ ಸಂಘರ್ಷ ನಡೆಯುತ್ತಿದ್ದು, ಈಗ ಸತ್ಯ ಹೊರ ಬರುತ್ತಿದೆ. ಮಣಿಪುರದಲ್ಲಿ ಬೇರೆ ಬೇರೆ ಜಾತಿಗಳ ಮಧ್ಯೆ ಸಂಘರ್ಷ ನಡೆಯುತ್ತಿದೆ. ಎಲ್ಲರೂ ಒಗ್ಗೂಡಿಸಿ ಹೋರಾಟ ಮಾಡಬೇಕಾಗಿದೆ. ಕೇವಲ ಬಿಜೆಪಿ, ಕಾಂಗ್ರೆಸ್ ಮತ್ತು ಜೆಸಿಎಸ್ ಒಂದೇ ಎರಡೇ ಪಕ್ಷ ಅಲ್ಲಾ ಎಂದರು.

ಮಣಿಪುರದ ಭಾಗದಲ್ಲಿ ಬೇರೆ ಬೇರೆ ದೇಶಗಳಿಂದ ನುಸುಳುಕೋರರು ಬರುತ್ತಿದ್ದಾರೆ. ಇದು ಸರಿಯಲ್ಲ. ಇದರಲ್ಲಿ ಯಾವುದೇ ರಾಜಕೀಯ ಮಾಡಬಾರದು. ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥಿತೆ ಕಾಪಾಕೊಳ್ಳಬಹುದು. ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.
ಉತ್ತರ ಭಾರತದಲ್ಲಿ ಸಾಕಷ್ಟು ಆತಂಕಕಾರಿ ಬೆಳವಣಿಗೆ ನಡೆಯುತ್ತಿದೆ. ಪಂಚಾಯತ್ ಚುನಾವಣೆಯಲ್ಲಿನ ಗಲಭೆ ಹಾಗೂ ಕೊಲೆ ಸಹ ಚರ್ಚೆ ಆಗಬೇಕು ಎಂದರು.
ಜ್ಞಾನವಾಪಿ ಮಸೀದಿ ಸರ್ವೇಗೆ ಕೋರ್ಟ್ ಅನುಮತಿ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಅದು ಜ್ಞಾನವಾಪಿ ಮಸೀದಿ ವಾರಾಣಾಸಿ ಕಾಶಿಯ ಒಂದು ಭಾಗ. ಶಿವನ ಮೊದಲ ಸ್ಥಾನ ವಾರಾಣಾಸಿ. ಜೀವನದಲ್ಲಿ ಒಂದು ದಿನವಾದರೂ ಕಾಶಿ ಯಾತ್ರೆಗೆ ಹೋಗಬೇಕು ಎನ್ನುವುದು ಹಿಂದೂಗಳ ಅಪೇಕ್ಷೆ ಆಗಿದೆ ಎಂದರು.

ಕಾಶಿಯ ಹಲವಾರು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಲಾಗಿತ್ತು. ಧ್ವಂಸ ಮಾಡಿದ ದೇವಸ್ಥಾನ, ದೇವಾಲಯ ಕಂಬಗಳ ಮೇಲೆ ಮಸೀದಿಗಳ ನಿರ್ಮಾಣ ಮಾಡಲಾಗಿತ್ತು. ಇನ್ನು ಕಾಶಿಯ ಜ್ಞಾನವಾಪಿ ಮಸೀದಿ ಕುರಿತು ನ್ಯಾಯಾಲಯದ ತೀರ್ಪು ನಮ್ಮ ಪರ ಬರುವ ವಿಶ್ವಾಸ ಇದೆ. ನಮ್ಮ ಹಿರಿಯರು ಜ್ಞಾನವಾಪಿ ಮಸೀದಿಯಲ್ಲಿ ಶಿವನ ಆರಾಧನೆ ಮಾಡುತ್ತಿದ್ದರು. ಮುಂದೆ ನಮಗೂ ಶಿವನ ಆರಾಧನೆ ಮಾಡುವ ಕಾಲ ಬರುತ್ತದೆ ಎಂದು ಹೇಳಿದರು.
ಭಾರತೀಯರು ಎಂದೂ ಬೇರೆ ಧರ್ಮಕ್ಕೆ ಭೇಧ ಭಾವ ಮಾಡಿಲ್ಲ. ಯಾರೇ, ಯಾವುದೇ ಧರ್ಮವರೂ ಭಾರತಕ್ಕೆ ಬಂದರೆ ಅವರಿಗೆ ಆಶ್ರಯವನ್ನು ಕೊಟ್ಟವರು. ಜ್ಞಾನವಾಪಿಯ ಸರ್ವೇ ಸ್ವಾಗತಾರ್ಹ. ಪ್ರಾಚೀನ ಕಾಲದಿಂದಲೂ ಹಿಂದೂಗಳ ದೇವಾಲಯ ಕಾಶಿ ವಿಶ್ವನಾಥನ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದು ,ತನಿಖೆ ನಡೆಯಬೇಕು ಒತ್ತಾಯ ಮಾಡುತ್ತಿದ್ದರು. ಈಗ ಸರ್ವೇಗೆ ಅನುಮತಿ ಸಿಕ್ಕಿರುವುದು ನ್ಯಾಯಕ್ಕೆ ಸಿಕ್ಕ ಜಯ. ಮಸೀದಿ ಸರ್ವೇಗಾಗಿ ಕೋರ್ಟ್ಗೆ ಹೋಗಿದ್ದರು. ಈಗ ಕೋರ್ಟ್ ಸರ್ವೇಗೆ ಅನುಮತಿ ನೀಡಿದೆ. ಒಳ್ಳೆಯ ವಿಚಾರ. ಇದರಿಂದ ಹಿಂದೂಗಳಿಗೆ ಅಷ್ಟೇ ಅಲ್ಲದೇ, ಅಲ್ಲಿನ ಜನರಿಗೆ ನ್ಯಾಯ ಸಿಕ್ಕಿದೆ ಎಂದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications