ಬಿಜೆಪಿ ಮಾಜಿ ಸಚಿವರ ಮನೆಗಳ ಮೇಲೆ ಐಟಿ ದಾಳಿ

income-tax-raid-on-bjp-ex-minister-krishnaiah-shetty-ramadas-bangalore
ಬೆಂಗಳೂರು, ಸೆ.12: ಬಿಜೆಪಿ ಮಾಜಿ ಸಚಿವರಾದ ಎಸ್ಎನ್ ಕೃಷ್ಣಯ್ಯ ಶೆಟ್ಟಿ ಮತ್ತು ಎ ರಾಮದಾಸ್ ಹಾಗೂ ಹಲವು ರಿಯಲ್ ಎಸ್ಟೇಟ್ ಉದ್ಯಮಿಗಳ ಮನೆ/ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಮಿಂಚಿನ ದಾಳಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 23 ಕಡೆ ಈ ದಾಳಿ ನಡೆಸಿದ್ದು, IT ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮಾಜಿ ಸಚಿವ ಮಾಲೂರಿನ ಕೃಷ್ಣಯ್ಯ ಶೆಟ್ಟಿ ಮತ್ತು ಅವರ ಸಂಬಂಧಿಕರಿಗೆ ಸೇರಿದ ಬೆಂಗಳೂರಿನ ಮಲ್ಲೇಶ್ವರ, ಕೋಲಾರ, ಮಾಲೂರು ಸೇರಿದಂತೆ 7 ಕಡೆ ದಾಳಿ ಮಾಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಇನ್ನು ಬೆಂಗಳೂರಿನಿಂದ ಮೈಸೂರಿಗೆ ಬಂದ 25 ಅಧಿಕಾರಿಗಳ ತಂಡ ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ಮಾಜಿ ಸಚಿವ ರಾಮದಾಸ್ ಮನೆ, ಕಚೇರಿ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡಿವೆ. ಅದಕ್ಕೂ ಮುನ್ನ, ಬೆಂಗಳೂರಿನ ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ರಾಮದಾಸ್ ಸಹೋದರ ಶ್ರೀಕಾಂತ್ ದಾಸ್ ಅವರ ಕಚೇರಿ ಮತ್ತು ಮನೆಗಳ ಮೇಲೂ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂ ಹಗರಣಗಳ ಬಗ್ಗೆ ತನಿಖೆ ಮಾಡುವುದಾಗಿ ಹೇಳಿಕೆ ನೀಡಿದ್ದ ಕೆಲವೇ ಗಂಟೆಗಳ ಅವಧಿಯಲ್ಲಿ ಈ ದಾಳಿ ನಡೆದಿರುವುದನ್ನು ನೋಡಿದರೆ ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿರಬಹುದು ಎಂಬ ಅಸಮಾಧಾನದ ಮಾತುಗಳು ಕೇಳಿಬರುತ್ತಿವೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕೃಷ್ಣಯ್ಯ ಶೆಟ್ಟಿ ವಸತಿ ಮತ್ತು ಮುಜರಾಯಿ ಖಾತೆ ನಿರ್ವಹಿಸಿದ್ದರು. ಆನಂತರ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರೂ ಜೈಲಿಗೂ ಹೋಗಿ ಬಂದಿದ್ದರು.

ಇನ್ನು, ರಾಮದಾಸ್ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಮತ್ತು ಉನ್ನತ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಗೆಲುವು ಸಾಧಿಸಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+