Get Updates
Get notified of breaking news, exclusive insights, and must-see stories!

ಗದಗ ನಗರಾಭಿವೃದ್ಧಿ ಅಧಿಕಾರಿ ರುದ್ರೇಶ್​ ಮನೆ ಮೇಲೆ ಎಸಿಬಿ ದಾಳಿ

ಗದಗ, ಅಕ್ಟೋಬರ್ 22: ಗದಗದಲ್ಲಿ ಇಂದು ಬೆಳಿಗ್ಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ್​ ಅವರ‌ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರುದ್ರೇಶ್ ಅವರಿಗೆ ಸಂಬಂಧಿಸಿದ ಮೂರು ಜಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ., ನಗರದ ನೌಕರರ ಭವನ ಬಳಿಯ ಕ್ವಾಟ್ರಸ್​, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಅಧಿಕಾರಿ ಎಸ್.ಎನ್.ರುದ್ರೇಶ್​​ ಆದಾಯಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಮಾಹಿತಿ ಇದೆ. ಅಧಿಕಾರಿ‌ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ, 1.50 ಲಕ್ಷ ನಗದು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ವೈ.ಎಸ್.ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

Gadag: ACB Raid On Urban Development Cell Planning Director Rudresh House

ಗದಗ ಡಿವೈಎಸ್​​ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿಕ್ಕಜಾಜೂರಿನ ಮನೆ ಹಾಗೂ ಫಾರ್ಮ್‌ ಹೌಸ್ ಮೇಲೆ ದಾಳಿ ಮಾಡಲಾಗಿದೆ. ಒಟ್ಟು ಮೂರು ತಂಡಗಳು ಮೂರು ಕಡೆಗಳಲ್ಲಿ ದಾಳಿ ನಡೆಸಿವೆ.

Recommended Video

      Mohammed Siraj ಬೆಳೆದು ಬಂದ ಹಾದಿ , ಹಾಗು IPLಗೆ ಪ್ರವೇಶ ಹೇಗಿತ್ತು | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+