ಪುಟ್ಟರಾಜ ಸೇವಾ ಸಮಿತಿಗೆ ವಿಶ್ವನಾಥ್ ನೇಮಕ

ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಪದ್ಮ ಭೂಷಣ ಡಾ.ಪಂ.ಪುಟ್ಟರಾಜರ ಜೀವನ ಸಾಧನೆ ಸಂದೇಶವನ್ನು ಪ್ರಸಾರ ಮಾಡುವ ಉದ್ದೇಶದಿಂದ ಡಾ.ಪಂ. ಪುಟ್ಟರಾಜ ಸೇವಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಸೇವಾ ಸಮಿತಿಯ ಧಾರವಾಡ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಸೃಸ್ಥಿ ಗ್ರೂಪ್ ಆಫ್ ಕಂಪನಿಯ ಮ್ಯಾನೆಜಿಂಗ್ ಡೈರಕ್ಟರ್, ವಿಶ್ವನಾಥ ಸುಳ್ಳಳ್ಳಿ ಅವರನ್ನು ನೇಮಕ ಮಾಡಲಾಗಿದೆ.
ಇತ್ತಿಚೆಗೆ ನಡೆದ ಸೇವಾ ಸಮಿತಿಯ ಕೇಂದ್ರ ಕಾರ್ಯಕಾರಣಿ ಸಮಿತಿಯ ಒಪ್ಪಿಗೆಯಂತೆ ಸಂಘಟನಾ ಕಾರ್ಯದರ್ಶಿಯಾಗಿ ವಿಶ್ವನಾಥ ಸುಳ್ಳಳ್ಳಿ ಮತ್ತು ರಾಜ್ಯ ಸಂಚಾಲಕರಾಗ ಪಂ.ಚನ್ನವೀರಸ್ವಾಮಿ ಹಿರೇಮಠ (ಕಡಣಿ) ಅವರನ್ನು ನೇಮಕ ಮಾಡಲಾಗಿದೆ. ಈ ಜೂನ್ 11 ಬುಧವಾರದಿಂದ ಜಾರಿಯಲ್ಲಿರುತ್ತದೆ. [ಧಾರವಾಡದಲ್ಲಿ ಅಧಿಕಾರ ಸ್ವೀಕರಿಸಿದ ರವೀಂದ್ರನಾಥ್]
ನೂತನವಾಗಿ ಆಯ್ಕೆ ಆದವರ ಅಧಿಕಾರಾವಧಿ ಮೂರು ವರ್ಷ ಅಥವಾ ಕಾರ್ಯಕಾರಿಣಿ ಸಮಿತಿಯು ಒಪ್ಪುವವರೆಗೆ ಇರುತ್ತದೆ ಹಾಗೂ ಪೂರ್ಣ ಪ್ರಮಾಣದ ಜಿಲ್ಲಾ ಘಟಕವನ್ನು ರಚಿಸಲು ಮತ್ತು ಎಲ್ಲ ತಾಲೂಕುಗಳಲ್ಲಿ ಪೂಜ್ಯ ಗುರು ಪುಟ್ಟರಾಜರ ಕಟ್ಟಾಭಿಮಾನಿ ಭಕ್ತರನ್ನು ಗುರುತಿಸಿ ಆಸಕ್ತ ಅಭಿಮಾನಿ ಭಕ್ತರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲು ಅಧಿಕಾರ ನೀಡಲಾಗಿರುತ್ತದೆ.
ಈ ಸಮಿತಿಯ ಸದಸ್ಯರಾಗಲು ಜಿಲ್ಲೆಯ ಪೂಜ್ಯರ ಅಭಿಮಾನಿ ಭಕ್ತರು ಇನ್ನು ಮುಂದೆ ಡಾ.ಪಂ.ಪುಟ್ಟರಾಜ ಸೇವಾ ಸಮಿತಿಯ ಧಾರವಾಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಶ್ವನಾಥ ಸುಳ್ಳಳ್ಳಿ ಅವರನ್ನು 8494946375 ನಂಬರ್ ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಸೇವಾ ಸಮಿತಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ವಸಂತ ಪಡಗದ ನೇಮಕ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ, ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಮಾಜ ಸೇವಕ, ಪೂಜ್ಯರ ಅಭಿಮಾನಿ ಭಕ್ತರಾದ ಶ್ರೀ ವಸಂತ ಪಡಗದ ನೇಮಕವಾಗಿದ್ದರೆ ಎಂದು ಜಿಲ್ಲಾ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications