Doddaballapur Elections : ಬಂಡಾಯದ ನೆಲದಲ್ಲಿ ಕಾಂಗ್ರೆಸ್, ಜೆಡಿಎಸ್ಗೆ ಸೆಡ್ಡು ಹೊಡೆಯಲಿದ್ಯಾ ಬಿಜೆಪಿ?
ದೊಡ್ಡಬಳ್ಳಾಪುರ, ಮಾರ್ಚ್, 26: ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮತ್ತೊಂದೆ ಚುನಾವಣೆ ಹತ್ತಿರವಾಗುತ್ತಿಂದತೆ ರಾಜಕಾರಣಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗಾದರೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸ್ಥಿತಿ ಗತಿ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
ಇದೀಗ ಕ್ಷೇತ್ರದ ರಾಜಕೀಯದಲ್ಲಿ ಹಲವಾರು ಬದಲಾವಣೆಗಳು ಆಗುತ್ತಲೇ ಇವೆ. ಆದ್ದರಿಂದ ವಿಧಾನಸಭೆ ಅಖಾಡದಲ್ಲಿ ಸಾಂಪ್ರದಾಯಿಕ ಎದುರಾಳಿ ಎಂದು ಗುರುತಿಸಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಸ್ಥಾನಗಳು ಈ ಬಾರಿಯ ಚುನಾವಣೆಯಲ್ಲಿ ಬದಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ಚುನಾವಣೆಗೂ ಕೂಡ ಕಾಂಗ್ರೆಸ್, ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ದೊಡ್ಡಬಳ್ಳಾಪುರ ಕ್ಷೇತ್ರ ಪರಿಚಯ
ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ದೊಡ್ಡಬಳ್ಳಾಪುರ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದೆ. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯ.ಟಿ. ವೆಂಕಟರಮಣಯ್ಯ ಜಯ ಗಳಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಜನತಾ ದಳ (ಜಾತ್ಯತೀತ)ದ ಮುನೇಗೌಡ 9,945 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಹಾಗಾದರೆ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಾತ್ಯಾತೀತ ಪಕ್ಷಗಳಿಗೇ ಬೆಂಬಲ ಯಾಕೆ?
ಮತದಾರ ಪ್ರಭುಗಳು ಮೊದಲಿನಿಂದಲೂ ಜಾತ್ಯಾತೀತ ಪಕ್ಷಗಳನ್ನೇ ಬೆಂಬಲಿಸುತ್ತಾ ಬಂದಿದ್ದಾರೆ ಎನ್ನುವುದು ಕ್ಷೇತ್ರದ ವಿಶೇಷತೆಯಾಗಿದೆ. ಆದ್ದರಿಂದ ಆರ್.ಎಲ್. ಜಾಲಪ್ಪನವರ ಕುಟುಂಬವು ಸುಮಾರು 35 ವರ್ಷಗಳ ಕಾಲ ಕ್ಷೇತ್ರದಲ್ಲಿ ಶಾಸಕರಾಗಿ ಹಿಡಿತ ಸಾಧಿಸಿದೆ ಎನ್ನಲಾಗಿದೆ. ಇನ್ನು ಜಾಲಪ್ಪನವರ ಪುತ್ರ ಜೆ.ನರಸಿಂಹಸ್ವಾಮಿಯವರು ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆ ಆಗಿದ್ದು, ನಂತರ ಧರ್ಮ ಆಧಾರಿತ ಪಕ್ಷದ ಶಾಸಕರಾಗಿ ಆಯ್ಕೆ ಆದರು. ಆದರೆ ಕೇವಲ ಐದೇ ವರ್ಷದಲ್ಲಿ ಈ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡಿತ್ತು.

ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸಿದ ಕಾಂಗ್ರೆಸ್ನ ಟಿ.ವೆಂಕಟರಮಣಯ್ಯನವರು ಇದೀಗ ಹ್ಯಾಟ್ರಿಕ್ ಗೆಲುವಿನೆಡೆಗೆ ಚಿತ್ತವನ್ನು ನೆಟ್ಟಿದ್ದಾರೆ. ಕೊನೆಗೂ ಕ್ಷೇತ್ರದಿಂದ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ. ಇದೀಗ ಕಾಂಗ್ರೆಸ್ ನಾಯಕರು ಪಕ್ಷದಲ್ಲಿನ ಭಿನ್ನಮತ ಶಮನ ಮಾಡಲು ಮುಂದಾಗಿದ್ದು, ಆದರೂ ಕ್ಷೇತ್ರದಲ್ಲಿ ಬೂದಿಮುಚ್ಚಿದ ಕೆಂಡದಂತೆ ಭಿನ್ನಮತ ಮುಂದುವರೆದಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಸೋಲು, ಗೆಲುವಿನ ಲೆಕ್ಕಾಚಾರ ಹೇಗಿದೆ?
ಇನ್ನು ಬಿ.ಮುನೀಗೌಡ ಅವರು 2013ರಲ್ಲಿ ಪಕ್ಷೇತರರಾಗಿ ಮತ್ತು 2018ರಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಈ ವೇಳೆ ಅವರು ಕಾಂಗ್ರೆಸ್ ಪಕ್ಷದ ಟಿ. ವೆಂಕಟರಮಣಯ್ಯನವರ ವಿರುದ್ಧ ಎರಡು ಬಾರಿಯೂ ಸೋಲುಂಡಿದ್ದರು. ಇದೀಗ 2023ರ ವಿಧಾನಸಭೆ ಚುನಾವಣೆಯಲ್ಲಿ ಅನುಕಂಪದ ಆಧಾರದ ಮೇಲೆ ಗೆಲುವು ಸಾಧಿಸಲಿದ್ದಾರೆನ್ನುವ ನಂಬಿಕೆಯಿಂದ ಮೊದಲ ಪಟ್ಟಿಯಲ್ಲೇ ಬಿ.ಮುನೇಗೌಡರನ್ನು ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಅಭ್ಯರ್ಥಿ ಘೋಷಣೆಗೂ ಮುಂಚೆಯೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರವೇ ಇತ್ತು. ಆದರೆ ಇದೀಗ ಅಭ್ಯರ್ಥಿಯನ್ನು ಘೋಷಿಸಿದ ಮೇಲೆ ಪ್ರಚಾರವೇ ಇಲ್ಲದಂತಾಗಿದೆ. ಪಕ್ಷದ ಹಿರಿಯ ನಾಯಕರು ಭಿನ್ನಮತದಿಂದ ಇದ್ದವರನ್ನು ಒಂದೇ ವೇದಿಕೆಯಡಿ ಸೇರಿಸಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ಇದು ಮತದಾರರಲ್ಲಿ ಗೊಂದಲ ಮೂಡಿಸಿದಂತಾಗಿದೆ.
ಇನ್ನು ಮಹಾಮಾರಿ ಕೊರೊನಾ ಸಮಯದಲ್ಲಿ ಜನರಿಗೆ ಆಹಾರ ಕಿಟ್ಗಳನ್ನು ಹಂಚಿಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಟಿಕೆಟ್ ಆಕಾಂಕ್ಷಿ ದೀರಜ್ ಮುನಿರಾಜು ಪಕ್ಷ ಸಂಘಟನೆಯನ್ನ ಗ್ರಾಮೀಣ ಪ್ರದೇಶದವರೆಗೂ ವಿಸ್ತರಿಸಿದ್ದಾರೆ. ಆದರೂ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಸಮುದಾಯದ ಯಾರಿಗಾದರೂ ಒಬ್ಬರಿಗೆ ಟಿಕೆಟ್ ಕೊಡಬೇಕೆಂದು ಸಮುದಾಯದ ಮುಖಂಡರು ಬಿಜೆಪಿ ವರುಷ್ಠರಿಗೆ ಆಗ್ರಹಿಸಿದ್ದಾರೆ. ಈ ನಡುವೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆಗಿದ್ದ ಸಿ.ಎಸ್.ಕರೀಗೌಡರ ಹೆಸರೂ ಬಿಜೆಪಿ ವಲಯದಲ್ಲಿ ಜೋರಾಗಿ ಪ್ರತಿಧ್ವನಿಸುತ್ತಿದೆ.
Doddaballapur Karnataka Elections
| ವರ್ಷ | ವಿಜೇತರು | ಮತಗಳು | ಸೋತವರು | ಮತಗಳು |
| 2018 | ಟಿ.ವೆಂಕಟರಮಣಯ್ಯ (ಕಾಂಗ್ರೆಸ್) | 73,225 | ಬಿ.ಮುನೇಗೌಡ (ಜೆಡಿಎಸ್) | 63,280 |
| 2013 | ಟಿ.ವೆಂಕಟರಮಣಯ್ಯ (ಕಾಂಗ್ರೆಸ್) | 38,877 | ಬಿ. ಮುನೇಗೌಡ (ಪಕ್ಷೇತರ) | 37,430 |
| 2008 | ಜೆ.ನರಸಿಂಹ ಸ್ವಾಮಿ (ಕಾಂಗ್ರೆಸ್) | 51,724 | ಸಿ. ಚನ್ನಿಗಪ್ಪ (ಜೆಡಿಎಸ್) | 47,970 |
ಒಟ್ಟಿನಲ್ಲಿ ಬಿಜೆಪಿ ನಾಯಕರು ಒಕ್ಕಲಿಗರ ಮತಗಳನ್ನು ಕಬಳಿಸಲು ಕ್ಷೇತ್ರದಲ್ಲಿ ಯಾರನ್ನು ಸ್ಪರ್ಧೆಗಿಳಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications