ಸೌದಿ ಪುರುಷರು ಈ ನಾಲ್ಕು ದೇಶಗಳ ಮಹಿಳೆಯನ್ನು ಮದುವೆಯಾಗುವಂತಿಲ್ಲ!
ರಿಯಾದ್, ಮಾರ್ಚ್ 20: ಸೌದಿ ಅರೇಬಿಯಾವು ಪಾಕಿಸ್ತಾನ ಸೇರಿದಂತೆ ನಾಲ್ಕು ದೇಶಗಳ ಮಹಿಳೆಯರನ್ನು ಮದುವೆಯಾಗದಂತೆ ತನ್ನ ದೇಶದ ಪುರುಷರಿಗೆ ನಿರ್ಬಂಧ ವಿಧಿಸಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಚಾಡ್ ಮತ್ತು ಮಯನ್ಮಾರ್ ದೇಶಗಳಿಗೆ ಸೇರಿದ ಮಹಿಳೆಯರನ್ನು ಮದುವೆಯಾಗುವಂತಿಲ್ಲ ಎಂದು ಸೌದಿ ಆದೇಶ ಹೊರಡಿಸಿರುವುದಾಗಿ ಪಾಕಿಸ್ತಾನದ 'ಡಾನ್' ಪತ್ರಿಕೆ ವರದಿ ಮಾಡಿದೆ.
ಅನಧಿಕೃತ ಲೆಕ್ಕಾಚಾರದ ಪ್ರಕಾರ ಸೌದಿ ಅರೇಬಿಯಾದಲ್ಲಿ ಈ ನಾಲ್ಕು ದೇಶಗಳ ಸುಮಾರು 5 ಲಕ್ಷ ಮಹಿಳೆಯರು ಇದ್ದಾರೆ. ವಿದೇಶಿ ಮಹಿಳೆಯರನ್ನು ಮದುವೆಯಾಗಲು ಇಚ್ಛಿಸುವ ಸೌದಿಯ ಪುರುಷರು ಇನ್ನು ಮುಂದೆ ಕಠಿಣ ನಿಯಂತ್ರಣ ನಿಯಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮಕ್ಕಾ ಪೊಲೀಸ್ ನಿರ್ದೇಶಕ ಮೇಜರ್ ಜನರಲ್ ಅಸ್ಸಾಫ್ ಅಲ್ ಖುರೇಷಿ ಹೇಳಿರುವುದಾಗಿ ಪತ್ರಿಕೆ ತಿಳಿಸಿದೆ.
ವಿದೇಶಿಗರನ್ನು ಮದುವೆಯಾಗದಂತೆ ಸೌದಿ ಪುರುಷರನ್ನು ನಿಯಂತ್ರಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದೇಶಿಗರ ಜತೆಗಿನ ವಿವಾಹಕ್ಕೆ ಪೂರ್ವಾನುಮತಿ ಪಡೆಯುವ ವಿವಿಧ ಹೆಚ್ಚುವರಿ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ವಿದೇಶಿ ಮಹಿಳೆಯನ್ನು ಮದುವೆಯಾಗಲು ಮೊದಲು ಸರ್ಕಾರದಿಂದ ಅನುಮತಿಗೆ ಮನವಿ ಸಲ್ಲಿಸಬೇಕು. ಅಧಿಕೃತ ಮಾರ್ಗದ ಮೂಲಕ ಮದುವೆ ಅರ್ಜಿಗಳನ್ನು ಸಲ್ಲಿಸಬೇಕು. ವಿಚ್ಚೇದನ ಪಡೆದು ಆರು ತಿಂಗಳ ಒಳಗೆ ಮರು ಮದುವೆಗೆ ಪುರುಷರು ಅರ್ಜಿ ಸಲ್ಲಿಸುವಂತಿಲ್ಲ.
ಅರ್ಜಿದಾರರು 25 ವರ್ಷ ಮೀರಿರಬೇಕು ಮತ್ತು ಸ್ಥಳೀಯ ಜಿಲ್ಲಾ ಮೇಯರ್ನ ಸಹಿಯುಳ್ಳ ಗುರುತಿನ ದಾಖಲೆಗಳು, ಕುಟುಂಬದ ಕಾರ್ಡ್ ಪ್ರತಿ ಸೇರಿದಂತೆ ಇತರೆ ಗುರುತಿನ ದಾಖಲೆಗಳನ್ನು ಒದಗಿಸಬೇಕು. ಒಂದು ವೇಳೆ ಅರ್ಜಿದಾರರು ಈಗಾಗಲೇ ಮದುವೆಯಾಗಿದ್ದರೆ, ತನ್ನ ಪತ್ನಿ ಅಂಗವಿಕಲೆ, ದೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದಾಳೆ ಅಥವಾ ಬಂಜೆ ಎಂದು ಸಾಬೀತುಪಡಿಸುವ ವರದಿಯನ್ನು ಆಸ್ಪತ್ರೆಯಿಂದ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications