ಎಸ್ಎಸ್ಎಲ್ಸಿ ಪರೀಕ್ಷೆ: ಮೂವರು ವಿದ್ಯಾರ್ಥಿಗಳು ಡಿಬಾರ್
ಗದಗ, ಜೂ. 27: ರಾಜ್ಯ ಸರ್ಕಾರ ಅತಿದೊಡ್ಡ ರಿಸ್ಕ್ ತೆಗೆದುಕೊಂಡು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ ಸರ್ಕಾರ ಅಪಾಯವನ್ನು ಲೆಕ್ಕಿಸದೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಬಾರದು, ವಿದ್ಯಾರ್ಥಿಗಳ ಆತ್ಮವಿಶ್ವಾಸಕ್ಕೆ ಧಕ್ಕೆ ಆಗಬಾರದು ಎಂದು ಪರೀಕ್ಷೆ ತೆಗೆದುಕೊಂಡಿದೆ. ಕೊರೊನಾ ವೈರಸ್ ಸಂಕಷ್ಟದ ಮಧ್ಯೆ ಕಟ್ಟಿನಿಟ್ಟಿನ ಪರೀಕ್ಷೆಯನ್ನು ಸರ್ಕಾರ ನಡೆಸುತ್ತಿದೆ. ಆದರೂ ಕೆಲವರು ತಮ್ಮ ಹಳೆಯ ಚಾಳಿಯನ್ನು ಬಿಟ್ಟಿಲ್ಲ.
Recommended Video
ಚೀನಾ
ವಸ್ತುಗಳ
ವಿರುದ್ಧ
ಹೊಸ
ಅಸ್ತ್ರ
ಪ್ರಯೋಗಕ್ಕೆ
ಮುಂದಾದ
ಮೋದಿ.
|
Narendra
Modi
|
Oneindia
Kannada
ನಗರದ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ನಡೆದ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಮೂವರನ್ನು ಡಿಬಾರ್ ಮಾಡಲಾಗಿದೆ.
ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ದಿಢೀರ್ ಭೇಟಿ ನೀಡಿದ ವೇಳೆಯಲ್ಲಿ ನಕಲು ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಪತ್ತೆಯಾಗಿದ್ದು, ಕೂಡಲೇ ಪರೀಕ್ಷೆಯಿಂದ ಡಿಬಾರ್ ಮಾಡಿದ್ದಾರೆ.
Comments
English summary
Three students who have been copying the SSLC math test have been debarred.