ಗಣೇಶನ ಜೊತೆ 101 ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದ ಗದಗ APMC ಸಿಬ್ಬಂದಿ
ಗದಗ, ಸೆಪ್ಟೆಂಬರ್, 22: ರಾಜ್ಯದಲ್ಲಿ ಸದ್ಯ ಬರಗಾಲದ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ರೈತರು ತತ್ತರಿಸಿ ಹೋಗಿದ್ದಾರೆ. ಜೊತೆಗೆ ರೈತರನ್ನು ಅವಲಂಬಿಸಿರುವ ಎಪಿಎಂಸಿ ವ್ಯಾಪಾರಸ್ಥರೂ ಸಹ ಕಂಗಾಲಾಗಿದ್ದಾರೆ. ಎಪಿಎಂಸಿಗೆ ರೈತರ ಉತ್ಪನ್ನಗಳು, ಕಾಳುಗಳು ಬರದೇ ವ್ಯಾಪಾರ ವಹಿವಾಟು ಕುಂಠಿತವಾಗಿದೆ. ಮತ್ತೊಂದೆಡೆ ಮಳೆಗಾಗಿ ರೈತರು ದೇವರುಗಳ ಮೊರೆ ಹೋಗುತ್ತಿದ್ದಾರೆ. ಹಾಗೆಯೇ ಗದಗದಲ್ಲಿ ನೂರಾರು ಗೋವುಗಳಿಗೆ ಪೂಜೆ ಸಲ್ಲಿಸಿದ ಘಟನೆಯೂ ನಡೆದಿದೆ.
ಗದಗ ನಗರದ ಎಪಿಎಂಸಿ ವ್ಯಾಪಾರಸ್ಥರು ಪ್ರತಿಷ್ಠಾಪನೆ ಮಾಡಿರುವ ಗಣೇಶನ ಸಮ್ಮುಖದಲ್ಲಿ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬರಗಾಲ ನೀಗಿಸಿ ಸಮೃದ್ಧಿ ಕೊಡು ಅಂತಾ ಪ್ರಾರ್ಥಿಸಿ, ವಿನಾಯಕನ ಜೊತೆಗೆ ಗೋ ಮಾತೆಗೂ ಪೂಜೆ ಸಲ್ಲಿಸಿದರು. ಮುತ್ತೈದೆಯರು 101 ಗೋವು, ಎತ್ತುಗಳಿಗೆ ಅರಿಸಿಣ ಕುಂಕುಮ ಹಚ್ಚಿ ಪೂಜಿಸಿದರು. ಅಲ್ಲದೆ ಅಕ್ಕಿ, ಬೆಲ್ಲ ಅರ್ಪಿಸಿ ಭಕ್ತಿಯಿಂದ ಮಳೆಯಾಗಲಿ ಎಂದು ಬೇಡಿಕೊಂಡು.

ಹೀಗೆ ಪೂಜೆ ಮಾಡುವುದರಿಂದ ಗೋಮಾತೆ ಸಂತೃಪ್ತಳಾಗ್ತಾಳೆ. ಇದರಿಂದ ರೈತರು ಸಮೃದ್ಧರಾಗ್ತಾರೆ ಅನ್ನೋದು ನಂಬಿಕೆಯಿದೆ. ಹೀಗಾಗಿ ಈ ಬಾರಿ ವಿನಾಯಕನ ಜೊತೆಗೆ ಗೋವುಗಳ ಪೂಜೆಯನ್ನೂ ನೆರವೇರಿಸಲಾಗಿದೆ. ಎಪಿಎಂಸಿ ವರ್ತಕರ ಸಂಘ ಕಳೆದ ಎರಡು ವರ್ಷದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದೆ. ಒಂಭತ್ತು ದಿನಗಳ ಕಾಲ ನಡೆಯುವ ಗಣೇಶ ಉತ್ಸವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ.
ಪ್ರತಿ ಬಾರಿಯೂ ಉಡಿ ತುಂಬುವ ಕಾರ್ಯ, ಅನ್ನಸಂತರ್ಪಣೆ ಮಾಡುತ್ತಿದ್ದ ವರ್ತಕರು, ಈ ಬಾರಿ ಬರ ಎದುರಾಗಿರುವುದರಿಂದ ವಿಶೇಷ ಗೋ ಪೂಜೆ ಮಾಡಿ ಗಮನ ಸೆಳೆದಿದ್ದಾರೆ. ಗದಗ ಜಿಲ್ಲೆಯಲ್ಲಿ ಬರದ ಛಾಯೆ ದಟ್ಟವಾಗಿದ್ದು, ಬರಗಾಲ ದೂರವಾಗಿ ಮಳೆಯಾಗಲಿ ಅಂತಾ ಕೇಳಿಕೊಂಡಿದ್ದಾರೆ. ವಿಶೇಷ ಅಂದರೆ ಪರಿಸರ ಸ್ನೇಹಿ ಗಣಪನನ್ನೇ ಈ ಬಾರಿ ಪ್ರತಿಷ್ಠಾಪಿಸಿರುವ ಮಂಡಳಿ, ಪರಿಸರ ಪ್ರೇಮ ಮೆರೆದಿದ್ದಾರೆ. ರೈತರು ಸಮೃದ್ಧರಾದರೆ ಎಪಿಎಂಸಿ ವ್ಯಾಪಾರವಾಗುತ್ತದೆ. ಹೀಗಾಗಿ ರೈತರ ಸಂಕಷ್ಟ ನೀಗಲಿ ಅಂತಾ ಕೇಳಿಕೊಳ್ಳಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications