ಸೌದಿ ಅರೇಬಿಯಾದ ತೈಲ ಘಟಕಗಳ ಮೇಲೆ ಡ್ರೋಣ್ ದಾಳಿ
ದುಬೈ, ಸೆಪ್ಟೆಂಬರ್ 14: ಜಗತ್ತಿನ ಅತ್ಯಂತ ದೊಡ್ಡ ತೈಲ ಸಂಸ್ಕರಣಾ ಘಟಕವಾದ ಸೌದಿ ಅರೇಬಿಯಾದ ಸೌದಿ ಅರಾಮ್ಕೋದ ಮೇಲೆ ಶನಿವಾರ ಡ್ರೋನ್ ದಾಳಿ ನಡೆದಿದೆ.
ಅರಾಮ್ಕೋ ತೈಲ ಕಂಪೆನಿಯ ಅಬ್ಕೈಕ್ ಮತ್ತು ಖುರಾಯಿಸ್ ಘಟಕಗಳ ಮೇಲೆ ದಾಳಿ ನಡೆದಿದ್ದು, ಯೆಮನ್ನ ಹೌತಿ ಬಂಡುಕೋರರು ಇದರ ಹೊಣೆ ಹೊತ್ತಿದ್ದಾರೆ.
ಡ್ರೋನ್ ದಾಳಿಗಳ ಬೆನ್ನಲ್ಲೇ ತೈಲ ಘಟಕಗಳಲ್ಲಿ ಭಾರಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಎರಡು ಕಡೆ ಡ್ರೋಣ್ ದಾಳಿಯಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹೊತೊ ದೊರಕಿತು. ಕೂಡಲೇ ಬೆಂಕಿ ನಂದಿಸುವ ಕಾರ್ಯ ಆರಂಭವಾಯಿತು.
ದಾಳಿಗೆ ಹತ್ತು ಡ್ರೋಣ್ಗಳನ್ನು ಬಳಸಿದ್ದಾಗಿ ಹೌತಿ ಬಂಡುಕೋರರು ಹೇಳಿಕೊಂಡಿದ್ದಾರೆ. ಸೌದಿ ಅರೇಬಿಯಾದ ಎಲ್ಲೆಡೆ ವ್ಯಾಪಕ ದಾಳಿಗಳನ್ನು ನಡೆಸಿದ್ದಾಗಿ ಕೂಡ ಅವರು ಎಚ್ಚರಿಕೆ ನೀಡಿದ್ದಾರೆ. 'ಈ ದಾಳಿಗಳು ನಮ್ಮ ಹಕ್ಕು. ನಮ್ಮ ದಾಳಿಯ ಗುರಿಗಳನ್ನು ಇನ್ನಷ್ಟು ವಿಸ್ತರಿಸುತ್ತೇವೆ ಎಂದು ಸೌದಿಗಳಿಗೆ ಎಚ್ಚರಿಕೆ ನೀಡುತ್ತೇವೆ' ಎಂದು ಬಂಡುಕೋರರ ವಕ್ತಾರ ತಮ್ಮ ಅಲ್ ಮಾಸಿರಾಹ್ ಟಿವಿಯಲ್ಲಿ ಪ್ರಕಟಣೆ ನೀಡಿದ್ದಾರೆ.
'ಕಳೆದ ಐದು ವರ್ಷಗಳಲ್ಲಿ ನಮ್ಮ ನಾಗರಿಕರನ್ನು ಗುರಿಯನ್ನಾಗಿರಿಸಿ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತ್ಯುತ್ತರವಾಗಿ ದಾಳಿ ನಡೆಸುವುದು ನಮ್ಮ ಹಕ್ಕು' ಎಂದಿದ್ದಾರೆ.
ಹೌತಿ ಸಂಘಟನೆಗಳ ಒತ್ತಡದಿಂದಾಗಿ ಅಧಿಕಾರದಿಂದ ಕೆಳಗಿಳಿದಿದ್ದ ಯೆಮನ್ ಅಧ್ಯಕ್ಷ ಅಬ್ದ್ ರಬ್ಬು ಮನ್ಸೌರ್ ಹಾದಿ ಅವರಿಗೆ ಬೆಂಬಲವಾಗಿ ಸೌದಿ ನೇತೃತ್ವದ ಮೈತ್ರಿಕೂಟ 2015ರಲ್ಲಿ ಮಧ್ಯಪ್ರವೇಶ ನಡೆಸಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications