ಯುವ ನಾಯಕರಿಗೆ ವೇದಿಕೆಯಾಗಲಿದೆ ಹುಬ್ಬಳ್ಳಿ ಸಮ್ಮೇಳನ
ಹುಬ್ಬಳ್ಳಿ, ಫೆ. 5 : ಫೆಬ್ರವರಿ 6 ರಂದು ಹುಬ್ಬಳಿಯ ವಿದ್ಯಾನಗರದಲ್ಲಿ 5 ನೇ ವರ್ಷದ ಯುವ ಸಮ್ಮೇಳನ ನಡೆಯಲಿದೆ. ನಾಯಕತ್ವ, ಸಂಶೋಧನೆ, ಆರೋಗ್ಯ, ಕೃಷಿ, ಮಾಹಿತಿ ಮತ್ತು ತಂತ್ರಜ್ಞಾನ ಸೇರಿದಂತೆ ಹಲವಾರು ಸಂಗತಿಗಳ ಬಗ್ಗೆ ಚರ್ಚೆ ನಡೆಯಲಿದೆ.
150ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಮತ್ತು 1500 ಸಾವಿರ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದ ವಿದ್ಯಾರ್ಥಿಗಳು ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ. [ನ್ಯಾಷನಲ್ ಇನ್ಸುರೆನ್ಸ್ ಕಂಪೆನಿಯಲ್ಲಿ ಕೆಲಸ ಖಾಲಿ ಇದೆ]
ಹೆಚ್ಚಿನ ಮಾಹಿತಿಗೆ www.leadcampus.org ವೆಬ್ ತಾಣ ಮತ್ತು ಸಮ್ಮೇಳನದ ಆಯೋಜಕ ಅಭಿನಂದನ್ 9900053763 ಅವರನ್ನು ಸಂಪರ್ಕಿಸಬಹುದು.

ನಾಯಕತ್ವ ತರಬೇತಿ
1200 ಪ್ರೊಜೆಕ್ಟ್ ಗಳಲ್ಲಿ ಆಯ್ಕೆಯಾದ 60 ಅತ್ಯುತ್ತಮ ನಾಯಕತ್ವ ಯೋಜನೆಗಳನ್ನು ಮಂಡಿಸಲಾಗುವುದು. ಶಾಲಾ ಮಕ್ಕಳಲ್ಲಿ ವೆಚ್ಚಕಡಿತದ ಜಾಗೃತಿ, ಮಹಿಳಾ ಸಬಲಿಕರಣ, ಶೌಚಾಲಯ ನಿರ್ಮಾಣ ಅಗತ್ಯ ಮತ್ತು ಜಾಗೃತಿ, ನೀರು ಬಳಸಿ ದ್ವಿಚಕ್ರ ವಾಹನದ ಮೈಲೇಜ್ ಹೆಚ್ಚಿಸುವ ತಂತ್ರ, ವಾಯು ಮಾಲಿನ್ಯ ತಡೆಗೆ ನೂತನ ತಂತ್ರಗಳು ಸೇರಿದಂತೆ ಅನೇಕ ಪ್ರೊಜೆಕ್ಟ್ ಗಳನ್ನು ವಿದ್ಯಾರ್ಥಿಗಳು ಮಂಡಿಸಲಿದ್ದಾರೆ.

ಜಾಗೃತಿಗೆ ಮೊದಲ ಆದ್ಯತೆ
ಮಕ್ಕಳಲ್ಲಿ, ಮಹಿಳೆಯರಲ್ಲಿ ದೇಶಭಕ್ತಿ ಮತ್ತು ಪರಿಸರ ಪ್ರೇಮದ ಜಾಗೃತಿ, ಮತದಾನ ಜಾಗೃತಿ ಮೂಡಿಸುವ ಕೆಲಸವನ್ನು ವಿದ್ಯಾರ್ಥುಗಳು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಹೊಸ ಯೋಜನೆಗಳಿಗೆ, ಚಿಂತನೆಗಳಿಗೆ ಸಮ್ಮೇಳನ ವೇದಿಕೆಯಾಗುವುದರಲ್ಲಿ ಅನುಮಾನವಿಲ್ಲ.

ಏನಿದು ಲೀಡ್ ಪ್ರೊಗ್ರಾಮ್
ದೇಶಪಾಂಡೆ ಫೌಂಡೇಶನ್ ಮುಂದಾಳತ್ವದಲ್ಲಿ ಮೂಡಿಬಂದಿರುವ 'ಲೀಡ್' ನಾಯಕತ್ವ ನಿರೂಪಣೆ ಕಾರ್ಯಕ್ರಮದಲ್ಲಿ ರಾಜ್ಯ ಸೇರಿದಂತೆ ಪಕ್ಕದ ಆಂಧ್ರ, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದ ವಿದ್ಯಾರ್ಥಿಗಳು ತಮ್ಮ ನವೀನ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಒಟ್ಟು 23 ಸಾವಿರ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದು ಅತ್ಯುತ್ತಮ ಯೋಜನೆಗಳನ್ನು ಸಮ್ಮೇಳನದಲ್ಲಿ ಪ್ರಚುರ ಪಡಿಸಲಾಗುವುದು.

ಪ್ರಮುಖರ ಮಾತು?
ಶಾಂತಿ ನೊಬೆಲ್ ಪ್ರಶಸ್ತಿ ವಿಜೇತ ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ, ಇನ್ಫೋಸಿಸ್ ದಿಗ್ಗಜ ನಾರಾಯಣ ಮೂರ್ತಿ, ಡಾ. ಗುರುರಾಜ್ ದೇಶಪಾಂಡೆ, ನಾರಾಯಣ ಹೃದಯಾಲಯದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ, ರೆಡ್ ಬಸ್ ಸಂಸ್ಥೆಯ ಫಣಿಂದ್ರ ಸಮಾ ಸೇರಿದಂತೆ ಅನೇಕರು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣದ ಬಗ್ಗೆ ತಿಳಿವಳಿಕೆ ನೀಡಲಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications