Get Updates
Get notified of breaking news, exclusive insights, and must-see stories!

Breaking; ಸಿ. ಸಿ. ಪಾಟೀಲ್ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಧರಣಿ

ಗದಗ, ಏಪ್ರಿಲ್ 27; ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್‌ ನಿವಾಸದ ಮುಂದೆ ಮಂಗಳವಾರ ಧರಣಿ ನಡೆಸಲಿದ್ದಾರೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವರ ನಿವಾಸದ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದು, ಸಚಿವರು ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಮಾಡುವಂತೆ ಆಗ್ರಹಿಸಲಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಸಚಿವ ಸಿ. ಸಿ. ಪಾಟೀಲ್ ಮಠಗಳಿಗೆ ಅನುದಾನ ಬಿಡುಗಡೆ ಮಾಡಲು 30 ಪರ್ಸೆಂಟ್ ಕಮೀಷನ್ ಕೇಳಲಾಗುತ್ತಿದೆ ಎಂದು ಆರೋಪ ಮಾಡಿದ್ದ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಟೀಕೆಗಳನ್ನು ಮಾಡಿದ್ದರು.

Dingaleshwar Swamiji To Protest In Front Of Minister CC Patil House

"ದಿಂಗಾಲೇಶ್ವರ ಸ್ವಾಮೀಜಿ ಬಳಿ ಯಾರಾದರೂ ಕಮೀಷನ್ ಕೇಳಿದ್ದರೆ ದಾಖಲೆಗಳನ್ನು ಕೊಡಲಿ. ಮುಖ್ಯಮಂತ್ರಿಗಳು ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದಾರೆ. ಕೇವಲ ಆರೋಪ ಮಾಡುವುದು ಬೇಡ. ಸ್ವಾಮೀಜಿಗಳು ರಾಜಕಾರಣಿಗಳಾಗಿ ಮಾತನಾಡಬಾರದು" ಎಂದು ಸಚಿವರು ಹೇಳಿದ್ದರು.

"ಸ್ವಾಮೀಜಿಗಳು ಮೂರು ಸಾವಿರ ಮಠದ ಪೀಠಕ್ಕಾಗಿ ಎಂತಹ ರೌಡಿಸಂ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ತೋಂಟದಾರ್ಯ ಸ್ವಾಮೀಜಿಗಳ ಮಠಕ್ಕೆ ಅನುದಾನ ಕೊಟ್ಟಿರುವುದಕ್ಕೆ ಅಸಮಾಧಾನವನ್ನು ಬೇರೆ ರೂಪದಲ್ಲಿ ಹೊರಹಾಕಿ, ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಬೇಡಿ" ಎಂದು ಸಚಿವ ಸಿ. ಸಿ. ಪಾಟೀಲ್ ಸ್ವಾಮೀಜಿ ವಿರುದ್ಧ ಆರೋಪ ಮಾಡಿದ್ದರು.

ಮೂರು ಸಾವಿರ ಮಠದ ಪೀಠಕ್ಕಾಗಿ ಎಂತಹ ರೌಡಿಸಂ ಮಾಡಿದ್ದಾರೆ ಎಂಬ ಸಚಿವರ ಹೇಳಿಕೆಗೆ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರು ತಮ್ಮ ಆರೋಪ ಸಾಬೀತು ಮಾಡಬೇಕು ಎಂದು ಒತ್ತಾಯಿಸಿ ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ.

ಕಮೀಷನ್ ಆರೋಪ; "ಮಠಗಳಿಗೆ ಮಂಜೂರಾದ ಅನುದಾನ ಪಡೆಯಲು ಶೇ 30ರಷ್ಟು ಕಮೀಷನ್ ನೀಡಬೇಕು" ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ಕೊಟ್ಟಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಸ್ವಾಮೀಜಿಗಳು ಯಾರಿಗೆ, ಯಾವ ಉದ್ದೇಶಕ್ಕೆ, ಎಷ್ಟು ಮೊತ್ತದ ಲಂಚ ನೀಡಿದ್ದಾರೆ? ಎಂಬುದರ ವಿವರ ನೀಡಲಿ. ಇದರ ಸಂಪೂರ್ಣ ತನಿಖೆ ನಡೆಸಲಾಗುತ್ತದೆ" ಎಂದು ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+