ಧಾರವಾಡ: ಬಿಜೆಪಿ ಸೇರ್ಪಡೆ ಕುರಿತು ಸ್ವತಃ ಸ್ಪಷ್ಟನೆ ಕೊಟ್ಟ ವಿನಯ್ ಕುಲಕರ್ಣಿ

ಧಾರವಾಡ, ಅಕ್ಟೋಬರ್ 8: ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕರೊಬ್ಬರು ಕಾಂಗ್ರೆಸ್ ಗೆ ಬೈ ಹೇಳುತ್ತಿದ್ದಾರೆ ಎಂಬ ಮಹತ್ವದ ಸುದ್ದಿ ಹರಿದಾಡುತ್ತಿತ್ತು. ಆ ಪ್ರಭಾವಿ ನಾಯಕ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿತ್ತು.

ಆದರೆ ಬಿಜೆಪಿ ಪಕ್ಷ ಸೇರ್ಪಡೆ ಸುದ್ದಿಗೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರು ಇಂದು ಸ್ಪಷ್ಟನೆ ಕೊಟ್ಟಿದ್ದು, ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ನಾನು ಯಾವ ಕೇಂದ್ರ ಬಿಜೆಪಿ ನಾಯಕರನ್ನು ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಸೇರುವ ಯಾವುದೇ ಪ್ರಸ್ತಾಪವೂ ನನ್ನ ಮುಂದೆ ಬಂದಿಲ್ಲ. ಎಲ್ಲವೂ ಮಾಧ್ಯಮಗಳ ಊಹಾಪೋಹ. ನಾನು ಬೆಳೆದ ಬಂದ ದಾರಿಯೇ ಬೇರೆ ಎಂದು ಹೇಳಿದರು.

Dharwad: Vinay Kulkarni Refutes Rumors Of Joining BJP Party

ಮೊದಲ ಬಾರಿಗೆ ಪಕ್ಷೇತರ ಶಾಸಕನಾಗಿ ಆಯ್ಕೆಯಾಗಿದ್ದು, ಹೀಗಾಗಿ ಕಾರ್ಯಕರ್ತರು ಮತ್ತು ಎಲ್ಲ ಸಮಾಜದ ಜನರು ನನ್ನ ಜೊತೆಯಲ್ಲಿದ್ದಾರೆ. ಕಾರ್ಯಕರ್ತರನ್ನು ಕೇಳದೇ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲವೆಂದರು.

ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಕುದುರೆ ಖರೀದಿಗೆ ನನ್ನ ಹಾಲಿನ ಡೈರಿಗೆ ಬಂದಿದ್ದರು. ನನ್ನಿಂದ ಆರು ಕುದುರೆ ತೆಗೆದುಕೊಂಡು ಹೋಗಿದ್ದಾರೆ. ಅದು ಖಾಸಗಿ ಭೇಟಿಯಾಗಿದ್ದು, ರಾಜಕೀಯ ಬಗ್ಗೆ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಅಂತಾ ಸುದ್ದಿ ಆಗುತ್ತಿದೆ. ಬಿಜೆಪಿ ಸೇರಿದರೂ ಈ ಕೇಸ್ ಗಳು ಇದ್ದೆ ಇರುತ್ತವೆ. ನನ್ನ ಪರವಾಗಿ ಯಾವುದೇ ಸ್ವಾಮೀಜಿಗಳು ಭಾರತೀಯ ಜನತಾ ಪಕ್ಷದ ಜೊತೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Recommended Video

      Kusuma : ರಾಜಕೀಯ ವ್ಯಾಪಾರ ಅಲ್ಲ ,ಪ್ರತಿ ಸ್ಪರ್ಧಿ ಬಗ್ಗೆ NO TENSION | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+