ಅಬುದಾಬಿ ಲಾಟರಿಯಲ್ಲಿ ಬಂಪರ್ ಹೊಡೆದ ಕೇರಳಿಗ
ಅಬುದಾಬಿ, ಆಗಸ್ಟ್ 3: ಅಬುದಾಬಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಡ್ರಾ ಮಾಡಲಾದ ಲಾಟರಿಯಲ್ಲಿ ಕೇರಳದ ವ್ಯಕ್ತಿಯೊಬ್ಬರು ಬರೋಬ್ಬರಿ 10 ಮಿಲಿಯನ್ ದಿರ್ಹಾಮ್ ಗೆದ್ದಿದ್ದಾರೆ.
ಶುಕ್ರವಾರ ಬೆಳಿಗ್ಗೆ ವಿಮಾನ ನಿಲ್ದಾಣದಲ್ಲಿ ನಡೆದ ಬಿಗ್ ಟಿಕೆಟ್ ಲಾಟರಿ ಡ್ರಾದಲ್ಲಿ ಈ ಭಾರಿ ಮೊತ್ತದ ಹಣ ಕೇರಳದ ವಲಸಿಗ ವಳಪಳ್ಳಿ ಯೊಹಾನನ್ ಸಿಮೊನ್ ಅವರಿಗೆ ಒಲಿದಿದೆ.
ವಿಶೇಷವೆಂದರೆ ಟಾಪ್ 10 ವಿಜೇತರ ಪಟ್ಟಿಯಲ್ಲಿ ತೈಸಿರ್ ನಸರ್ ಸಾಬಿಹ್ ಎಂಬ ಸಿರಿಯಾದ ವ್ಯಕ್ತಿ ಹೊರತುಪಡಿಸಿ ಉಳಿದವರೆಲ್ಲರೂ ಭಾರತದವರೇ ಆಗಿದ್ದಾರೆ.

ಅಬುದಾಬಿ ಲಾಟರಿ ಭಾರತೀಯರ ಪಾಲಿಗೆ ಅದೃಷ್ಟದ್ದಾಗಿದೆ ಎಂದೇ ಪರಿಗಣಿಸಲಾಗಿದೆ. ಈ ವಾರದ ಆರಂಭದಲ್ಲಿ ಭಾರತದ ಸಂದೀಪ್ ಮೆನನ್ ಅವರು 1 ಮಿಲಿಯನ್ ಡಾಲರ್ ಗೆದ್ದಿದ್ದರು. ಶಾಂತಿ ಬೋಸ್ ಎಂಬುವವರು ಬಿಎಂಡ್ಬ್ಲ್ಯೂ ಆರ್ ನೈನ್ ಟಿ ಮೋಟಾರ್ಬೈಕ್ ಜಯಿಸಿದ್ದರು.
ತಮಗೆ ಕರೆ ಬಂದಾಗ ಆರಂಭದಲ್ಲಿ ಅದು ಹುಸಿ ಕರೆ ಎಂದೇ ಭಾವಿಸಿದ್ದಾಗಿ ಸಿಮೊನ್ ಹೇಳಿದ್ದಾರೆ. ಯುಎಇಯಲ್ಲಿ 13 ವರ್ಷ ಕಳೆದ ಬಳಿಕ ದೇವರು ಆಶೀರ್ವದಿಸಿದ್ದಾನೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಮೂವರು ಮಕ್ಕಳ ತಂದೆಯಾಗಿರುವ ಅವರು ಕೆಲವು ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು. ಅಬುದಾಬಿಯಲ್ಲಿ ಅವರು ವ್ಯಾಪಾರ ಮಾಡುತ್ತಿದ್ದು, ಕೇರಳದಲ್ಲಿರುವ ಸಂಸ್ಥೆಯೊಂದಕ್ಕೆ ಈ ಹಣದ ಭಾಗವನ್ನು ದೇಣಿಗೆಯಾಗಿ ನೀಡಲು ಅವರು ಉದ್ದೇಶಿಸಿದ್ದಾರೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications