15 ವರ್ಷದಿಂದ ಹೊಟ್ಟೆಯೊಳಗೆ ಬೆಳೆದ ಬೃಹತ್ ಗಡ್ಡೆ, ವೃದ್ಧನ ನರಕಯಾತನೆ
ಗದಗ, ಆಗಸ್ಟ್ 9: ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ವ್ಯಕ್ತಿಯೊಬ್ಬರಿಗೆ ಹೊಟ್ಟೆಯ ಹೊರ ಭಾಗದಲ್ಲಿ ಬೃಹತ್ ಆಕಾರದ ಗಡ್ಡೆ ಬೆಳೆದಿದ್ದು, ಕಳೆದ 15 ವರ್ಷಗಳಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಹನುಮಂತಪ್ಪ ಎಂಬ ವೃದ್ಧ ಈ ವಿಚಿತ್ರ ರೋಗಕ್ಕೆ ತುತ್ತಾಗಿದ್ದು, ಯಾರಾದರೂ ನೆರವಿಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ ಬುಲ್ಡೊಜರ್ ನಗರ ನಿವಾಸಿ 69 ವರ್ಷದ ಹನುಮಂತಪ್ಪರಿಗೆ ಹೊಟ್ಟೆಯಿಂದ ಬೃಹತ್ ಗಡ್ಡೆ ಆಕಾರ ಹೊರಬಂದಿದ್ದು, ವೃದ್ಧ ನಿತ್ಯ ನರಕ ಅನುಭವಿಸುವಂತಾಗಿದೆ. ಹೊಟ್ಟೆಯೊಳಗಿಂದ ಗಡ್ಡೆ ಜೋತು ಬಿದ್ದಿದೆ. ಆದರೆ ಅದರಿಂದ ಅವರಿಗೆ ಯಾವುದೇ ನೋವು ಆಗುತ್ತಿಲ್ಲ. ಆದರೆ ಓಡಾಡೋದು ಮಾತ್ರ ತುಂಬಾ ಕಷ್ಟವಾಗಿದೆ.
ಹನುಮಂತಪ್ಪನಿಗೆ ಮಕ್ಕಳಿಲ್ಲ, ಜೀವನ ನಡೆಸಲು ಹನಮಂತಪ್ಪನಿಗೆ ಹೆಂಡತಿಯೇ ಆಧಾರವಾಗಿದ್ದಾರೆ. ಇಳಿವಯಸ್ಸಿನಲ್ಲಿ ದುಡಿಮೆಯೂ ಸಾಧ್ಯವಾಗ್ತಿಲ್ಲ, ಸರಕಾರ ನೀಡುವ ಅಕ್ಕಿಯಿಂದ ಜೀವನ ನಸುತ್ತಿದ್ದಾರೆ. ಆಸ್ಪತ್ರೆಗೆ ಹೋದರೆ ಎಷ್ಟು ಹಣ ಬೇಕಾಗಬಹುದೋ ಎಂದು ಚಿಕಿತ್ಸೆ ಗೊಡವಿಗೆ ಹನಮಂತಪ್ಪ ಹೋಗಿಲ್ಲ. ಮಕ್ಕಳ ಮನರಂಜನೆಯ 'ಗರ್ದಿ ಗಮ್ಮತ್ತು' (ಬಯೋಸ್ಕೋಪ್) ನಡೆಸುತ್ತಿದ್ದ ಹನುಮಂತಪ್ಪ, ವಿಚಿತ್ರ ರೋಗದ ಸಮಸ್ಯೆಯಿಂದ ಸದ್ಯ ಮನೆಯಲ್ಲೇ ಕೈದಿಯಾಗಿ ಜೀವನ ನಡೆಸುವಂತಾಗಿದೆ.

ಅನಾರೋಗ್ಯ ಹನುಮಂತಪ್ಪನನ್ನು ಮನೆಯಿಂದ ಹೆಚ್ಚು ಓಡಾಡೋದಕ್ಕೆ ಬಿಡುತ್ತಿಲ್ಲ. ಹೀಗಿದ್ರೂ ಎರಡು ಕಿಲೋ ಮೀಟರ್ ಓಡಾಡುತ್ತಾರಂತೆ. ಗರ್ದಿ ಗಮ್ಮತ್ತು ಆಟ ನಿಂತು 15 ವರ್ಷ ಆಗಿದೆ. ಅದರಿಂದ ಬರುತ್ತಿದ್ದ ಬಿಡಿಗಾಸು ನಿಂತು ಹೋಗಿದೆ. ಈ ನಿಗೂಢ ರೋಗ ಆವರಿಸಿತ್ತೋ ಆಗಿನಿಂದ ಹನುಮಂತಪ್ಪ ಮನೆಯಲ್ಲಿದ್ದಾರೆ. ಚಿಕ್ಕಂದಿನಿಂದಲೇ ಹೊಟ್ಟೆ ಅಸಹಜ ಆಕಾರದಲ್ಲಿತ್ತು, ನಂತರ ವಯಸ್ಸು ಆದಂತೆಲ್ಲ, ಹೊಟ್ಟೆ ಬೆಳೀತಿದೆ. ಹೊಟ್ಟೆ ಕರಳು ಸಮಸ್ಯೆ ಅಂತಾ ಕೆಲ ವೈದ್ಯರು ಹೇಳಿದ್ದರಂತೆ. ವರ್ಷದಿಂದ ಗಡ್ಡೆ ಬೆಳೆದು ವೃದ್ಧ ಹನಮಂತಪ್ಪ ಹಾಸಿಗೆ ಹಿಡಿಯುವಂತಾಗಿದೆ.

ಹೆಚ್ಚಿನ ಚಿಕಿತ್ಸೆಗೆ ಹಣಕಾಸಿನ ತೊಂದರೆಯಿಂದ ಆಸ್ಪತ್ರೆಗೆ ಹೋಗದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಸರಕಾರ ಇತ್ತ ಗಮನ ಹರಿಸಿ ವೃದ್ಧನ ಸಹಾಯಕ್ಕೆ ಧಾವಿಸಬೇಕಿದೆ. ಸೂಕ್ತ ಚಿಕಿತ್ಸೆಗೆ ನೆರವು ನೀಡಬೇಕಿದೆ. ಅಲೆಮಾರಿ ಜನಾಂಗದ ಹನುಮಂತಪ್ಪನ ನಿತ್ಯ ನರಕಯಾತನೆಗೆ ಮುಕ್ತ ಕೊಡಬೇಕೆಂದರು ಆತನ ಪರಿಸ್ಥಿತಿ ನೋಡಿದವರು ಆಶಯ ವ್ಯಕ್ತಪಡಿಸಿದ್ದಾರೆ
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications