ಗಂಗೂಬಾಯಿ ಹಾನಗಲ್ ಗಾಯನಕ್ಕೆ ಮರುಳಾದ ಪಂ.ಜಸರಾಜ್
ಹುಬ್ಬಳ್ಳಿ, ಜನವರಿ, 19: 'ಸಂಗೀತ ಲೋಕದ ದಿಗ್ಗಜೆ ಡಾ.ಗಂಗೂಬಾಯಿ ಹಾನಗಲ್ ಅವರು ರಾಮನಾಮ ಹಾಡಿನ ಮೂಲಕ ನನಗೆ ಪರಿಚಯವಾದರು. ಇಂದು ಅವರ ಮಗನಾಗಿ ಪ್ರಶಸ್ತಿ ಸ್ವೀಕರಿಸುತ್ತಿರುವ ನನ್ನಲ್ಲಿ ಧನ್ಯತಾಭಾವ ನನ್ನಲ್ಲಿ ಮೂಡಿದೆ' ಎಂದು ಹಿಂದೂಸ್ತಾನಿ ಸಂಗೀತಗಾರ ಪದ್ಮವಿಭೂಷಣ ಪಂಡಿತ ಜಸರಾಜ್ ಹೇಳಿದರು.
ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ 8ನೇ ಗಂಗೂಬಾಯಿ ಹಾನಗಲ್ ಸಂಗೀತ ಮಹೋತ್ಸವದಲ್ಲಿ ಜೀವಮಾನ ಸಾಧನಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, 'ತಾಯಿ ಗಂಗೂಬಾಯಿ ಸ್ವರ್ಗದಲ್ಲಿಂದಲೇ ತಮ್ಮ ಮಗನಿಗೆ ಪ್ರಶಸ್ತಿ ದೊರಕಿರುವ ಬಗ್ಗೆ ಖಂಡಿತವಾಗಿಯೂ ಖುಷಿ ಪಡುತ್ತಾರೆ' ಎಂದು ಭಾವುಕರಾದರು.['ಹಾಡು ಎಂದಕೂಡಲೇ ಹಾಡದು ಗಾನ ಕೋಗಿಲೆ']

ಹಲವಾರು ಪ್ರಶಸ್ತಿ ಪಡೆದಿರುವ ನನಗೆ ಈ ಗಂಗೂಬಾಯಿ ಹಾನಗಲ್ ಜೀವಮಾನ ಸಾಧನಾ ಪ್ರಶಸ್ತಿ ಲಭಿಸಿರುವುದು ನನ್ನ ಪುಣ್ಯ ಮತ್ತು ಇಂತಹ ದೊಡ್ಡ ಪ್ರಶಸ್ತಿ ಬೇರೆ ಯಾವ ಪ್ರಶಸ್ತಿಯೂ ನನಗೆ ದಕ್ಕಿಲ್ಲ ಎಂದರು. ಗಂಗೂಬಾಯಿ ಅವರ ಪುತ್ರ ನಾರಾಯಣ ಹಾನಗಲ್ ಪಂಡಿತ ಜಸರಾಜ್ ಅವರಿಗೆ ಪ್ರಶಸ್ತಿ ಫಲಕ, ಫಲಪುಷ್ಪ ಹಾಗೂ 1.5 ಲಕ್ಷ ರೂ. ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು.
ನಂತರ ಪಂ.ಜಸರಾಜ್ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ವಿದುಷಿ ಅನುಪಮಾ ಭಾಗವತ್ ಸಿತಾರ ವಾದನ ನುಡಿಸಿದರು. ಡಾ.ಶಾಮಸುಂದರ್ ಕಾಮತ್, ಜಿ.ಎಂ.ಗೋಕರ್ಣ, ಹರೀಶ ಕಪಾಡಿಯಾ ಮತ್ತಿತರರು ಉಪಸ್ಥಿತರಿದ್ದರು.[ಗಂಗೂಬಾಯಿ ಹಾನಗಲ್ ಮ್ಯೂಸಿಯಂ ಧಾರ್ವಾಡ]

ಪಂಡಿತ ಜಸರಾಜ್ ಯಾರು?
ಇವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಪ್ರಸಿದ್ದಿ ಪಡೆದಿದ್ದಾರೆ. ಇವರು ಮೂಲತಃ ಹರಿಯಾಣದ ಪಿಲಿಮಂಡೋರಿ ಎಂಬಲ್ಲಿ ಜನವರಿ 28ರಂದು 1930ರಲ್ಲಿ ಜನಿಸಿದರು. ಇವರಿಗೆ ಪದ್ಮವಿಭೂಷಣ, ಪದ್ಮಭೂಷಣ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಸಂಗೀತ ಕಲಾ ರತ್ನ ಪ್ರಶಸ್ತಿ, ಲತಾ ಮಂಗೇಶ್ಕರ್, ಸಂಗೀತ ನಾಟಕ ಅಕಾಡೆಮಿ ಫೆಲೋಶಿಪ್ ಪ್ರಶಸ್ತಿ ಲಭಿಸಿದೆ.[ಸಿಂಗಪುರದಲ್ಲಿ ಜ. 23ರಂದು ಸಂಗೀತದ 'ಲಯತರಂಗ']
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications