Get Updates
Get notified of breaking news, exclusive insights, and must-see stories!

ಕಲ್ಲಿದ್ದಲು ಆಮದು ನಿಲ್ಲಿಸಲು ಪ್ರಯತ್ನ; ಪ್ರಹ್ಲಾದ್ ಜೋಶಿ

ಧಾರವಾಡ, ನವೆಂಬರ್ 17; "ಭಾರತದಲ್ಲಿ 2025-26ರ ವೇಳೆಗೆ ಕಲ್ಲಿದ್ದಲು ಆಮದನ್ನು ನಿಲ್ಲಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ" ಎಂದು ಧಾರವಾಡದ ಸಂಸದ, ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಶುಕ್ರವಾರ ವರ್ಚುವಲ್ ಮೂಲಕ ಅವರು ಕಲ್ಲಿದ್ದಲು ಹರಾಜನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಕಲ್ಲಿದ್ದಲು ಸಚಿವಾಲಯವು ಎಂಟನೇ ಸುತ್ತಿನ ವಾಣಿಜ್ಯ ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು. ಒಟ್ಟು 39 ಕಲ್ಲಿದ್ದಲು ಗಣಿಗಳು ಆಫರ್‌ನಲ್ಲಿವೆ" ಎಂದರು.

stop-coal-import-pralhad-joshi

"ಸಾಮೂಹಿಕ ಉತ್ಪಾದನಾ ತಂತ್ರಜ್ಞಾನವನ್ನು ನಿಯೋಜಿಸುವ ಮೂಲಕ ಭೂಗತ ಗಣಿಗಳಿಂದ ಕಲ್ಲಿದ್ದಲು ಉತ್ಪಾದನೆಯನ್ನು 2030ರ ವೇಳೆಗೆ 100 ಮಿಲಿಯನ್ ಟನ್ (ಎಂಟಿ) ಗೆ ಹೆಚ್ಚಿಸಲಾಗುವುದು" ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಹರಾಜು ಪ್ರಕ್ರಿಯೆ ವಿವರಗಳು; ಹರಾಜು ಹಾಕಲಾಗುತ್ತಿರುವ ಗಣಿಗಳು ಕಲ್ಲಿದ್ದಲು ಹೊಂದಿರುವ ರಾಜ್ಯಗಳಾದ ಜಾರ್ಖಂಡ್, ಒಡಿಶಾ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಹರಡಿಕೊಂಡಿವೆ. ಈ ಗಣಿಗಳು ಸಿಎಂಎಸ್ಪಿ ಕಾಯ್ದೆ ಮತ್ತು ಎಂಎಂಡಿಆರ್ ಕಾಯ್ದೆಯಡಿ ಬರುತ್ತವೆ. 39 ಕಲ್ಲಿದ್ದಲು ಗಣಿಗಳ ಪೈಕಿ ನಾಲ್ಕು ಗಣಿಗಳನ್ನು ಸಿಎಂಎಸ್ಪಿ/ ಎಂಎಂಡಿಆರ್ ಕಾಯ್ದೆಯಡಿ 7ನೇಸುತ್ತಿನ 2ನೇ ಪ್ರಯತ್ನದ ಅಡಿಯಲ್ಲಿ ನೀಡಲಾಗುತ್ತಿದೆ. 8ನೇ ಸುತ್ತಿನಲ್ಲಿ ನೀಡಲಾಗುತ್ತಿರುವ 35 ಕಲ್ಲಿದ್ದಲು ಗಣಿಗಳ ಪೈಕಿ 16 ಹೊಸ ಗಣಿಗಳಾಗಿದ್ದು, 19 ಗಣಿಗಳನ್ನು ಹಿಂದಿನ ಹಂತಗಳಿಂದ ಹೊರತೆಗೆಯಲಾಗುತ್ತಿದೆ.

"ಕಲ್ಲಿದ್ದಲು ವಲಯವು ವೇಗವಾಗಿ ಬೆಳೆಯುತ್ತಿದೆ ಮತ್ತು ದೇಶದ ಹೆಚ್ಚುತ್ತಿರುವ ಇಂಧನ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ಕಲ್ಲಿದ್ದಲು ಸಚಿವಾಲಯವು ಸರಣಿ ಸುಧಾರಣೆಗಳನ್ನು ಕೈಗೊಂಡಿದೆ" ಎಂದು ಸಚಿವರು ತಿಳಿಸಿದರು.

8ನೇ ಸುತ್ತಿನ ಹರಾಜಿನಲ್ಲಿಯೂ ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಅಭಯಾರಣ್ಯಗಳು, ನಿರ್ಣಾಯಕ ಆವಾಸ ಸ್ಥಾನಗಳು, ಶೇ 40ಕ್ಕಿಂತ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಗಣಿಗಳು, ಹೆಚ್ಚು ನಿರ್ಮಿಸಲಾದ ಪ್ರದೇಶ ಇತ್ಯಾದಿಗಳನ್ನು ಹೊರಗಿಡಲಾಗಿದೆ. ಕಲ್ಲಿದ್ದಲು ಗಣಿಯ ಆರಂಭಿಕ ಅಭಿವೃದ್ಧಿಗಾಗಿ ದಟ್ಟವಾದ ಜನವಸತಿ, ಹೆಚ್ಚಿನ ಹಸಿರು ಹೊದಿಕೆ ಅಥವಾ ನಿರ್ಣಾಯಕ ಮೂಲಸೌಕರ್ಯ ಇತ್ಯಾದಿಗಳಿದ್ದ ಕೆಲವು ಕಲ್ಲಿದ್ದಲು ಗಣಿಗಳ ಬ್ಲಾಕ್ ಗಡಿಗಳನ್ನು ಮಾರ್ಪಡಿಸಲಾಗಿದೆ.

ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಮಾತನಾಡಿ, "ಕ್ಯಾಪ್ಟಿವ್ ವಾಣಿಜ್ಯ ಕಲ್ಲಿದ್ದಲು ಗಣಿಗಳು ಒಟ್ಟಾರೆ ಉತ್ಪಾದನೆಗೆ ಗಮನಾರ್ಹ ಕೊಡುಗೆ ನೀಡುತ್ತಿವೆ. 39 ಗಣಿಗಳನ್ನು ಹರಾಜಿಗೆ ನೀಡುವ ಮೊದಲು ವ್ಯವಸ್ಥಿತ ಸಮೀಕ್ಷೆಗಳನ್ನು ನಡೆಸಲಾಗಿದೆ. ಗಣಿಗಳಿಂದ ಕಲ್ಲಿದ್ದಲನ್ನು ತ್ವರಿತವಾಗಿ ಸ್ಥಳಾಂತರಿಸಲು, ರೈಲು ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಮತ್ತು ಮತ್ತಷ್ಟು ಸೇರಿಸಲಾಗುತ್ತಿದೆ" ಎಂದರು.

ಹರಾಜು ಆರಂಭಕ್ಕೂ ಮುನ್ನ ಅತಿಥಿಗಳು ಮತ್ತು ಸಂಭಾವ್ಯ ಬಿಡ್ಡು ದಾರರನ್ನು ಸ್ವಾಗತಿಸಿದ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮತ್ತು ನಾಮನಿರ್ದೇಶಿತ ಅಧಿಕಾರಿ ಎಂ. ನಾಗರಾಜು, ದೇಶೀಯ ಕಲ್ಲಿದ್ದಲು ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಸಚಿವಾಲಯವು ಇತ್ತೀಚೆಗೆ ಸರಣಿ ಸುಧಾರಣೆಗಳನ್ನು ಪ್ರಾರಂಭಿಸಿದೆ. ಮುಂಬರುವ ದಶಕಗಳಲ್ಲಿಯೂ ದೇಶೀಯ ಕಲ್ಲಿದ್ದಲು ಬೇಡಿಕೆ ಹೆಚ್ಚಾಗಲಿದೆ. ಆದ್ದರಿಂದ, ಕಲ್ಲಿದ್ದಲು ಕ್ಷೇತ್ರದಲ್ಲಿನ ಹೂಡಿಕೆಯು ಉತ್ತಮ ಆದಾಯವನ್ನು ನೀಡುತ್ತದೆ ಎಂದರು.

ಹರಾಜಿಗಾಗಿ ಟೆಂಡರ್ ದಾಖಲೆಗಳ ಮಾರಾಟ ಪ್ರಾರಂಭವಾಗಲಿದೆ. ಗಣಿಗಳ ವಿವರಗಳು, ಹರಾಜು ನಿಯಮಗಳು, ಕಾಲಮಿತಿ ಇತ್ಯಾದಿಗಳನ್ನು ಎಂಎಸ್ ಟಿಸಿ ಹರಾಜು ವೇದಿಕೆಯಲ್ಲಿ ಪಡೆಯಬಹುದು. ಶೇಕಡಾವಾರು ಆದಾಯದ ಪಾಲು ಆಧಾರದ ಮೇಲೆ ಪಾರದರ್ಶಕ ಎರಡು ಹಂತದ ಪ್ರಕ್ರಿಯೆಯ ಮೂಲಕ ಆನ್‌ಲೈನ್‌ನಲ್ಲಿ ಹರಾಜು ನಡೆಯಲಿದೆ. ವಾಣಿಜ್ಯ ಕಲ್ಲಿದ್ದಲು ಗಣಿ ಹರಾಜಿಗಾಗಿ ಕಲ್ಲಿದ್ದಲು ಸಚಿವಾಲಯದ ಏಕೈಕ ವಹಿವಾಟು ಸಲಹೆಗಾರರಾಗಿರುವ ಎಸ್ಬಿಐ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್ ಹರಾಜು ಪ್ರಕ್ರಿಯೆಯನ್ನು ನಡೆಸಲು ಸಚಿವಾಲಯಕ್ಕೆ ಸಹಾಯ ಮಾಡುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+