Get Updates
Get notified of breaking news, exclusive insights, and must-see stories!

Doddaballapur Elections : ಬಂಡಾಯದ ನೆಲದಲ್ಲಿ ಕಾಂಗ್ರೆಸ್‌, ಜೆಡಿಎಸ್‌ಗೆ ಸೆಡ್ಡು ಹೊಡೆಯಲಿದ್ಯಾ ಬಿಜೆಪಿ?

ದೊಡ್ಡಬಳ್ಳಾಪುರ, ಮಾರ್ಚ್‌, 26: ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮತ್ತೊಂದೆ ಚುನಾವಣೆ ಹತ್ತಿರವಾಗುತ್ತಿಂದತೆ ರಾಜಕಾರಣಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗಾದರೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸ್ಥಿತಿ ಗತಿ ಹೇಗಿದೆ ಎಂದು ಇಲ್ಲಿ ತಿಳಿಯಿರಿ.

ಇದೀಗ ಕ್ಷೇತ್ರದ ರಾಜಕೀಯದಲ್ಲಿ ಹಲವಾರು ಬದಲಾವಣೆಗಳು ಆಗುತ್ತಲೇ ಇವೆ. ಆದ್ದರಿಂದ ವಿಧಾನಸಭೆ ಅಖಾಡದಲ್ಲಿ ಸಾಂಪ್ರದಾಯಿಕ ಎದುರಾಳಿ ಎಂದು ಗುರುತಿಸಿಕೊಂಡಿರುವ ಕಾಂಗ್ರೆಸ್‌, ಜೆಡಿಎಸ್‌ ಸ್ಥಾನಗಳು ಈ ಬಾರಿಯ ಚುನಾವಣೆಯಲ್ಲಿ ಬದಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ಚುನಾವಣೆಗೂ ಕೂಡ ಕಾಂಗ್ರೆಸ್‌, ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

doddaballapura map

ದೊಡ್ಡಬಳ್ಳಾಪುರ ಕ್ಷೇತ್ರ ಪರಿಚಯ

ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ದೊಡ್ಡಬಳ್ಳಾಪುರ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದೆ. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯ.ಟಿ. ವೆಂಕಟರಮಣಯ್ಯ ಜಯ ಗಳಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಜನತಾ ದಳ (ಜಾತ್ಯತೀತ)ದ ಮುನೇಗೌಡ 9,945 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಹಾಗಾದರೆ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಜಾತ್ಯಾತೀತ ಪಕ್ಷಗಳಿಗೇ ಬೆಂಬಲ ಯಾಕೆ?

ಮತದಾರ ಪ್ರಭುಗಳು ಮೊದಲಿನಿಂದಲೂ ಜಾತ್ಯಾತೀತ ಪಕ್ಷಗಳನ್ನೇ ಬೆಂಬಲಿಸುತ್ತಾ ಬಂದಿದ್ದಾರೆ ಎನ್ನುವುದು ಕ್ಷೇತ್ರದ ವಿಶೇಷತೆಯಾಗಿದೆ. ಆದ್ದರಿಂದ ಆರ್‌.ಎಲ್‌. ಜಾಲಪ್ಪನವರ ಕುಟುಂಬವು ಸುಮಾರು 35 ವರ್ಷಗಳ ಕಾಲ ಕ್ಷೇತ್ರದಲ್ಲಿ ಶಾಸಕರಾಗಿ ಹಿಡಿತ ಸಾಧಿಸಿದೆ ಎನ್ನಲಾಗಿದೆ. ಇನ್ನು ಜಾಲಪ್ಪನವರ ಪುತ್ರ ಜೆ.ನರಸಿಂಹಸ್ವಾಮಿಯವರು ಆಪರೇಷನ್‌ ಕಮಲದ ಮೂಲಕ ಬಿಜೆಪಿ ಸೇರ್ಪಡೆ ಆಗಿದ್ದು, ನಂತರ ಧರ್ಮ ಆಧಾರಿತ ಪಕ್ಷದ ಶಾಸಕರಾಗಿ ಆಯ್ಕೆ ಆದರು. ಆದರೆ ಕೇವಲ ಐದೇ ವರ್ಷದಲ್ಲಿ ಈ ಕ್ಷೇತ್ರವನ್ನು ಕಾಂಗ್ರೆಸ್‌ ವಶಪಡಿಸಿಕೊಂಡಿತ್ತು.

congress

ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಟಿ.ವೆಂಕಟರಮಣಯ್ಯನವರು ಇದೀಗ ಹ್ಯಾಟ್ರಿಕ್‌ ಗೆಲುವಿನೆಡೆಗೆ ಚಿತ್ತವನ್ನು ನೆಟ್ಟಿದ್ದಾರೆ. ಕೊನೆಗೂ ಕ್ಷೇತ್ರದಿಂದ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ. ಇದೀಗ ಕಾಂಗ್ರೆಸ್‌ ನಾಯಕರು ಪಕ್ಷದಲ್ಲಿನ ಭಿನ್ನಮತ ಶಮನ ಮಾಡಲು ಮುಂದಾಗಿದ್ದು, ಆದರೂ ಕ್ಷೇತ್ರದಲ್ಲಿ ಬೂದಿಮುಚ್ಚಿದ ಕೆಂಡದಂತೆ ಭಿನ್ನಮತ ಮುಂದುವರೆದಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸೋಲು, ಗೆಲುವಿನ ಲೆಕ್ಕಾಚಾರ ಹೇಗಿದೆ?

ಇನ್ನು ಬಿ.ಮುನೀಗೌಡ ಅವರು 2013ರಲ್ಲಿ ಪಕ್ಷೇತರರಾಗಿ ಮತ್ತು 2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಈ ವೇಳೆ ಅವರು ಕಾಂಗ್ರೆಸ್‌ ಪಕ್ಷದ ಟಿ. ವೆಂಕಟರಮಣಯ್ಯನವರ ವಿರುದ್ಧ ಎರಡು ಬಾರಿಯೂ ಸೋಲುಂಡಿದ್ದರು. ಇದೀಗ 2023ರ ವಿಧಾನಸಭೆ ಚುನಾವಣೆಯಲ್ಲಿ ಅನುಕಂಪದ ಆಧಾರದ ಮೇಲೆ ಗೆಲುವು ಸಾಧಿಸಲಿದ್ದಾರೆನ್ನುವ ನಂಬಿಕೆಯಿಂದ ಮೊದಲ ಪಟ್ಟಿಯಲ್ಲೇ ಬಿ.ಮುನೇಗೌಡರನ್ನು ಜೆಡಿಎಸ್‌ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.

ಅಭ್ಯರ್ಥಿ ಘೋಷಣೆಗೂ ಮುಂಚೆಯೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರವೇ ಇತ್ತು. ಆದರೆ ಇದೀಗ ಅಭ್ಯರ್ಥಿಯನ್ನು ಘೋಷಿಸಿದ ಮೇಲೆ ಪ್ರಚಾರವೇ ಇಲ್ಲದಂತಾಗಿದೆ. ಪಕ್ಷದ ಹಿರಿಯ ನಾಯಕರು ಭಿನ್ನಮತದಿಂದ ಇದ್ದವರನ್ನು ಒಂದೇ ವೇದಿಕೆಯಡಿ ಸೇರಿಸಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ಇದು ಮತದಾರರಲ್ಲಿ ಗೊಂದಲ ಮೂಡಿಸಿದಂತಾಗಿದೆ.

ಇನ್ನು ಮಹಾಮಾರಿ ಕೊರೊನಾ ಸಮಯದಲ್ಲಿ ಜನರಿಗೆ ಆಹಾರ ಕಿಟ್‌ಗಳನ್ನು ಹಂಚಿಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಟಿಕೆಟ್‌ ಆಕಾಂಕ್ಷಿ ದೀರಜ್‌ ಮುನಿರಾಜು ಪಕ್ಷ ಸಂಘಟನೆಯನ್ನ ಗ್ರಾಮೀಣ ಪ್ರದೇಶದವರೆಗೂ ವಿಸ್ತರಿಸಿದ್ದಾರೆ. ಆದರೂ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಸಮುದಾಯದ ಯಾರಿಗಾದರೂ ಒಬ್ಬರಿಗೆ ಟಿಕೆಟ್‌ ಕೊಡಬೇಕೆಂದು ಸಮುದಾಯದ ಮುಖಂಡರು ಬಿಜೆಪಿ ವರುಷ್ಠರಿಗೆ ಆಗ್ರಹಿಸಿದ್ದಾರೆ. ಈ ನಡುವೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆಗಿದ್ದ ಸಿ.ಎಸ್‌.ಕರೀಗೌಡರ ಹೆಸರೂ ಬಿಜೆಪಿ ವಲಯದಲ್ಲಿ ಜೋರಾಗಿ ಪ್ರತಿಧ್ವನಿಸುತ್ತಿದೆ.

Doddaballapur Karnataka Elections

ವರ್ಷ ವಿಜೇತರು ಮತಗಳು ಸೋತವರು ಮತಗಳು
2018 ಟಿ.ವೆಂಕಟರಮಣಯ್ಯ (ಕಾಂಗ್ರೆಸ್) 73,225 ಬಿ.ಮುನೇಗೌಡ (ಜೆಡಿಎಸ್‌) 63,280
2013 ಟಿ.ವೆಂಕಟರಮಣಯ್ಯ (ಕಾಂಗ್ರೆಸ್) 38,877 ಬಿ. ಮುನೇಗೌಡ (ಪಕ್ಷೇತರ) 37,430
2008 ಜೆ.ನರಸಿಂಹ ಸ್ವಾಮಿ (ಕಾಂಗ್ರೆಸ್) 51,724 ಸಿ. ಚನ್ನಿಗಪ್ಪ (ಜೆಡಿಎಸ್‌) 47,970

ಒಟ್ಟಿನಲ್ಲಿ ಬಿಜೆಪಿ ನಾಯಕರು ಒಕ್ಕಲಿಗರ ಮತಗಳನ್ನು ಕಬಳಿಸಲು ಕ್ಷೇತ್ರದಲ್ಲಿ ಯಾರನ್ನು ಸ್ಪರ್ಧೆಗಿಳಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+