ಹಜ್ ಯಾತ್ರೆ: 60 ಸಾವಿರ ಯಾತ್ರಿಕರಿಗೆ ಮಾತ್ರ ಅವಕಾಶ
ದುಬೈ, ಜೂನ್ 12: ಕೊರೊನಾ ಸೋಂಕಿನಿಂದಾಗಿ ಈ ಬಾರಿ ಹಜ್ ಯಾತ್ರೆಗೆ ಕೇವಲ 60 ಸಾವಿರ ಮಂದಿಗೆ ಮಾತ್ರ ಅವಕಾಶ ಕಲ್ಪಿಸಿ ಸೌದಿ ಅರೇಬಿಯಾ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಈ ಬಾರಿ ಹಜ್ ಯಾತ್ರಿಕರ ಸಂಖ್ಯೆಯನ್ನು 60 ಸಾವಿರಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ.
ಅವರೆಲ್ಲರೂ ರಾಜ್ಯದ ಒಳಗಿನವರು ಆಗಿರುತ್ತಾರೆ ಎಂದು ಸೌದಿ ಅರೇಬಿಯಾ ಹೇಳಿದೆ. ಸೌದಿ ಅರೇಬಿಯಾ ಕಿಂಗ್ ಡಮ್ ಶನಿವಾರ ಈ ಪ್ರಕಟಣೆ ಹೊರಡಿಸಿರುವುದಾಗಿ ಅದರ ಸರ್ಕಾರಿ ಮಾಧ್ಯಮ ಏಜೆನ್ಸಿಯೊಂದು ತಿಳಿಸಿದೆ.

ಹಜ್ ಸಚಿವಾಲಯ ಮತ್ತು ಉಮ್ರಾ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಉಲ್ಲೇಖಿಸಲಾಗಿದೆ. ಕಳೆದ ವರ್ಷ ಹಜ್ ಯಾತ್ರೆಗಾಗಿ ಆಯ್ಕೆಯಾಗಿರುವ 1 ಸಾವಿರ ಜನರು ಈಗಾಗಲೇ ಸೌದಿ ಅರೇಬಿಯಾ ಸುತ್ತಮುತ್ತ ಇದ್ದಾರೆ.
160 ವಿವಿಧ ರಾಷ್ಟ್ರಗಳ ಮೂರನೇ ಎರಡರಷ್ಟು ವಿದೇಶಿ ನಿವಾಸಿಗಳು ಸಾಮಾನ್ಯವಾಗಿ ಹಜ್ ಪ್ರತಿನಿಧಿಸುತ್ತಿದ್ದಾರೆ. ಮೂರನೇ ಒಂದನೇ ರಷ್ಟು ಸೌದಿ ಅರೇಬಿಯಾದ ಭದ್ರತಾ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿ ಇರಲಿದ್ದಾರೆ. ಜುಲೈ ಮಧ್ಯ ಭಾಗದಿಂದ ಹಜ್ ಆರಂಭವಾಗಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಸೌದಿ ಅರೇಬಿಯಾದಲ್ಲಿ ಇರುವ ಸೀಮಿತ ಜನರು ಮಾತ್ರ ಹಜ್ ಕರ್ಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಈ ವರ್ಷ ಸೌದಿ ಅರೇಬಿಯಾದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದರೂ, ಹಜ್ ಯಾತ್ರೆಯ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿರಲಿಲ್ಲ.
ಪ್ರತಿ ವರ್ಷ ಎರಡು ಮಿಲಿಯನ್ಗಿಂತಲೂ ಹೆಚ್ಚು ಮುಸ್ಲಿಮರು ಸೌದಿ ಅರೇಬಿಯಾದ ಪವಿತ್ರ ನಗರ ಮಕ್ಕಾದಲ್ಲಿ ಹಜ್ ಕರ್ಮದಲ್ಲಿ ಪಾಲ್ಗೊಳ್ಳುತ್ತಾರೆ. ಭಾರತ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳ ಜನರು ಹಜ್ ಯಾತ್ರೆ ತೆರಳುತ್ತಾರೆ. 2019 ರಲ್ಲಿ 2 ಲಕ್ಷ ಭಾರತೀಯರು ಹಜ್ ಯಾತ್ರೆ ಕೈಗೊಂಡಿದ್ದರು.
ಇತ್ತೀಚೆಗಷ್ಟೇ ಈ ಕುರಿತು ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮಾತನಾಡಿದ್ದರು, ಕೋವಿಡ್ -19 ಗೆ ಸಂಬಂಧಪಟ್ಟಂತೆ ವಾರ್ಷಿಕ ಹಜ್ ಯಾತ್ರೆಗಾಗಿ ಸೌದಿ ಅರೇಬಿಯಾ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಿಗೆ ಭಾರತ ಬದ್ಧವಾಗಿರುವುದಾಗಿಯೂ ಅವರು ಹೇಳಿದ್ದರು.
ಹಜ್ ಯಾತ್ರೆ ಸೌದಿ ಅರೇಬಿಯಾ ಸರ್ಕಾರದ ನಿರ್ಧಾರವನ್ನು ಅವಲಂಬಿಸಿರುತ್ತದೆ. ಭಾರತ ತನ್ನ ನಿರ್ಧಾರದಲ್ಲಿ ಸೌದಿ ಸರ್ಕಾರದ ಪರವಾಗಿ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ ವರ್ಷ ಹಜ್ ರದ್ದಾಯಿತು, ಈ ವರ್ಷ ಇನ್ನೂ ಏನನ್ನೂ ನಿರ್ಧರಿಸಲಾಗಿಲ್ಲ" ಎಂದು ನಖ್ವಿ ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications