ಹುಬ್ಬಳ್ಳಿಯಲ್ಲಿ ಬಿಎಸ್ಸೆನ್ನೆಲ್ ಲ್ಯಾಂಡ್ ಲೈನ್, ಬ್ರಾಡ್ ಬ್ಯಾಂಡ್ ಬಂದ್
ಹುಬ್ಬಳ್ಳಿ, ಜೂ.6- ನಗರದಲ್ಲಿ ಸೋಮವಾರ ಬೆಳಗ್ಗೆಯಿಂದ ಸುಮಾರು 500 ಕ್ಕೂ ಹೆಚ್ಚು ಬಿಎಸ್ಸೆನ್ನೆಲ್ ಗ್ರಾಹಕರು ದೂರವಾಣಿ ಮತ್ತು ಇಂಟರನೆಟ್ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ.
ಈ ಬಗ್ಗೆ ದೂರಸಂಪರ್ಕ ಇಲಾಖೆಯವರನ್ನು ಕೇಳಿದರೆ ಇಂದು ಸಂಜೆಯೊಳಗೆ ಸರಿ ಮಾಡುತ್ತೇವೆ ಎಂದು ಹೇಳಿದ್ದು ಜನರಿಗೆ ಇಲಾಖೆಯ ಭರವಸೆ ಮೇಲಲೆ ನಂಬಿಕೆ ಇಲ್ಲ.[ಪ್ರಹ್ಲಾದ್ ಜೋಶಿ ವಿರುದ್ಧ ಬಿಎಸ್ಎನ್ಎಲ್ ನೌಕರರ ಪ್ರತಿಭಟನೆ]

ಆಗಿದ್ದೇನು : ನಗರದೆಲ್ಲೆಡೆ ವಿದ್ಯುತ್ ತಂತಿಗಳನ್ನು ನೆಲದಲ್ಲಿ ಅಳವಡಿಸುವ ಕಾಮಗಾರಿ ಹೆಸ್ಕಾಂನಿಂದ ಅತೀ ವೇಗದಲ್ಲಿ ನಡೆದಿದೆ. ಹೀಗಾಗಿ ಹಲವಾರು ಕಡೆಗಳಲ್ಲಿ ನೆಲ ಅಗೆದು ಈಗಾಗಲೇ ಅರ್ಧಕ್ಕೆ ಬಿಡಲಾಗಿದೆ. ಇದೇ ರೀತಿ ಇಂದು ಇಂಡಸ್ಟ್ರೀಯಲ್ ಎಸ್ಟೇಟ್ ಹತ್ತಿರದ ಮೈಕ್ರೋಫೀನೀಶ್ ಫ್ಯಾಕ್ಟರಿ ಬಳಿ ಜೆಸಿಬಿಯಿಂದ ನೆಲ ಅಗೆಯುವಾಗ ಟೆಲಿಪೋನ್ ಲೈನ್ ಕಟ್ಟಾಗಿದೆ.
ಹೀಗಾಗಿ ನೂರಾರು ಗ್ರಾಹಕರು ಪರದಾಡುತ್ತಿದ್ದಾರೆ. ಈ ಕುರಿತು ಬಿಎಸ್ಸೆನ್ನೆಲ್ ಕಚೇರಿಗೆ ವಿಪರೀತ ದೂರುಗಳು ಬರುತ್ತಿದ್ದಂತೆಯೇ ಆಗಿದ್ದೇನು ಎಂದು ಹಿರಿಯ ಅಧಿಕಾರಿಗಳು ಪರಿಶೀಲಿಸಿದಾಗ ವೈರ್ ಕಟ್ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ನಂತರ ನಿಧಾನವಾಗಿ ವೈರ್ ರಿಪೇರಿ ಮಾಡಲು ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ತೆರಳುತ್ತಿದ್ದಾರೆ.[ರಾಷ್ಟ್ರೀಯ ಹೆದ್ದಾರಿಯಾಗಲಿರುವ 14 ರಾಜ್ಯ ಹೆದ್ದಾರಿಗಳ ಪಟ್ಟಿ]
ಭಾರೀ ಪ್ರಚಾರ : ಭಾರತೀಯ ದೂರ ಸಂಪರ್ಕ ಇಲಾಖೆ ಹೊಸ ದೂರವಾಣಿ ಸಂಪರ್ಕ ಪಡೆಯುವಂತೆ ಸಾರ್ವಜನಿಕರಿಗೆ ಮಾಧ್ಯಮಗಳ ಮೂಲಕ ಪ್ರಚಾರ ಮಾಡುತ್ತದೆ. ಆದರೆ ಇದ್ಯ ವ್ಯವಸ್ಥೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಹೇಳುವುದಿಲ್ಲ ಇದೆಂಥಾ ವಿಪರ್ಯಾಸ. ಒಟ್ಟಿನಲ್ಲಿ ದೂರವಾಣಿ ಪಡೆದುಕೊಂಡ ಗ್ರಾಹಕರ ಇಂಗು ತಿಂದ ಮಂಗನಂತಾಗಿ ಖಾಸಗಿ ಸಂಪರ್ಕ ಪಡೆದುಕೊಂಡಿದ್ದರೆ ಒಳ್ಳೇಯದಿತ್ತಲ್ಲವೇ ಎನ್ನುತ್ತಿದ್ದಾರೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications