ಸೌದಿ ಅರೇಬಿಯಾದ ತೈಲ ಘಟಕಗಳ ಮೇಲೆ ಡ್ರೋಣ್ ದಾಳಿ
ದುಬೈ, ಸೆಪ್ಟೆಂಬರ್ 14: ಜಗತ್ತಿನ ಅತ್ಯಂತ ದೊಡ್ಡ ತೈಲ ಸಂಸ್ಕರಣಾ ಘಟಕವಾದ ಸೌದಿ ಅರೇಬಿಯಾದ ಸೌದಿ ಅರಾಮ್ಕೋದ ಮೇಲೆ ಶನಿವಾರ ಡ್ರೋನ್ ದಾಳಿ ನಡೆದಿದೆ.
ಅರಾಮ್ಕೋ ತೈಲ ಕಂಪೆನಿಯ ಅಬ್ಕೈಕ್ ಮತ್ತು ಖುರಾಯಿಸ್ ಘಟಕಗಳ ಮೇಲೆ ದಾಳಿ ನಡೆದಿದ್ದು, ಯೆಮನ್ನ ಹೌತಿ ಬಂಡುಕೋರರು ಇದರ ಹೊಣೆ ಹೊತ್ತಿದ್ದಾರೆ.
ಡ್ರೋನ್ ದಾಳಿಗಳ ಬೆನ್ನಲ್ಲೇ ತೈಲ ಘಟಕಗಳಲ್ಲಿ ಭಾರಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಎರಡು ಕಡೆ ಡ್ರೋಣ್ ದಾಳಿಯಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹೊತೊ ದೊರಕಿತು. ಕೂಡಲೇ ಬೆಂಕಿ ನಂದಿಸುವ ಕಾರ್ಯ ಆರಂಭವಾಯಿತು.
ದಾಳಿಗೆ ಹತ್ತು ಡ್ರೋಣ್ಗಳನ್ನು ಬಳಸಿದ್ದಾಗಿ ಹೌತಿ ಬಂಡುಕೋರರು ಹೇಳಿಕೊಂಡಿದ್ದಾರೆ. ಸೌದಿ ಅರೇಬಿಯಾದ ಎಲ್ಲೆಡೆ ವ್ಯಾಪಕ ದಾಳಿಗಳನ್ನು ನಡೆಸಿದ್ದಾಗಿ ಕೂಡ ಅವರು ಎಚ್ಚರಿಕೆ ನೀಡಿದ್ದಾರೆ. 'ಈ ದಾಳಿಗಳು ನಮ್ಮ ಹಕ್ಕು. ನಮ್ಮ ದಾಳಿಯ ಗುರಿಗಳನ್ನು ಇನ್ನಷ್ಟು ವಿಸ್ತರಿಸುತ್ತೇವೆ ಎಂದು ಸೌದಿಗಳಿಗೆ ಎಚ್ಚರಿಕೆ ನೀಡುತ್ತೇವೆ' ಎಂದು ಬಂಡುಕೋರರ ವಕ್ತಾರ ತಮ್ಮ ಅಲ್ ಮಾಸಿರಾಹ್ ಟಿವಿಯಲ್ಲಿ ಪ್ರಕಟಣೆ ನೀಡಿದ್ದಾರೆ.
'ಕಳೆದ ಐದು ವರ್ಷಗಳಲ್ಲಿ ನಮ್ಮ ನಾಗರಿಕರನ್ನು ಗುರಿಯನ್ನಾಗಿರಿಸಿ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತ್ಯುತ್ತರವಾಗಿ ದಾಳಿ ನಡೆಸುವುದು ನಮ್ಮ ಹಕ್ಕು' ಎಂದಿದ್ದಾರೆ.
ಹೌತಿ ಸಂಘಟನೆಗಳ ಒತ್ತಡದಿಂದಾಗಿ ಅಧಿಕಾರದಿಂದ ಕೆಳಗಿಳಿದಿದ್ದ ಯೆಮನ್ ಅಧ್ಯಕ್ಷ ಅಬ್ದ್ ರಬ್ಬು ಮನ್ಸೌರ್ ಹಾದಿ ಅವರಿಗೆ ಬೆಂಬಲವಾಗಿ ಸೌದಿ ನೇತೃತ್ವದ ಮೈತ್ರಿಕೂಟ 2015ರಲ್ಲಿ ಮಧ್ಯಪ್ರವೇಶ ನಡೆಸಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications