ಮಾಜಿ ಪ್ರಿಯಕರನ ತುಂಡಾಗಿ ಕತ್ತರಿಸಿ ಮೊರಕ್ಕೊ ಖಾದ್ಯ ಮಾಡಿದ್ದ ಮಹಿಳೆ
ಇದೊಂದು ವಿಲಕ್ಷಣ ಘಟನೆ. ವರದಿ ಆಗಿರುವುದು ಅಬುಧಾಬಿಯಿಂದ. ಮಹಿಳೆಯೊಬ್ಬಳು ತನ್ನ ಮಾಜಿ ಪ್ರಿಯಕರನನ್ನು ಕೊಂದು, ಆತನ ದೇಹದ ಕೆಲ ಭಾಗದಲ್ಲಿ ಮೊರಕ್ಕೊದ ಖಾದ್ಯವೊಂದನ್ನು ಮಾಡಿ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಣಬಡಿಸಿದ್ದಾಳೆ.
ಮೂವತ್ತು ವರ್ಷದ ಈ ಮಹಿಳೆ ತನ್ನ ಮಾಜಿ ಪ್ರಿಯಕರನನ್ನು ಕೊಂದಿದ್ದಾಗಿ, ಆತನ ದೇಹದ ಭಾಗಗಳನ್ನು ತುಂಡಾಗಿ ಕತ್ತರಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಅಲ್ಲಿನ ಮಾಧ್ಯಮವೊಂದರ ಮಾಹಿತಿ ಪ್ರಕಾರ, ಆ ಮಹಿಳೆಯ ಪ್ರಿಯಕರನಿಗೆ ಇಪ್ಪತ್ತರ ಹರೆಯ. ಆಕೆ ಜತೆಗೆ ಸಂಬಂಧ ಕಡಿದುಕೊಂಡಿದ್ದರಿಂದ ಕೊಲೆ ಮಾಡಿರುವುದಾಗಿ ಹೇಳಿದ್ದಾಳೆ.
ಈ ಕೊಲೆ ತಿಂಗಳುಗಳ ಹಿಂದೆಯೇ ನಡೆದಿದೆ. ಆದರೆ ಪ್ರಕರಣ ಬೆಳಕಿಗೆ ಬಂದಿರುವುದು ಈಚೆಗೆ. ಮೃತನ ಸಹೋದರ ಇವರಿಬ್ಬರು ಇದ್ದ ಮನೆಗೆ ತೆರಳಿ, ಹುಡುಕಾಟ ನಡೆಸಿದ್ದಾನೆ. ಆಗ ಆ ಮಹಿಳೆ, ನನಗೆ ಅವನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆತನಿಗೆ ಬೇರೆ ಹೆಂಗಸಿನ ಜತೆಗೆ ಸಂಪರ್ಕ ಇತ್ತು ಎಂದಿದ್ದಾಳೆ.

ಆದರೆ, ಅಲ್ಲೇ ಇದ್ದ ಮಿಕ್ಸರ್ ನಂಥ ಯಂತ್ರದಲ್ಲಿ ಮನುಷ್ಯರ ಹಲ್ಲುಗಳು ಆತನಿಗೆ ಕಾಣಿಸಿವೆ. ಇದರಿಂದ ಮಹಿಳೆಯ ಬಂಧನ ಸಾಧ್ಯವಾಗಿದ್ದು, ಕೊಲೆ ಪ್ರಕರಣವು ಬಯಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications