ಚರ್ಚ್ ಗಳಲ್ಲಿ ಲೈಂಗಿಕ ಗುಲಾಮಗಿರಿ ಇದೆ ಎಂದು ಒಪ್ಪಿಕೊಂಡ ಪೋಪ್
ದುಬೈ, ಫೆಬ್ರವರಿ 06: ಚರ್ಚ್ಗಳಲ್ಲಿ ನನ್ (ಕ್ರೈಸ್ತ ಸನ್ಯಾಸಿನಿ)ಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ ಎಂದು ಕ್ಯಾಥೊಲಿಕ್ ಚರ್ಚ್ಗಳ ಮುಖ್ಯಸ್ಥ ಎಂದೇ ಕರೆಯಲಾಗುವ ಪೋಪ್ ಫ್ರಾನ್ಸಿಸ್ ಮೊದಲ ಬಾರಿಗೆ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ.
ಅರಬ್ ದೇಶಗಳಿಗೆ ಭೇಟಿ ನೀಡಿದ್ದ ಪೋಪ್, ಕ್ಯಾಥೋಲಿಕ್ ಚರ್ಚ್ಗಳಲ್ಲಿ ನನ್ಗಳು ಮುಂಚಿನಿಂದಲೂ ಪಾದ್ರಿಗಳು, ಬಿಷಪ್ಗಳಿಂದ ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದಾರೆ, ಅದೂ ಈಗಲೂ ಮುಂದುವರೆದಿದೆ ಎಂದು ಹೇಳಿದ್ದಾರೆ.
ನನ್ಗಳನ್ನು ಲೈಂಗಿಕ ಗುಲಾಮರನ್ನಾಗಿಯೂ ಮಾಡಿಕೊಳ್ಳಲಾಗಿದೆ ಎಂದಿರುವ ಅವರು, ಕ್ಯಾಥೊಲಿಕ್ ಚರ್ಚ್ಗೆ ಈ ಬಗ್ಗೆ ಮಾಹಿತಿ ಇದ್ದು, ನಾವು ಈ ಕೆಟ್ಟ ವ್ಯವಸ್ಥೆಯನ್ನು ಬದಲಾಯಿಸುವ ಹಾದಿಯಲ್ಲಿದ್ದೇವೆ ಎಂದು ಪೋಪ್ ಅವರು ಹೇಳಿದ್ದಾರೆ.

ಈ ಸಮಸ್ಯೆಯು ಮುಂಚಿನಿಂದ ಇದೆ, ಕೆಲವು ಪ್ರಾರ್ಥನಾ ಮಂದಿರಗಳಲ್ಲಿ (ಚರ್ಚ್), ಕೆಲವು ಪ್ರದೇಶದ ಚರ್ಚ್ಗಳಲ್ಲಿ, ಹೊಸದಾಗಿ ಆಗಿರುವ ಚರ್ಚ್ಗಳಲ್ಲಿ ಹೆಚ್ಚು ಕಂಡು ಬರುತ್ತಿದೆ ಎಂದು ಪೋಪ್ ಪ್ರಾನ್ಸಿಸ್ ಹೇಳಿದರು.
ನನ್ಗಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಆಗಾಗ್ಗೆ ಅಲ್ಲಲ್ಲಿ ವರದಿಗಳು ಕೇಳಿಬರುತ್ತಲೇ ಇದ್ದವು. ಇತ್ತೀಚೆಗಷ್ಟೆ ನೆರೆಯ ಕೇರಳದಲ್ಲಿ ಫ್ರಾನ್ಸಿಸ್ ಮುಲಕ್ಕಲ್ ವಿರುದ್ಧ ಕೆಲವು ನನ್ಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದರು. ಅದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಯಿತು.
ಬೆಂಗಳೂರಿನಲ್ಲಿ ಕಳೆದ ಶನಿವಾರವಷ್ಟೆ ಇಂತಹುದೇ ಘಟನೆ ಬೆಳಕಿಗೆ ಬಂದಿದೆ. ದೌರ್ಜನ್ಯಕ್ಕೊಳಗಾದ 27 ವರ್ಷದ ಮಹಿಳೆ, ಆರು ವರ್ಷಗಳ ಹಿಂದೆ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕೆಂದು ಹೋಲಿ ಟ್ರಿನಿಟಿ ಚರ್ಚ್ ಬಿಷಪ್ ಮತ್ತು ಪಾದ್ರಿ ಮಾಡುತ್ತಿದ್ದ ಒತ್ತಡವನ್ನು ಸಹಿಸಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಳು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications