ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮದುವೆ ಮಮತೆಯ ಕರೆಯೋಲೆಯಲ್ಲಿ ಮತದಾನದ ಜಾಗೃತಿ

|
Google Oneindia Kannada News

ಧಾರವಾಡ, ಏಪ್ರಿಲ್ 16 : ಚುನವಣಾ ಆಯೋಗದಿಂದ ನೀಡುವ ಮತದಾರರ ಗುರುತಿನ ಚೀಟಿಯನ್ನು ಹೋಲುವಂತೆ ರಚಿಸಿರುವ ವಿವಾಹ ಆಮಂತ್ರಣ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಸ್ಕಾಂ ನೌಕರರಾಗಿರುವ ಮಂಜುನಾಥ ಈರಪ್ಪ ಹೂಗಾರ ಹಾಗೂ ಹೆಸ್ಕಾಂನ ಇಂಜಿನಿಯರ್ ಮಹೇಶ್ ಹೂಗಾರ ಅವರ ಸಹೋದರಿ ಅನ್ನಪೂರ್ಣ ಅವರ ವಿವಾಹ ಏಪ್ರಿಲ್ 26 ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.

ಧಾರವಾಡ : ಹಾಲಿನ ಪ್ಯಾಕೆಟ್ ಮೂಲಕ ಮತದಾನದ ಜಾಗೃತಿಧಾರವಾಡ : ಹಾಲಿನ ಪ್ಯಾಕೆಟ್ ಮೂಲಕ ಮತದಾನದ ಜಾಗೃತಿ

ವಿವಾಹದ ಸಂದರ್ಭದಲ್ಲಿಯೇ ಲೋಕಸಭಾ ಚುನಾವಣೆಯು ನಡೆಯುತ್ತಿದೆ. ಆದ್ದರಿಂದ, ಆಮಂತ್ರಣ ಪತ್ರಿಕೆಯಲ್ಲಿ ಮತದಾನದ ಜಾಗೃತಿ ಮೂಡಿಸಲು, ಮತದಾರರ ಗುರುತಿನ ಚೀಟಿ ಮಾದರಿಯಲ್ಲಿ ಆಮಂತ್ರಣ ಪತ್ರಿಕೆ ವಿನ್ಯಾಸ ಮಾಡಿಸಿದ್ದಾರೆ.

Voting awareness campaign in marriage invitation

ಚುನಾವಣೆಗಳ ಸಂದರ್ಭದಲ್ಲಿ ಬಹುತೇಕ ಜನರು ತಮ್ಮ ಮತದಾನ ಮಾಡದೇ ರಜೆ ಕಳೆಯಲು ಪ್ರವಾಸಕ್ಕೆ ಹೋಗುತ್ತಾರೆ. ಇದನ್ನು ಗಮನಿಸಿ ಜನರಿಗೆ ಅರಿವು ಮೂಡಿಸಲು ಈ ಮಾದರಿ ಆಮಂತ್ರಣ ಪತ್ರಿಕೆ ಮಾಡಿಸಿದ್ದೇವೆ ಎಂದು ಹೂಗಾರ ಕುಟುಂಬದ ಸದಸ್ಯರು ಹೇಳಿದ್ದಾರೆ.

ಧಾರವಾಡಲ್ಲಿ 16,88,067 ಮತದಾರರು, ಏ.23ರಂದು ಮತದಾನಧಾರವಾಡಲ್ಲಿ 16,88,067 ಮತದಾರರು, ಏ.23ರಂದು ಮತದಾನ

ಮತದಾನದ ಜಾಗೃತಿ ಮಾತ್ರವಲ್ಲ ಆಮಂತ್ರಣ ಪತ್ರಿಕೆಯಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಆಮಂತ್ರಣ ಪತ್ರಿಕೆಯ ಫೋಟೋಗಳು ವೈರಲ್ ಆಗಿವೆ.

ಧಾರವಾಡ ಲೋಕಸಭಾ ಕ್ಷೇತ್ರದ ಪರಿಚಯಧಾರವಾಡ ಲೋಕಸಭಾ ಕ್ಷೇತ್ರದ ಪರಿಚಯ

ಏಪ್ರಿಲ್ 23ರಂದು ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಪ್ರಹ್ಲಾದ್ ಜೋಶಿ, ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಅವರು ಕಣದಲ್ಲಿದ್ದಾರೆ.

English summary
Dharwad based Manjunath Erappa designed sister marriage invitation like voter id card to create awareness on voting for Lok sabha elections 2019. Elections will be held in Dharwad on April 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X