ಅಬುದಾಬಿ ಲಾಟರಿಯಲ್ಲಿ ಬಂಪರ್ ಹೊಡೆದ ಕೇರಳಿಗ
ಅಬುದಾಬಿ, ಆಗಸ್ಟ್ 3: ಅಬುದಾಬಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಡ್ರಾ ಮಾಡಲಾದ ಲಾಟರಿಯಲ್ಲಿ ಕೇರಳದ ವ್ಯಕ್ತಿಯೊಬ್ಬರು ಬರೋಬ್ಬರಿ 10 ಮಿಲಿಯನ್ ದಿರ್ಹಾಮ್ ಗೆದ್ದಿದ್ದಾರೆ.
ಶುಕ್ರವಾರ ಬೆಳಿಗ್ಗೆ ವಿಮಾನ ನಿಲ್ದಾಣದಲ್ಲಿ ನಡೆದ ಬಿಗ್ ಟಿಕೆಟ್ ಲಾಟರಿ ಡ್ರಾದಲ್ಲಿ ಈ ಭಾರಿ ಮೊತ್ತದ ಹಣ ಕೇರಳದ ವಲಸಿಗ ವಳಪಳ್ಳಿ ಯೊಹಾನನ್ ಸಿಮೊನ್ ಅವರಿಗೆ ಒಲಿದಿದೆ.
ವಿಶೇಷವೆಂದರೆ ಟಾಪ್ 10 ವಿಜೇತರ ಪಟ್ಟಿಯಲ್ಲಿ ತೈಸಿರ್ ನಸರ್ ಸಾಬಿಹ್ ಎಂಬ ಸಿರಿಯಾದ ವ್ಯಕ್ತಿ ಹೊರತುಪಡಿಸಿ ಉಳಿದವರೆಲ್ಲರೂ ಭಾರತದವರೇ ಆಗಿದ್ದಾರೆ.

ಅಬುದಾಬಿ ಲಾಟರಿ ಭಾರತೀಯರ ಪಾಲಿಗೆ ಅದೃಷ್ಟದ್ದಾಗಿದೆ ಎಂದೇ ಪರಿಗಣಿಸಲಾಗಿದೆ. ಈ ವಾರದ ಆರಂಭದಲ್ಲಿ ಭಾರತದ ಸಂದೀಪ್ ಮೆನನ್ ಅವರು 1 ಮಿಲಿಯನ್ ಡಾಲರ್ ಗೆದ್ದಿದ್ದರು. ಶಾಂತಿ ಬೋಸ್ ಎಂಬುವವರು ಬಿಎಂಡ್ಬ್ಲ್ಯೂ ಆರ್ ನೈನ್ ಟಿ ಮೋಟಾರ್ಬೈಕ್ ಜಯಿಸಿದ್ದರು.
ತಮಗೆ ಕರೆ ಬಂದಾಗ ಆರಂಭದಲ್ಲಿ ಅದು ಹುಸಿ ಕರೆ ಎಂದೇ ಭಾವಿಸಿದ್ದಾಗಿ ಸಿಮೊನ್ ಹೇಳಿದ್ದಾರೆ. ಯುಎಇಯಲ್ಲಿ 13 ವರ್ಷ ಕಳೆದ ಬಳಿಕ ದೇವರು ಆಶೀರ್ವದಿಸಿದ್ದಾನೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಮೂವರು ಮಕ್ಕಳ ತಂದೆಯಾಗಿರುವ ಅವರು ಕೆಲವು ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು. ಅಬುದಾಬಿಯಲ್ಲಿ ಅವರು ವ್ಯಾಪಾರ ಮಾಡುತ್ತಿದ್ದು, ಕೇರಳದಲ್ಲಿರುವ ಸಂಸ್ಥೆಯೊಂದಕ್ಕೆ ಈ ಹಣದ ಭಾಗವನ್ನು ದೇಣಿಗೆಯಾಗಿ ನೀಡಲು ಅವರು ಉದ್ದೇಶಿಸಿದ್ದಾರೆ.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications