ಗದಗ: ಕೈಕೊಟ್ಟ ಮಳೆ, ಜಮೀನಿನಲ್ಲೇ ಒಣಗಿದ ಬೆಳೆ
ಗದಗ, ಸೆಪ್ಟೆಂಬರ್ 08: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸಮರ್ಪಕವಾಗಿ ಮಳೆ ಸುರಿಯದೆ ರೈತರು ಸಂಕಷ್ಟದ ಸ್ಥಿತಿ ಎದುರಿಸುವಂತಾಗಿದೆ. ಹಲವು ಕಡೆ ಬಿತ್ತನೆ ಮಾಡಿದ ಬೆಳೆಗಳಿಗೆ ತೇವಾಂಶ ಕೊರತೆಯಿಂದ ಬಹುತೇಕ ಬೆಳೆ ಕುಂಠಿತವಾಗಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲೂಕಿನಲ್ಲಿ 20,550 ಹೆಕ್ಟೇರ್ ಗೋವಿನಜೋಳ, 4,250 ಹೆಕ್ಟೇರ್ ಶೇಂಗಾ, 7,200 ಹೆಕ್ಟೇರ್ ಸೂರ್ಯಕಾಂತಿ, 155 ಹೆಕ್ಟೇರ್ತೊಗರಿ, 55 ಹೆಕ್ಟೇರ್ ಹೆಸರು, ಮತ್ತಿತರ ಬೆಳೆ ಸೇರಿ ಒಟ್ಟು 36,480 ಹೆಕ್ಟೇರ್ಪ್ರದೇಶದಲ್ಲಿ ಬಿತ್ತನೆಯಾಗಿದೆ. ಸೂಕ್ತ ಸಮಯಕ್ಕೆ ಮಳೆ ಬಾರದೆ ಬಿತ್ತನೆ ಕ್ಷೇತ್ರ ಕಡಿಮೆಯಾಗಿದೆ.

ಬೆಳೆಗೆ ಮಳೆ ಕೊರತೆಯಿಂದ ಬೆಳೆ ಕುಂಠಿತವಾಗಿದೆ. ತೇವಾಂಶ ಕೊರತೆಯಿಂದಾಗಿ ಬೆಣ್ಣಿಹಳ್ಳಿ, ಮಕ್ತುಂಪುರ ಸೇರಿ ಕೆಲವು ಕಡೆ ಗೋವಿನಜೋಳ ನೆಲಸಮವಾಗುತ್ತಿದೆ. ಕೆಲ ರೈತರು ಈರುಳ್ಳಿ, ಮೆಣಸಿನಕಾಯಿ ಬೆಳೆಯನ್ನು ಸಹ ನಾಶ ಪಡಿಸುತ್ತಿದ್ದಾರೆ. ಬರ ಪರಿಹಾರಕ್ಕಾಗಿ ತಹಶೀಲ್ದಾರ್ ಖಾತೆಯಲ್ಲಿ ಸದ್ಯ 52ಲಕ್ಷ ರೂಪಾಯಿ ಹಣವಿದೆ. ಸರ್ಕಾರದಿಂದ ನಿರ್ದೇಶನ ಬಂದರೆ ತಾಲೂಕು ಆಡಳಿತದಿಂದ ಎಲ್ಲ ಸಿದ್ಧತೆಯನ್ನು ಸಹ ಮಾಡಿಕೊಳ್ಳಲಾಗಿದೆ.
ಸೆಪ್ಟೆಂಬರ್ 3ರಂದು ಸುರಿದ ರಭಸದ ಮಳೆಯಿಂದ ಕೆಲವು ಬೆಳೆಗಳಿಗೆ ಜೀವ ಬಂದಂತಾಗಿದೆ. ಆದರೆ, ಅದರಿಂದ ರೈತರಿಗೆ ಲಾಭವಾಗುವುದು ತುಂಬಾ ಕಡಿಮೆ.
'ಮುಂಡರಗಿ ತಾಲೂಕಿನಲ್ಲಿ ಆಗಸ್ಟ್ನಲ್ಲಿ ಶೇ.40ರಷ್ಟು ಮಳೆ ಕೊರತೆಯಾಗಿದೆ. ಗೋವಿನಜೋಳ ಹೂವಾಗುವ ಹಂತದಲ್ಲಿ ಶೇ.40ರಷ್ಟು ಇಳುವರಿ ಕುಂಠಿತವಾಗಲಿದೆ. ಮುಂಗಾರಿನಲ್ಲಿ 48 ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದರೂ, 36,480 ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿದೆ. ಅದರಲ್ಲಿ ಮಳೆ ಕೊರತೆಯಿಂದ 18,451 ಹೆಕ್ಟೇರ್ ಬೆಳೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಆಗಸ್ಟ್ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ' ಎಂದು ಮುಂಡರಗಿ ಸಹಾಯಕ ಕೃಷಿ ನಿರ್ದೇಶಕ ವೆಂಕಟೇಶಮೂರ್ತಿ ಟಿ.ಎಸ್ ಹೇಳಿದ್ದಾರೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications