ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನ ಎಂಬುದು ಭ್ರಮೆ: ಎಚ್ಕೆ ಪಾಟೀಲ್

|
Google Oneindia Kannada News

Recommended Video

ಇವರದ್ದೆಲ್ಲ ಭ್ರಮೆ, ನಿಜ ಆಗೋದಿಲ್ಲ: Lok Sabha Elections 2019 | Oneindia Kannada

ಗದಗ, ಏಪ್ರಿಲ್ 23: ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರಕಾರ ಚುನಾವಣೆಯ ನಂತರ ಪತನವಾಗುವುದಿಲ್ಲ. ಲೋಕಸಭಾ ಚುನಾವಣೆಯ ನಂತರ ಸಮ್ಮಿಶ್ರ ಸರಕಾರ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

ಸ್ವಂತ ಊರಾದ ಗದಗದ ಹುಲಕೋಟಿಯಲ್ಲಿ ಸಹೋದರ ಡಿ ಆರ್ ಪಾಟೀಲ್ ಅವರ ಜೊತೆ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಮೋದಿ ಅಲೆ ನಡೆಯುವುದಿಲ್ಲಾ. ಗ್ರಾಮೀಣಾಭಿವೃದ್ದಿಗೆ ಒತ್ತು ಕೊಟ್ಟ ಡಿ ಆರ್ ಪಾಟೀಲ್ ಅವರ ಅಲೆ ಗದಗದಲ್ಲಿದೆ.

Elections 2019 : JDS- Congress govt wont collapse after LS polls : HK Patil

ಹಾವೇರಿ - ಗದಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರು ಸಕ್ರೀಯವಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಡಿ ಆರ್ ಪಾಟೀಲ್ ಅವರ ಗೆಲವು ನಿಶ್ಚಿತ. ಬೆಳಗಾವಿ, ಬಾಗಲಕೋಟೆ, ಗುಲ್ಬರ್ಗಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ಮಾಡಿದ್ದೇನೆ. ಎಲ್ಲ ಕಡೆಯಲ್ಲಿಯೂ ಕಾಂಗ್ರೆಸ್ ಪರವಾದ ಒಲವು ಕಂಡುಬಂದಿದೆ. ಎಲ್ಲ ಕಡೆ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದಿಸಲಿದ್ದಾರೆ ಎಂದರು.

ಲೋಕಸಭಾ ಚುನಾವಣೆಯ ಬಳಿಕ ಸಮ್ಮಿಶ್ರ ಸರಕಾರ ಪತನವಾಗುತ್ತದೆ ಎನ್ನುವ ಭಾರತೀಯ ಜನತಾ ಪಕ್ಷದ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ನಂತರ ಸಮ್ಮಿಶ್ರ ಸರಕಾರ ಮತ್ತಷ್ಟು ಗಟ್ಟಿಗೊಳ್ಳಲಿದೆ. ಮೋದಿ ಗೆಲವಾಗಬಹುದು, ಬಿಡಬಹುದು ಆದರೆ ಕರ್ನಾಟಕ ಸರಕಾರ ಮತ್ತಷ್ಟು ಗಟ್ಟಿಯಾಗುವುದು ನಿಶ್ಚಿತ ಎಂದರು. ಬಿಜೆಪಿಯವರು ಸರಕಾರ ಅಸ್ತಿತ್ವಕ್ಕೆ ಬಂದ ಸಮಯದಿಂದಲೂ ಇದನ್ನೇ ಹೇಳುತ್ತಾ ಬಂದಿದ್ದಾರೆ. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ.

ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಬಲಗೊಳ್ಳಲಿದ್ದು, ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರಕಾರ ಪತನಗೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಕಂಡುಬಂದಿದ್ದು, ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದರು.

English summary
JDS- Congress government in Karnataka would not collapse after Lok Sabha polls and will become more strong said KPCC campaign committee chief HK Patil. HK Patil casted his vote today in Gadag.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X