ಉತ್ತರ ಕರ್ನಾಟಕಕ್ಕೆ ಸಿಹಿಸುದ್ದಿ ಕೊಟ್ಟ ಭಾರತೀಯ ರೈಲ್ವೆ

ಧಾರವಾಡ, ಜನವರಿ 12: ಭಾರತೀಯ ರೈಲ್ವೆ ಉತ್ತರ ಕರ್ನಾಟಕ ಭಾಗದ ಜನರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಯಶವಂತಪುರ-ಹಜರತ್ ನಿಜಾಮುದ್ದೀನ್ ರೈಲು ಇನ್ನು ಮುಂದೆ ವಾರದಲ್ಲಿ 5 ದಿನ ಸಂಚಾರ ನಡೆಸಲಿದೆ.

ಯಶವಂತಪುರ-ಹಜರನ್ ನಿಜಾಮುದ್ದೀನ್-ಯಶವಂತಪುರ ನಡುವೆ ಸಂಚಾರ ನಡೆಸುವ ಸಂಪರ್ಕ ಕ್ರಾಂತಿ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಸಹಾಯಕವಾಗಲಿದೆ.

ಗದಗ, ಕೊಪ್ಪಳ, ಬಳ್ಳಾರಿ, ಧಾರವಾಡ ಭಾಗದ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ. ಈ ಮೊದಲು ಧರ್ಮಾವರಂ, ರಾಯಚೂರು, ಪೆಂಡೆಕಲ್ಲು ಮಾರ್ಗದ ಮೂಲಕ ರೈಲು ಸಂಚಾರ ನಡೆಸುತ್ತಿತ್ತು.

Yesvantpur Hazrat Nizamuddin Express Train To Run 5 Days In Week

ಈಗ ರೈಲು ಹುಬ್ಬಳ್ಳಿ, ಬಳ್ಳಾರಿ, ಪೆಡೆಕಲ್ಲು ಮೂಲಕ ಸಂಚಾರ ನಡೆಸಲಿದೆ. ಇದರಿಂದಾಗಿ ಬೆಂಗಳೂರಿನಿಂದ ಉತ್ತರ ಕರ್ನಾಟಕದ ಕಡೆ ಸಂಚಾರ ನಡೆಸುವ ಜನರಿಗೆ ಉಪಯೋಗವಾಗಲಿದೆ.

ಜನವರಿ 11ರಿಂದ 31ರ ತನಕ ಪ್ರತಿ ಭಾನುವಾರ, ಸೋಮವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ರೈಲು ಸಂಚಾರ ನಡೆಸಲಿದೆ. ಯಶವಂತಪುರದಿಂದ ಮಧ್ಯಾಹ್ನ 12.45ಕ್ಕೆ ರೈಲು ಹೊರಡಲಿದೆ. ಸಂಚಾರ ಆರಂಭಿಸಿದ 2ನೇ ದಿನ ಬೆಳಗ್ಗೆ 8.11ಕ್ಕೆ ಹಜರತ್ ನಿಜಾಮುದ್ದೀನ್ ತಲುಪಲಿದೆ.

ಜನವರಿ 14 ರಿಂದ ಫೆಬ್ರವರಿ 3ರ ತನಕ ಹಜರತ್ ನಿಜಾಮುದ್ದೀನ್‌ನಿಂದ ಪ್ರತಿ ಭಾನುವಾರ, ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರದಂದು ರೈಲು ಸಂಚಾರ ನಡೆಸಲಿದೆ. ಹಜರತ್ ನಿಜಾಮುದ್ದೀನ್‌ನಿಂದ ಬೆಳಗ್ಗೆ 8.20ಕ್ಕೆ ಹೊರಡುವ ರೈಲು ಸಂಚಾರ ಆರಂಭಿಸಿದ 2ನೇ ದಿನ ಬೆಳಗಿನ ಜಾವ 5.40ಕ್ಕೆ ಯಶವಂತಪುರಕ್ಕೆ ಬಂದು ತಲುಪಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+