ಕರ್ನಾಟಕದ ಮಯಾಂಕ್ ಆಟವನ್ನು ಹೊಗಳಿದ ಕಿಚ್ಚ ಸುದೀಪ
ಬೆಂಗಳೂರು, ಸೆ. 21: ಒಂದೆಡೆ ಸತತವಾಗಿ ವಿಕೆಟ್ ಉದುರುತ್ತಿದ್ದರೂ ನೆಲಕಚ್ಚಿ ನಿಂತು, ಕಿಚ್ಚಿನ ಹೋರಾಟ ನಡೆಸಿ ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂಡ ಕರ್ನಾಟಕದ ಆಟಗಾರ ಮಯಾಂಕ್ ಅಗರವಾಲ್ ಆಟಕ್ಕೆ ನಟ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯುಎಇಯಲ್ಲಿ ನಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2020 ಎರಡನೇ ಪಂದ್ಯ ರೋಚಕ ಅಂತ್ಯ ಕಂಡಿದೆ. ಸೋಲಿನ ದವಡೆಯಲ್ಲಿದ್ದ ಪಂಜಾಬ್ ತಂಡಕ್ಕೆ ಆಸರೆಯಾಗಿ ಅರ್ಧಶತಕ ಸಿಡಿಸಿದ ಮಯಾಂಕ್ ಅಗರವಾಲ್ ಅವರು 60 ಎಸೆತಗಳಲ್ಲಿ 89 ರನ್ ಗಳಿಸಿ ಔಟಾದರು ಇನ್ನೊಂದು ರನ್ ಗಳಿಸಿದ್ದರೆ ಡೆಲ್ಲಿ ವಿರುದ್ಧ ಪಂಜಾಬ್ ವಿಜಯೋತ್ಸವ ಆಚರಿಸಬಹುದಾಗಿತ್ತು. ಆದರೆ, ಒಂದು ಕೆಟ್ಟ ಹೊಡೆತ ಮಯಾಂಕ್ ವಿಕೆಟ್ ಪತನಕ್ಕೆ ಕಾರಣವಾಯಿತು. ನಂತರ ಪಂದ್ಯ ಟೈ ಆಗಿ ಸೂಪರ್ ಓವರ್ ನಡೆದು ಡೆಲ್ಲಿ ಸುಲಭ ಜಯ ದಾಖಲಿಸಿತು.

ಮಯಾಂಕ್ ಸಾಹಸಕ್ಕೆ ದಕ್ಕದ ಗೆಲುವು: ಸೂಪರ್ ಓವರ್ನಲ್ಲಿ ಗೆದ್ದ ಡೆಲ್ಲಿ
ಆದರೆ, ಉತ್ತಮವಾಗಿ ಆಡಿದೆ ಗೆಳೆಯ ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ. ನಿಮ್ಮ ಪ್ರಯತ್ನ ಅದ್ಭುತವಾಗಿತ್ತು, ಸೂಪರ್ ಓವರ್ ನಲ್ಲಿ ನೀನಿರಲಿಲ್ಲ, ಆದರೂ ಕೊವಿಡ್ 19 ಸಂದರ್ಭದಲ್ಲಿ ಅತ್ಯಂತ ಮನರಂಜನೆ ನೀಡಿತು. ಮತ್ತೊಮ್ಮೆ ಸಂತಸವಾಗುತ್ತಿದೆ ಎಂಬರ್ಥದಲ್ಲಿ ಸಿಸಿಎಲ್ ನಲ್ಲಿ ಕರ್ನಾಟಕ ಬುಲ್ಡೋಜರ್ ತಂಡದ ನಾಯಕ, ನಟ, ಮಯಾಂಕ್ ಅವರ ಗೆಳೆಯ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
Well played @mayankcricket ,,,so proud of you.
— Kichcha Sudeepa (@KicchaSudeep) September 20, 2020
Wonder after all the effort y you weren't in the three for the Supa over.
All said and done,,,extreme entertainment amidst covid and the other issues.
Cheers once again my friend.
ಸುದೀಪ್ ಟ್ವೀಟ್ ಬೆಂಬಲಿಸಿ ಹಲವರು ಪ್ರತಿಕ್ರಿಯಿಸುತ್ತಿದ್ದಾರೆ. ನಿಗದಿತ 20 ಓವರ್ ಗಳಲ್ಲಿ ಎರಡು ತಂಡಗಳು 157/8 ಸ್ಕೋರ್ ಮಾಡಿ ತಂಡ ಟೈ ಆಗಿ, ಸೂಪರ್ ಓವರ್ ನಲ್ಲಿ ಪಂಜಾಬ್ 2/2 ಸ್ಕೋರ್ ಮಾಡಿತ್ತು. ಡೆಲ್ಲಿ 3 ರನ್ ಗಳಿಸಿ ಜಯ ಗಳಿಸಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications