ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫಲಾನುಭವಿ ಪತ್ತೆಗೆ ಗ್ರಾಮ ಲೆಕ್ಕಾಧಿಕಾರಿಯ ವಿಶಿಷ್ಟ ಪ್ರಯತ್ನ

|
Google Oneindia Kannada News

ಧಾರವಾಡ, ಮಾರ್ಚ್ 25; ಸರ್ಕಾರದಿಂದ ಸಿಗುವ ವಿವಿಧ ಪಿಂಚಣಿ ಹಾಗೂ ಸೌಲಭ್ಯಗಳ ದುರುಪಯೋಗ ತಡೆಯಲು ಮತ್ತು ಪಿಂಚಣಿ ಪಡೆಯುತ್ತಿರುವ ಪಲಾನುಭವಿಗಳಿಗೆ ಮಧ್ಯವರ್ತಿಗಳ ತೊಂದರೆ ಇಲ್ಲದಂತೆ ಮಾಡಲು ಗ್ರಾಮ ಲೆಕ್ಕಾಧಿಕಾರಿಗಳಿಗೆ ಧಾರವಾಡ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಫಲಾನುಭವಿಗಳ ಖಾತೆಗೆ ನೇರವಾಗಿ ಪಿಂಚಣಿ ಜಮೆ ಮಾಡುವುದಕ್ಕಾಗಿ ಆಧಾರ್ ಜೋಡಣೆ ಮಾಡಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದು, ಧಾರವಾಡ ತಹಶೀಲ್ದಾರ್ ಡಾ. ಸಂತೋಷ ಬಿರಾದಾರ ಅವರು ಪ್ರತಿದಿನ ಕಾರ್ಯಗಳ ಪ್ರಗತಿ ಪರಿಶೀಲನೆ ಮಾಡುತ್ತಿದ್ದಾರೆ.

 ಎಲ್‌ಐಸಿ: 1 ಲಕ್ಷ ರೂ. ಹೂಡಿಕೆ ಮಾಡಿ ಪಿಂಚಣಿ ಪಡೆಯಿರಿ! ಎಲ್‌ಐಸಿ: 1 ಲಕ್ಷ ರೂ. ಹೂಡಿಕೆ ಮಾಡಿ ಪಿಂಚಣಿ ಪಡೆಯಿರಿ!

ಧಾರವಾಡ ನಗರದ ಸಪ್ತಾಪೂರ ಹಾಗೂ ಅತ್ತಿಕೊಳ್ಳ ಪ್ರದೇಶದ ಗ್ರಾಮಲೆಕ್ಕಾಧಿಕಾರಿ ವೆಂಕಟೇಶ ಹಟ್ಟಿಯವರ ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ವಿವಿಧ ಪಿಂಚಣಿ ಪಡೆಯುತ್ತಿರುವ ಸುಮಾರು 3,000 ಫಲಾನುಭವಿಗಳನ್ನು ಹೊಂದಿದ್ದಾರೆ.

ಪರಿಹಾರ ಮೊತ್ತ, ಪಿಂಚಣಿ ಬಗ್ಗೆ ಕೇಂದ್ರ ಸರ್ಕಾರದಿಂದ ಶುಭ ಸುದ್ದಿ ಪರಿಹಾರ ಮೊತ್ತ, ಪಿಂಚಣಿ ಬಗ್ಗೆ ಕೇಂದ್ರ ಸರ್ಕಾರದಿಂದ ಶುಭ ಸುದ್ದಿ

Village Accountant Letter To Pension Beneficiary

ಈ ಪ್ರದೇಶಗಳಲ್ಲಿನ ಫಲಾನುಭವಿಗಳ ಆಧಾರ್ ಸೀಡಿಂಗ್ ಕಾರ್ಯವನ್ನು ಕಾಲಮಿತಿಯಲ್ಲಿ ಮಾಡಲು ಅಗತ್ಯ ದಾಖಲೆ, ಮಾಹಿತಿ ನೀಡುವಂತೆ ತಿಳಿಸಿ ಫಲಾನುಭವಿಗಳಿಗೆ ಪತ್ರ ಬರೆದಿದ್ದಾರೆ. ಪಿಂಚಣಿ ಸೌಲಭ್ಯವನ್ನು ಈ ಹಿಂದೆ ಫಲಾನುಭವಿಗಳು ಅಂಚೆಯ ಮೂಲಕ ಪಡೆಯುತ್ತಿದ್ದರು. ಅಂಚೆಯ ಅಣ್ಣನೇ (ಪೋಸ್ಟ್‍ಮ್ಯಾನ್) ಫಲಾನುಭವಿಗಳ ಮನೆಗೆ ತೆರಳಿ ಪಿಂಚಣಿ ಹಣ ನೀಡುತ್ತಿದ್ದರು.

ಆತ್ಮಹತ್ಯೆ FIR: ಜಿಪಂ ಸಿಇಓ ಮಿಶ್ರಾಗೆ ಶುರುವಾಯ್ತು ಸಂಕಷ್ಟಆತ್ಮಹತ್ಯೆ FIR: ಜಿಪಂ ಸಿಇಓ ಮಿಶ್ರಾಗೆ ಶುರುವಾಯ್ತು ಸಂಕಷ್ಟ

ಇದನ್ನು ಗಮನಿಸಿರುವ ಗ್ರಾಮ ಲೆಕ್ಕಾಧಿಕಾರಿ ತಮ್ಮ ಪ್ರದೇಶ ವ್ಯಾಪ್ತಿಯ ಪ್ರತಿಯೊಬ್ಬ ಪಿಂಚಣಿ ಫಲಾನುಭವಿಯ ನಿಖರ ವಿಳಾಸ, ಪತ್ತೆ ಹಾಗೂ ದಾಖಲೆ ಪಡೆಯಲು ಆರಂಭಿಕವಾಗಿ ಸುಮಾರು 180 ಜನರಿಗೆ ಪತ್ರ ಬರೆದು ಅಂಚೆಯ ಮೂಲಕ ಕಳುಹಿಸಿದ್ದಾರೆ.

ಇದರಿಂದಾಗಿ ಫಲಾನುಭವಿ ವಲಸೆ ಹೋಗಿದ್ದರೆ, ನಿಧನವಾಗಿದ್ದರೆ ಮತ್ತು ವಿಳಾಸ ಬದಲಾಗಿದ್ದರೆ ಸರಳವಾಗಿ ಮತ್ತು ಖಚಿತವಾಗಿ ತಿಳಿದುಬರುತ್ತದೆ. ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ರಾಯಭಾರಿಗಳಾಗಿ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳಿಗೆ ವಿವಿಧ ಯೋಜನೆ, ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯಗಳನ್ನು ವಹಿಸಲಾಗುತ್ತಿದೆ.

Recommended Video

ಪ್ರತಿಭಟನೆಯನ್ನ ಹತ್ತಿಕ್ಕುವುದು ನಾಚಿಕೆಗೇಡಿನ ಸಂಗತಿ-ಕೋಡಿಹಳ್ಳಿ ಚಂದ್ರಶೇಖರ್ ಕಿಡಿ | Oneindia Kannada

ನಿಗದಿತ ಗುರಿ ಸಾಧಿಸುವ ಉದ್ದೇಶದಿಂದ ಪತ್ರ ಮೂಲಕ ಫಲಾನುಭವಿಗಳ ಸಂಪರ್ಕ ಸಾಧಿಸಲು ಈ ಗ್ರಾಮಲೆಕ್ಕಾಧಿಕಾರಿ ಹೊಸ ಮಾರ್ಗ ಹುಡುಕಿದ್ದು ಇತರರಿಗೆ ಮಾದರಿಯಾಗಿದೆ.

English summary
A village accountant in Dharwad wrote a letter to 180 pension beneficiary to link aadhar card to bank account. This is the model for other village accountant's in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X