Vinay Kulkarni: ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ನ್ಯಾಯಾಲಯ
ಧಾರವಾಡ, ಜುಲೈ, 06: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಜಿಲ್ಲೆಯಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ.
ತಾವು ಶಾಸಕರಾಗಿದ್ದು, ಕ್ಷೇತ್ರಕ್ಕೆ ಭೇಟಿ ಕೊಡಬೇಕಾಗಿರುವುದರಿಂದ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು. ಹಾಗೂ ಷರತ್ತುಗಳನ್ನು ಸಡಿಲಿಸಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ಯೋಗೀಶಗೌಡ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆಯೇ ಇನ್ನೂ ನಡೆದಿಲ್ಲ. ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನೇ ವಜಾಗೊಳಿಸಿದೆ. ಸಿಬಿಐ ಪರವಾಗಿ ಎಸ್ಪಿಪಿ ಗಂಗಾಧರ ಶೆಟ್ಟಿ ಅವರು ಷರತ್ತು ಸಡಿಲಿಕೆ ಮಾಡದಂತೆ ವಾದ ಮಂಡಿಸಿದ್ದರು.
ಕಾಂಗ್ರೆಸ್ ವಿರುದ್ಧ ಜೋಶಿ ವಾಗ್ದಾಳಿ
ಹಾಗೆಯೇ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ಸದನದ ಒಳಗೆ ಮತ್ತು ಹೊರಗೆ ಸರ್ಕಾರದ ಬೋಗಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇತ್ತೀಚೆಗಷ್ಟೇ ಹೇಳಿದ್ದರು.
ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ಯೋಜನೆಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು. ಹಾಗೆಯೇ ರಾಜ್ಯ ಸರ್ಕಾರ 10 ಕೆ.ಜಿ. ಅಕ್ಕಿಯ ಹಣ ಕೊಡಬೇಕು, ಇಲ್ಲವೇ ಕ್ಷಮೆ ಕೇಳಬೇಕು. ಕೇಂದ್ರದಿಂದ 5 ಕೆ.ಜಿ. ಅಕ್ಕಿಯ ಹಣ ಕೊಡುತ್ತಿರುವ ಬಗ್ಗೆ ಸತ್ಯವನ್ನು ಹೇಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.
ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟಿಸ್ ಕೊಟ್ಟಿರುವ ಕುರಿತು ಮಾತನಾಡಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಎಸ್ವೈ ಅವರೂ ರೇಣುಕಾಚಾರ್ಯ ಕರೆದು ಮಾತನಾಡಿದ್ದಾರೆ.
ನಾನು ಸಹ ಇವತ್ತು ಮಾತನಾಡುವೆ. ನಮ್ಮದು ಒಂದು ಪರಿವಾರ ಇದ್ದಂತೆ ಎಂಬುದನ್ನು ಮನವರಿಕೆ ಮಾಡಿಕೊಡುವೆ. ಸ್ವಲ್ಪ ಆಕ್ರೋಶದಲ್ಲಿ ಕೆಲವರು ಮಾತನಾಡಿದ್ದರು. ಪಕ್ಷದ ಮೇಲೆ ಯಾರಿಗೂ ಬೇಸರವಿಲ್ಲ. ಅಂತಹವರಿಗೆ ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications