ಮುಂಡರಗಿ ಪುರಸಭೆಯಲ್ಲಿ ಕುರ್ಚಿ, ಟೇಬಲ್ ಎಸೆದಾಡಿ ಸದಸ್ಯನ ಪುಂಡಾಟ
ಗದಗ, ಸೆ.29: ಇತ್ತೀಚೆಗೆ ಜನಪ್ರತಿನಿಧಿಗಳಲ್ಲಿ ಮೌಲ್ಯಗಳೇ ಇಲ್ಲದಂತಾಗಿವೆ. ಜನರ ಕಷ್ಟಗಳಿಗೆ ಎಷ್ಟರಮಟ್ಟಿಗೆ ಸ್ಪಂದಿಸ್ತಾರೆ ಅನ್ನೋದೆ ಒಂದು ಯಕ್ಷಪ್ರಶ್ನೆ. ಆದ್ರೆ ಗೆಲುವಿನ ಬಳಿಕ ಅವರ ಕಾರ್ಯವೈಖರಿ ನಡವಳಿಕೆಗಳು ಹಾದಿಬಿಟ್ಟು ಗುಡ್ಡ ಸೇರಿಬಿಡ್ತವೆ. ಅಂದ ಹಾಗೆ ಪುರಸಭೆಯ ಸದಸ್ಯರು ಇಂತಹದ್ದೇ ಒಂದು ಪುಂಡಾಟಿಕೆ ನಡೆಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಅಂದ ಹಾಗೆ ಗದಗ ಜಿಲ್ಲೆಯ ಮುಂಡರಗಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಗಲಾಟೆ ನಡೆದು ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ರಾದ್ಧಾಂತ ಮಾಡಿಕೊಂಡಿದ್ದಾರೆ. ಪುರಸಭೆಯ ಸ್ಟ್ಯಾಂಡಿಂಗ್ ಕಮಿಟಿ ಚೇರ್ಮನ್ ಆಯ್ಕೆ ವಿಚಾರವಾಗಿ ಸದಸ್ಯರು ಪರಸ್ಪರ ಕಚ್ಚಾಡಿಕೊಂಡಿದ್ದಾರೆ. ವಾದ ವಾಗ್ವಾದ ನಡೆದು ಕೊನೆಗೆ ಕುರ್ಚಿ, ಟೇಬಲ್ ಮೇಲೆ ದರ್ಪ ತೋರಿದ್ದಾರೆ. ಕಾಂಗ್ರೆಸ್ ಸದಸ್ಯ ರಾಜಾಭಕ್ಷಿ ಬೆಟಗೇರಿ ಎಂಬ ಸದಸ್ಯ ಪುಂಡಾಟಿಕೆ ಮೆರೆದಿದ್ದಾರೆ. ಸದನದ ಗೌರವ ಕಾಪಾಡಿಕೊಳ್ಳಬೇಕಿದ್ದ ಸದಸ್ಯರು ಚಿಕ್ಕಮಕ್ಕಳಂತೆ ಒಬ್ಬೊರಿಗೊಬ್ಬರ ಮೇಲೆ ಕಿರುಚಾಡಿ ಜಗಳವಾಡಿದ್ದಾರೆ.

ಪುರಸಭೆಯ ಒಟ್ಟು ಸದಸ್ಯರ ಪೈಕಿ 6 ಜನ ಕಾಂಗ್ರೆಸ್ ಸದಸ್ಯರು ವಿರೋಧ ಪಕ್ಷದಲ್ಲಿ ಇದ್ದಾರೆ. ಉಳಿದ 14 ಜನ ಬಿಜೆಪಿ ಸದಸ್ಯರು ಇದ್ದಾರೆ. ಪುರಸಭೆಯ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ ಅವರು ಏಕಪಕ್ಷೀಯ, ಸರ್ವಾಧಿಕಾರಿ ಧೋರಣೆ ಮಾಡ್ತಿದ್ದಾರೆ, ಉಳಿದ ಸದಸ್ಯರ ಗಮನಕ್ಕೆ ತರದೇ ತೀರ್ಮಾನ ಕೈಗೊಳ್ತಾರೆ ಎಂಬ ಆರೋಪವನ್ನ ವಿರೋಧ ಪಕ್ಷದ ಸದಸ್ಯರು ಮಾಡ್ತಿದ್ದರು.

ಸ್ಟ್ಯಾಂಡಿಂಗ್ ಕಮಿಟಿಯ ಚೇರ್ಮನ್ ಅವರನ್ನ ಅಧ್ಯಕ್ಷರು ದಿಢೀರ್ ಅಂತ ಆಯ್ಕೆ ಮಾಡಿದ್ದಾರೆ ಇದು ನಿಯಮ ಬಾಹಿರ ಎಂದು ವಿರೋಧ ಪಕ್ಷದ ಸದಸ್ಯರು ತಗಾದೆ ತೆಗೆದಿದ್ದರು. ಈ ವೇಳೆ ಕಾಂಗ್ರೆಸ್ ಸದಸ್ಯನೇ ಆಗಿರೋ ರಾಜಾಭಕ್ಷಿ ಉಳಿದ ಕಾಂಗ್ರೆಸ್ ಸದಸ್ಯರ ಜೊತೆಗೆ ವಾಗ್ವಾದಕ್ಕಿಳಿದಿದ್ದಾರೆ. ಪುರಸಭೆಯ ಅಧ್ಯಕ್ಷೆಯ ನಿರ್ಧಾರ ಸರಿಯಿದೆ ಅದನ್ನ ಪ್ರಶ್ನೆ ಮಾಡುವಂತಿಲ್ಲ ಎಂದು ತಮ್ಮ ಪಕ್ಷದ ಸದಸ್ಯರ ಜೊತೆಗೆ ವಾಗ್ವಾದಕ್ಕಿಳಿದು ಕೊನೆಗೆ ಈ ರೀತಿಯ ಪುಂಡಾಟಿಕೆ ಮೆರೆದಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications