ಬಿಂಕದಕಟ್ಟಿ ಮೃಗಾಲಯದಿಂದ ತನ್ನ ಹುಟ್ಟುಹಬ್ಬಕ್ಕೆ ಚಿರತೆ ದತ್ತು ಪಡೆದ 5 ವರ್ಷದ ಪೋರ
ಗದಗ, ಸೆಪ್ಟೆಂಬರ್, 16: ಐದು ವರ್ಷದ ಶೌರ್ಯ ಎಂಬ ಬಾಲಕ ತನ್ನ ಹುಟ್ಟಿದ ದಿನದ ಸಂಭ್ರಮಕ್ಕೆ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದಿಂದ ಚಿರತೆಯನ್ನು ದತ್ತು ಪಡೆದಿದ್ದಾನೆ.
ಗದಗದ ಬಿಂಕದಕಟ್ಟಿ ಮೃಗಾಲಯದ ಭೀಮಾ ಎಂಬ ಚಿರತೆಯನ್ನು ಶೌರ್ಯ ಮರೆಣ್ಣವರ್ ಎಂಬ ಐದು ವರ್ಷದ ಬಾಲಕ ದತ್ತು ಪಡೆದಿದ್ದಾನೆ. ಮೃಗಾಲಯದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಆರ್ಎಫ್ಓ ಮಹೇಶ್ ಮರೆಣ್ಣವರ್ ಅವರ ಪುತ್ರನ ಐದನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಚಿರತೆಯನ್ನು ದತ್ತು ಪಡೆಯಲಾಗಿದೆ. ನಿಗದಿ ಪಡಿಸಿದ 50 ಸಾವಿರ ರೂಪಾಯಿ ಪಾವತಿಸಿ ವರ್ಷದ ಮಟ್ಟಿಗೆ ಚಿರತೆಯನ್ನು ದತ್ತು ಪಡೆಯಲಾಗಿದೆ. ಹುಟ್ಟಿನಿಂದ ಶೌರ್ಯನಿಗೆ ಚಿರತೆ ಅಂದರೆ ಇಷ್ಟ, ಹಾಗಾಗಿ ಹುಟ್ಟು ಹಬ್ಬದ ಉಡುಗೊರೆ ರೂಪದಲ್ಲಿ ಶೌರ್ಯನಿಗೆ ಚಿರತೆ ದತ್ತು ಪಡೆದಿದ್ದೇನೆ ಎಂದು ಅವರ ತಂದೆ ಮಹೇಶ್ ತಿಳಿಸಿದ್ದಾರೆ.
ಚಿರತೆಯನ್ನು ದತ್ತು ಪಡೆದ 5 ವರ್ಷದ ಪೋರ
ಮಹೇಶ್ ಅರಣ್ಯ ಇಲಾಖೆ ಅಧಿಕಾರಿಯಾಗಿರುವುದರಿಂದ ಶೌರ್ಯ ಅವರಿಗೆ ಪ್ರಾಣಿ, ಪಕ್ಷಿಗಳ ಬಗ್ಗೆ ವಿಶೇಷ ಆಸಕ್ತಿ. ಮಹೇಶ್ ಅವರು ಈ ಹಿಂದೆ ಬ್ಯಾಡಗಿ ರೇಂಜ್ನಲ್ಲಿದ್ದಾಗ ಚಿರತೆ ಗಣತಿ, ಕ್ಯಾಮೆರಾ ಅಳವಡಿಸುವ ಕೆಲಸಕ್ಕೆ ಶೌರ್ಯ ಜೊತೆಗೆ ಹೋಗುತ್ತಿದ್ದ. ಅಲ್ಲದೆ ಚಿರತೆಯನ್ನು ರಕ್ಷಣೆ ಮಾಡುವಾಗ, ಸ್ಥಳಕ್ಕೆ ಭೇಟಿ ಕೊಟ್ಟು ಚಿರತೆ ಬಗ್ಗೆ ಆಸಕ್ತಿಯಿಂದ ಮಾಹಿತಿ ಪಡೆಯುತ್ತಿದ್ದ. ಹಾಗಾಗಿ ಮಗನ ಆಸೆಯಂತೆ ಬಿಂಕದಕಟ್ಟಿ ಮೃಗಾಲಯದಲ್ಲಿ ಪ್ರಾಣಿ ದತ್ತು ಪಡೆಯಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸಾವಿರ ರೂ.ಯಿಂದ ದತ್ತು ಸ್ವೀಕಾರಕ್ಕೆ ಅವಕಾಶ
ಮಹಾಮಾರಿ ಕೊರೊನಾ ನಂತರ ಪ್ರಾಣಿಗಳ ದತ್ತು ಸ್ವೀಕಾರ ಮಾಡುವುದಕ್ಕೆ ಜನರು ಹೆಚ್ಚಿನದಾಗಿ ಆಸಕ್ತಿವಹಿಸುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸ್ವಲ್ಪ ಮಟ್ಟಿಗೆ ದತ್ತು ಸ್ವೀಕಾರ ಮಾಡುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ದತ್ತು ಪ್ರಕ್ರಿಯೆಯಿಂದಾಗಿ ಸುಮಾರು 70 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಒಂದು ಸಾವಿರ ರೂಪಾಯಿಯಿಂದ ದತ್ತು ಪಡೆಯಲು ಅವಕಾಶ ಇದೆ. ಹುಲಿ, ಸಿಂಹಗಳಿಗೆ 2 ಲಕ್ಷ ರೂಪಾಯಿ ಪಾವತಿಸಬೇಕಾಗುತ್ತದೆ. ಆಹಾರ ಕ್ರಮ ನಿರ್ವಹಣೆಗೆ ಅನುಸಾರವಾಗಿ ದರ ನಿಗದಿ ಮಾಡಲಾಗಿದೆ. ಆಸಕ್ತರು ಮೃಗಾಲಯಕ್ಕೆ ಭೇಟಿ ನೀಡಿ ವಿವರ ಪಡೆಯಬಹುದು. ಚೆಕ್, ಆರ್ಟಿಜಿಎಸ್ ಮೂಲಕ ಹಣ ಪಾವತಿಸಿ ರಶೀದಿ ಪಡೆಯಬಹುದು. ಆನ್ಲೈನ್ ಮೂಲಕ ದತ್ತು ಸ್ವೀಕಾರ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಇಲಾಖೆಯವರು ಮಾಹಿತಿಯನ್ನು ನೀಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications