ಧಾರವಾಡ: 50 ವರ್ಷಗಳ ಬಳಿಕ ಅಣ್ಣಿಗೇರಿ ಕೆರೆಗೆ ನೀರು, ಜನರ ಸಂತಸ
ಧಾರವಾಡ, ನವೆಂಬರ್, 01: ಅಣ್ಣಿಗೇರಿ ಪಟ್ಟಣಕ್ಕೆ 50 ವರ್ಷಗಳ ಹೋರಾಟದ ನಂತರ ಕೊನೆಗೂ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಅಣ್ಣಿಗೇರಿಯು ಒಂದು ಪ್ರಮುಖ ನಗರವಾಗಿದೆ. ಬ್ಯಾಡಗಿಯಂತೆ ಅಣ್ಣಿಗೇರಿ ಪಟ್ಟಣ ಕೆಂಪು ಒಣ ಮೆಣಸಿನಕಾಯಿಗೆ ತುಂಬಾ ಪ್ರಸಿದ್ಧಿ ಪಡೆದಿದೆ. ಇಷ್ಟೆಲ್ಲ ಪ್ರಸಿದ್ಧಿ ಪಡೆದಿದ್ದರೂ ಕೂಡ ಅಣ್ಣಿಗೇರಿ ಪಟ್ಟಣದ ಜನ ಮಾತ್ರ ಕುಡಿಯುವ ನೀರಿಗಾಗಿ ಬಹಳ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಇದೀಗ 76 ಹೆಕ್ಟೇರ್ ವಿಸ್ತೀರ್ಣದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕೆರೆಗೆ ನೀರನ್ನು ಹರಿಸಲಾಗಿದ್ದು, ಜನರು ಆತಂಕದಿಂದ ಹೊರಬಂದಂತಾಗಿದೆ.
ಎಷ್ಟೇ ಪ್ರಯತ್ನ ಪಟ್ಟರು ಈ ಅಣ್ಣಿಗೇರಿ ಪಟ್ಟಣದ ಜನರ ನೀರಿನ ದಾಹ ತೀರಿಸಲು ಸಾಧ್ಯವಾಗಿರಲಿಲ್ಲ. ಅಣ್ಣಿಗೇರಿ ಪಟ್ಟಣದ ಜನ ಶಾಶ್ವತ ಕುಡಿಯುವ ಯೋಜನೆಗಾಗಿ ಕಳೆದ 50 ವರ್ಷಗಳಿಂದ ಸತತವಾಗಿ ಹೋರಾಟ ಮಾಡುತ್ತಲೇ ಬಂದಿದ್ದರು. ಆದರೂ ಕೂಡ ಯಾವುದೇ ಸರ್ಕಾರಗಳು, ಜನ ಪ್ರತಿನಿಧಿಗಳು ಅಣ್ಣಿಗೇರಿ ಪಟ್ಟಣದ ಜನರ ನೀರಿನ ದಾಹ ತೀರಿಸಲು ಮುಂದಾಗಿರಲಿಲ್ಲ. ಅಣ್ಣಿಗೇರಿ ಪಟ್ಟಣದ ನೀರಿನ ದಾಹ ತೀರಿಸಲು ನವಲಗುಂದ ತಾಲೂಕಿನ ಬಸಾಪೂರ ಗ್ರಾಮದ ಬಳಿ 76 ಹೆಕ್ಟೇರ್ ಪ್ರದೇಶದಲ್ಲಿ ಹೊಸದಾಗಿ ಕೆರೆಯನ್ನು ನಿರ್ಮಿಸಲಾಗಿತ್ತು. ಆದರೆ ಕೆರೆಯಲ್ಲಿ ನೀರನ್ನು ಸಂಗ್ರಹಿಸಿರಲಿಲ್ಲ. ಇದರಿಂದ ಪಟ್ಟಣದ ಜನ ತೊಂದರೆಗೆ ಒಳಗಾಗಿದ್ದರು. ಬೇಸತ್ತ ಜನರು ಸರ್ಕಾರಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದರು.

76 ಹೆಕ್ಟೇರ್ ವಿಸ್ತೀರ್ಣದಲ್ಲಿ ಕೆರೆ ನಿರ್ಮಾಣ
ಇಂದು ಆ ಎಲ್ಲ ಸಂಕಷ್ಟಗಳಿಗೆ ತೆರೆ ಬಿದ್ದಿದ್ದು, ಅಣ್ಣಿಗೇರಿಯ ಶಾಶ್ವತ ಕುಡಿಯುವ ನೀರಿಗೆ ಪರಿಹಾರವಾಗಿದೆ. 76 ಹೆಕ್ಟೇರ್ ವಿಸ್ತೀರ್ಣದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕೆರೆಗೆ ನೀರನ್ನು ಹರಿಸಲಾಗಿದೆ. ಹೀಗೆ ಕೆರೆ ತುಂಬಿಸುವ ಕಾರ್ಯ ಭರದಿಂದ ಸಾಗಿದೆ. 45 ದಿನಗಳಲ್ಲಿ ಕೆರೆಯು ತುಂಬಲಿದ್ದು, ಇದರಿಂದ ಅಣ್ಣಿಗೇರಿ ಪಟ್ಟಣದ ಶಾಶ್ವತ ಕುಡಿಯುವ ನೀರಿಗೆ ಪರಿಹಾರ ದೊರೆತಂತೆ ಆಗಲಿದೆ. ಬಸಾಪೂರ ಗ್ರಾಮದ ಹತ್ತಿರದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ, ಅಣ್ಣಿಗೇರಿ ಪುರಸಭೆ, ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಯೋಗದೊಂದಿಗೆ ಇದನ್ನು ಆಯೋಜಿಸಲಾಗಿದೆ. ಅಣ್ಣಿಗೇರಿ ಪಟ್ಟಣಕ್ಕೆ 24 ಗಂಟೆಗಳ ಕಾಲ ನಿರಂತರ ಕುಡಿಯುವ ನೀರಿನ ಸರಬರಾಜು ಕಾಮಗಾರಿ 34.88 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ಕೆರೆಗೆ ನೀರು ಸಂಗ್ರಹ ಕಾರ್ಯಕ್ಕೆ ಮುಂದಾಗಿದ್ದಾರೆ. ಬಸಾಪೂರ ಗ್ರಾಮದ ಹತ್ತಿರ ಮಲಪ್ರಭಾ ಬಲದಂಡೆ ಕಾಲುವೆಗೆ ಹೊಂದಿಕೊಂಡಿರುವ ಕೆರೆಯ ಜಲಸಂಗ್ರಹಗಾರಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಪದ್ಮಶ್ರೀ ಪುರಸ್ಕೃತರ ಅಭಿಪ್ರಾಯ ಏನು?
ಕಳೆದ 50 ವರ್ಷಗಳ ಹಿಂದೆ ಕುಡಿಯುವ ನೀರಿಗಾಗಿ ಹೋರಾಟ ಮಾಡಿದ್ದೇವೆ. ಇಂದು ಅಣ್ಣಿಗೇರಿ ಜನರಿಗೆ 24 ಗಂಟೆಗಳ ಕಾಲ ನಿರಂತರ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಇದೊಂದು ಉತ್ತಮ ಕಾರ್ಯವಾಗಿದ್ದು, ಇದರಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಪದ್ಮಶ್ರೀ ಪುರಸ್ಕೃತ ಅಬ್ದುಲ್ ಸಾಬ್ ನಡಕಟ್ಟಿನ ಅವರು ಸಂತಸ ವ್ಯಕ್ತಪಡಿಸಿದರು. ಇಷ್ಟು ದಿನ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ಊರಿಗೆ ಇದೀಗ ಗಂಗೆ ಹರಿದು ಬಂದಿದ್ದಾಳೆ ಎಂದು ಅಲ್ಲಿನ ಜನರು ಸಂತಸ ವ್ಯಕ್ತಪಡಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications