ಗದಗದಲ್ಲಿ ಪ್ಲಾಸ್ಟಿಕ್ ಸರ್ಜರಿ ಕ್ಯಾಂಪ್ ಬಗ್ಗೆ ಜಾಗೃತಿ ಅಭಿಯಾನ
ಗದಗ, ಡಿಸೆಂಬರ್ 20: ಬೆಂಗಳೂರಿನಲ್ಲಿ ಫೆಬ್ರವರಿ 2, 2020 ರಂದು ಆಯೋಜಿಸಲಾಗಿರುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರದ ಬಗ್ಗೆ ಜಾಗೃತಿ ಅಭಿಯಾನವನ್ನು ಗದಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಶನ್ ಹೈಟೆನ್ ಫಾಸ್ಟನರ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ನಗರದಲ್ಲಿ ಮಾಹಿತಿ ನೀಡುವ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಈ ಬಾರಿ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು 2020 ರ ಫೆಬ್ರವರಿ 2 ರಂದು ಬೆಂಗಳೂರಿನ ನಾರಾಯಣ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ನಡೆಸಲಾಗುತ್ತದೆ. ಈ ಶಿಬಿರದಲ್ಲಿ ಸುಟ್ಟ ಗಾಯಗಳು, ಸೀಳುದುಟಿ, ಮತ್ತು ಮೈಕ್ರೋ ಸರ್ಜರಿಯನ್ನು ನೆರವೇರಿಸಲಾಗುತ್ತದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಶಿಬಿರದಲ್ಲಿ 6 ತಿಂಗಳಿಂದ 65 ವರ್ಷದವರೆಗಿನ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.
ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಶನ್ (ಎಫ್ ಡಬ್ಲ್ಯೂಒ) ಒಂದು ಲಾಭರಹಿತವಾದ ಸಂಘವಾಗಿದ್ದು, 1995 ರಲ್ಲಿ ಸ್ಥಾಪನೆಯಾಗಿದೆ. ಕಳೆದ 25 ವರ್ಷಗಳಿಂದ ಸತತವಾಗಿ ಪ್ರತಿ ವರ್ಷ ಇಂತಹ ಶಿಬಿರವನ್ನು ಆಯೋಜಿಸುತ್ತಾ ಬರುತ್ತಿದೆ. ಇದುವರೆಗೆ ನಡೆದಿರುವ ಶಿಬಿರಗಳಲ್ಲಿ 4000 ಕ್ಕೂ ಅಧಿಕ ರೋಗಿಗಳಿಗೆ ಪ್ಲಾಸ್ಟಿಕ್ ಸರ್ಜರಿಯನ್ನು ಉಚಿತವಾಗಿ ಯಶಸ್ವಿಯಾಗಿ ನೆರವೇರಿಸಲಾಗಿದೆ.

ಈ ವರ್ಷ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಬೆಂಗಳೂರಿನ ನಾರಾಯಣ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ನಡೆಸಲಾಗುತ್ತಿದೆ, ಮ್ಯಾಕ್ಸಿಲೋ-ಫೇಶಿಯಲ್ ಮತ್ತು ಪ್ಲಾಸ್ಟಿಕ್ ಸರ್ಜನ್ ಗಳನ್ನೊಳಗೊಂಡ ಇಂಟರ್ ಪ್ಲಾಸ್ಟ್ ಜರ್ಮನಿಯ ತಜ್ಞ ವೈದ್ಯರ ತಂಡವು ಈ ಸರ್ಜರಿಗಳನ್ನು ನಡೆಸಲಿದೆ.
ಹೈಟೆನ್ ಫಾಸ್ಟನರ್ಸ್ ಗದಗದಲ್ಲಿ ಸ್ಟೀಲ್ ಫಾಸ್ಟನರ್ಸ್ ಅನ್ನು ತಯಾರಿಸುವ ಕಂಪನಿಯಾಗಿದ್ದು, ಎಫ್ ಡಬ್ಲ್ಯೂ ಒ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರದ ಬಗ್ಗೆ ಕೈಗೊಂಡಿರುವ ಜಾಗೃತಿ ಅಭಿಯಾನಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಶಿಬಿರದಿಂದ ಆಗುವ ಪ್ರಯೋಜನಗಳ ಬಗ್ಗೆ ಸ್ಥಳೀಯ ವೈದ್ಯಕೀಯ ವೃತ್ತಿಪರರು ಮತ್ತು ಚಾರಿಟೇಬಲ್ ಸಂಘಸಂಸ್ಥೆಗಳಿಗೆ ಈ ಅಭಿಯಾನದ ಮೂಲಕ ಜಾಗೃತಿ ಮೂಡಿಸುತ್ತಿದೆ. ಈ ಶಿಬಿರದಲ್ಲಿ ಪ್ಲಾಸ್ಟಿಕ್ ಸರ್ಜರಿ ಶಸ್ತ್ರಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತವಾಗಿ ನೆರವೇರಿಸಲಾಗುತ್ತದೆ.

ಹೈಟೆನ್ ಫಾಸ್ಟನರ್ಸ್ ನ ವ್ಯವಸ್ಥಾಪಕ ನಿರ್ದೇಶಕ ಸಾಯಿಕುಮಾರ್ ಅವರು ಎಫ್ ಡಬ್ಲ್ಯೂಒ ಪ್ರತಿನಿಧಿಗಳೊಂದಿಗೆ ಸೇರಿ ಹಲವಾರು ವೈದ್ಯರು ಮತ್ತು ವೈದ್ಯಕೀಯ ವೃತ್ತಿಪರರೊಂದಿಗೆ ಸಂವಾದ ನಡೆಸಿ ಶಿಬಿರದ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಇದೇ ವೇಳೆ, ಗದಗ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಸಿಎಸ್ಐ ಹಾಸ್ಪಿಟಲ್, ಚಿರಾಯು ಕ್ರಿಟಿಕಲ್ ಕೇರ್ ಸೇರಿದಂತೆ ಹಲವಾರು ಆಸ್ಪತ್ರೆಗಳಿಗೆ ಭೇಟಿ ನೀಡಿ ಶಿಬಿರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ












Click it and Unblock the Notifications