ಗೋಕಳ್ಳತನದ ಆರೋಪ: ದುಬೈಯಿಂದ ಬಂದು ಹತ್ಯೆಯಾದ ನತದೃಷ್ಟ!
ಬರೇಲಿ, ಆಗಸ್ಟ್ 30: ಜಾನುವಾರು ಕಳ್ಳತನದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಜನರೇ ಹೊಡೆದು ಕೊಂದ ದಾರುಣ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಭೊಲಾಪುರ ಹದೊಲಿಯಾ ಎಂಬ ಹಳ್ಳಿಯಲ್ಲಿ ನಡೆದಿದೆ.
ದುಬೈಯಲ್ಲಿ ಟೇಲರ್ ಕೆಲಸ ಮಾಡುತ್ತಿದ್ದ ಶಾರೂಖ್ ಬರೇಲಿಯಲ್ಲಿರುವ ತನ್ನ ಮನೆಗೆ ಬಂದಿದ್ದ. ಈ ಸಮಯದಲ್ಲಿ ತನ್ನ ಮೂವರು ಗೆಳೆಯರೊಂದಿಗೆ ಅಡ್ಡಾಡಿಕೊಂಡು ಬರಲು ಹೋಗಿದ್ದ ಸಮಯದಲ್ಲಿ ಎಮ್ಮೆಯೊಂದನ್ನು ಕದ್ದಿದ್ದಾರೆಂದು ಆರೋಪಿಸಿ ಜನರ ಗುಂಪೊಂದು ಅವರ ಮೇಲೆ ದಾಳಿ ನಡೆಸಿತ್ತು.
ಈ ಸಮಯದಲ್ಲಿ ಶಾರೂಖ್ ನ ಉಳಿದ ಸ್ನೇಹಿತರು ಪರಾರಿಯಾಗಿದ್ದಾರೆ. ಆದರೆ ಶಾರೂಖ್ ನನ್ನು ಹಿಡಿದ ಜನರು ಆತನನ್ನು ಚೆನ್ನಾಗಿ ಥಳಿಸಿದ್ದು, ಅತಿಯಾದ ಗಾಯ ಮತ್ತು ರಕ್ತಸ್ರಾವದಿಂದ ಬಳಲುತ್ತಿದ್ದ ಶಾರೂಖ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ, ಆತ ಅಷ್ಟರಲ್ಲೇ ಅಸುನೀಗಿದ್ದ.

ಗೋಕಳ್ಳನೆಂದು ಆರೋಪಿಸಿ ಇತ್ತೀಚೆಗಷ್ಟೆ ಹರ್ಯಾಣದಲ್ಲಿ ಓರ್ವ ವ್ಯಕ್ತಿ ಮತ್ತು ರಾಜಸ್ಥಾನದಲ್ಲಿ ಓರ್ವ ವ್ಯಕ್ತಿಯನ್ನು ಜನರೇ ಹೊಡು ಕೊಂದಿದ್ದರು.
ಗೋರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ಸ್ವತಃ ಪ್ರಧಾನಿ ಮೋದಿ ಅವರೇ ಕರೆ ಕೊಟ್ಟಿದ್ದರೂ ಇಂಥ ಪ್ರಕರಣಗಳು ನಿಲ್ಲುತ್ತಿಲ್ಲ.
ಗೋ ರಕ್ಷಣೆಯ ಹೆಸರಿನಲ್ಲಿ ಗುಂಪುಗೂಡಿಕೊಂಡು ಹೊಡೆಯುವುದು, ಕೊಲ್ಲುವುದು ಅಪರಾಧ. ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದನ್ನೂ ಇಲ್ಲಿ ಉಲ್ಲೇಖಿಸಬಹುದು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications