ದುಬೈನ ಮೊದಲ ಹಿಂದೂ ದೇಗುಲಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಭೇಟಿ
ಅಬುಧಾಬಿ, ಸೆಪ್ಟೆಂಬರ್ 01: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಜೈ ಶಂಕರ್, ಇದು ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ ಎಂದು ಬಣ್ಣಿಸಿದರು. ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ ಎಸ್ ಜೈಶಂಕರ್ ಅವರು ದೇವಾಲಯದ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು.
ಗಣೇಶ ಚತುರ್ಥಿಯಂದು, ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ @BAPS ಹಿಂದೂ ದೇವಾಲಯಕ್ಕೆ ಭೇಟಿ ನೀಡಲು ಹರ್ಷಿತನಾಗಿದ್ದೇನೆ. ಈ ತ್ವರಿತ ಪ್ರಗತಿಯನ್ನು ನೋಡಲು ನನಗೆ ಸಂತೋಷವಾಗಿದೆ. ಇಲ್ಲಿ ಬಾಪ್ಸ್ ತಂಡ, ಸಮುದಾಯ ಬೆಂಬಲಿಗರು ಮತ್ತು ಭಕ್ತರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಇಲ್ಲಿರುವ ಎಲ್ಲರ ಭಕ್ತಿಯನ್ನು ಆಳತೆ ಅರಿವಾಗಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಬಳಿಕ ಅವರು ದುಬೈನ ಸಚಿವ ಶೇಖ್ ನಹ್ಯಾನ್ ಬಿನ್ ಮಬಾರಕ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿದರು. ಭಾರತೀಯ ಸಮುದಾಯ, ಯೋಗ ಚಟುವಟಿಕೆಗಳು, ಕ್ರಿಕೆಟ್ ಮತ್ತು ಸಾಂಸ್ಕೃತಿಕ ಸಹಕಾರಕ್ಕಾಗಿ ಅವರ ಬಲವಾದ ಬೆಂಬಲವನ್ನು ಶ್ಲಾಘಿಸಿದರು.

ವಿದೇಶಾಂಗ ಸಚಿವ ಜೈ ಶಂಕರ್ ಅವರ ಭೇಟಿಯ ಶುಭ ಆರಂಭವಾಗಿದೆ. ವಿದೇಶಾಂಗ ಸಚಿವರು ಬಾಪ್ಸ್ ಅಬುಧಾಬಿ ಮಂದಿರಕ್ಕೆ ಭೇಟಿ ನೀಡಿ ಆ ಸಂಕೀರ್ಣಕ್ಕೆ ವಾಸ್ತುಶಿಲ್ಪದಲ್ಲಿ ಇಟ್ಟಿಗೆಯನ್ನು ಹಾಕಿದ್ದಾರೆ. ಶಾಂತಿ, ಸಹನೆ ಮತ್ತು ಸಾಮರಸ್ಯದ ಸಂಕೇತವಾದ ಸಾಂಪ್ರದಾಯಿಕ ದೇವಾಲಯವನ್ನು ನಿರ್ಮಿಸುವಲ್ಲಿ ಎಲ್ಲಾ ಭಾರತೀಯರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಹಿಂದೆ ಟ್ವೀಟ್ ಮಾಡಿದೆ.

55,000 ಚದರ ಮೀಟರ್ ಜಾಗದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಈ ರಚನೆಯನ್ನು ಭಾರತೀಯ ದೇವಾಲಯದ ಕುಶಲಕರ್ಮಿಗಳು ಕೈಯಿಂದ ಕೆತ್ತನೆ ಮಾಡುತ್ತಿದ್ದಾರೆ. ಇದನ್ನು ಯುಎಇಯಲ್ಲಿ ಜೋಡಿಸಲಾಗುತ್ತದೆ. ಇದು ಮಧ್ಯಪ್ರಾಚ್ಯದಲ್ಲಿ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದು ದೇವಾಲಯವಾಗಲಿದೆ. ಯುಎಇಯಲ್ಲಿದ್ದಾಗ, ಎಸ್ ಜೈಶಂಕರ್ ಅವರು ತಮ್ಮ ಸಚಿವ ಗೆಳೆಯ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸುತ್ತಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications