ಭಾರತೀಯ ಜನತಾ ಪಕ್ಷವೇ ನನ್ನ ರಾಜಕೀಯ ಜೀವನ-ಗಾಲಿ ಜನಾರ್ದನ ರೆಡ್ಡಿ
ಗದಗ, ಡಿಸೆಂಬರ್ 7: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಜನಾರ್ದನ ರೆಡ್ಡಿ ಮಾತ್ರ ಯಾವುದಕ್ಕೂ ಸ್ಪಷ್ಟ ಉತ್ತರ ನೀಡದೆ ಕೊಪ್ಪಳ ಹಾಗೂ ಗಂಗಾವತಿ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದಾರೆ.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ಸಂಜೆ ತಮ್ಮ ಬೆಂಬಲಿಗರು ಮತ್ತು ಫೋಟೋ ವಿಡಿಯೋ ತಂಡದೊಂದಿದೆ ಗದಗದ ಬಸವೇಶ್ವರ ಗಾರ್ಡನ್ಗೆ ಭೇಟಿ ನೀಡಿದ್ದಾರೆ.
ಗಾಲಿ ಜನಾರ್ದನ ರೆಡ್ಡಿ ಬಸವೇಶ್ವರ ಮೂರ್ತಿ ದರ್ಶನಕ್ಕೂ ಮೊದಲು ಸಾರಿಗೆ ಸಚಿವ ಶ್ರೀರಾಮುಲು ಅವರ ಮನೆಗೆ ಭೇಟಿ ನೀಡಿ ಬಂದಿದ್ದರು ಎನ್ನಲಾಗಿದೆ. ಬಳಿಕ ಜನಾರ್ದನ ರೆಡ್ಡಿ ಬಸವೇಶ್ವರ ಗಾರ್ಡನ್ನಲ್ಲಿ ವಿಡಿಯೋ ಹಾಗೂ ಫೋಟೋಶೂಟ್ ನಡೆಸಿದ್ದಾರೆ.

ಸ್ವಾಮೀಜಿಗಳ ಆಶಯದಂತೆ ಬಸವೇಶ್ವರ ಮೂರ್ತಿ ನಿರ್ಮಾಣ
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ಬಸವೇಶ್ವರ ಮೂರ್ತಿ ನೋಡಲು ಇಲ್ಲಿಗೆ ಬಂದಿದ್ದೇನೆ. ತೋಂಟದಾರ್ಯ ಸ್ವಾಮೀಜಿಗಳ ಆಶಯದಂತೆ ಬಸವೇಶ್ವರ ಮೂರ್ತಿ ನಿರ್ಮಿಸಲಾಗಿದೆ. ಶ್ರೀರಾಮುಲು ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ನಾನು ಪ್ರವಾಸೋದ್ಯಮ ಸಚಿವನಾಗಿದ್ದೆ. ಆಗ ಬಸವೇಶ್ವರ ಪುತ್ತಳಿ ಸ್ಥಾಪನೆ ಒತ್ತಾಯ ಇತ್ತು. ಈ ಭಾಗದ ಜನರ ಆಶಯದಂತೆ ಪುತ್ತಳಿ ನಿರ್ಮಾಣವಾಗಿದೆ. ನುಡಿದಂತೆ ನಡೆದಿದ್ದೇವೆ. ನೆನಪಿಗಾಗಿ ಸ್ಥಳಕ್ಕೆ ಭೇಟಿ ನೀಡಿ ಫೋಟೋ ವಿಡಿಯೋ ತೆಗೆದುಕೊಂಡಿದ್ದೇನೆ. ಇಲ್ಲಿ ಬಸವಣ್ಣ ಜೀವಂತವಾಗಿ, ಸಾಕ್ಷಾತ್ ನಿಂತಂತಿದೆ ಎಂದರು.

ಏನೇ ಇದ್ದರೂ ಭಾರತೀಯ ಜನತಾ ಪಕ್ಷದ ಮೇಲೆ ನಮಗೆ ಅಭಿಮಾನ
ಇನ್ನು ಹೊಸ ರಾಜಕೀಯ ಪಕ್ಷ ಆರಂಭಿಸುತ್ತೀರಾ..? ಎನ್ನುವ ಪ್ರಶ್ನೆಗೆ ಉತ್ತರಿಸಿದ ಜನಾರ್ದನ ರೆಡ್ಡಿ, ಭಾರತೀಯ ಜನತಾ ಪಕ್ಷವೇ ನನ್ನ ಇಡೀ ರಾಜಕೀಯ ಜೀವನ. ಕಳೆದ 30 ವರ್ಷಗಳಿಂದ ಬಿಜೆಪಿಯೇ ನಮ್ಮ ಕುಟುಂಬ. ಬಿಜೆಪಿಯಿಂದ ರಾಜಕೀಯ ಆರಂಭವಾಗಿದೆ. ಎಲ್.ಕೆ ಅಡ್ವಾಣಿ ಅವರ ರಾಮ ರಥಯಾತ್ರೆ ಮೂಲಕ ಕೆಲಸ ಆರಂಭ ಮಾಡಿದ್ದೇವು. ಏನೇ ಇದ್ದರೂ ಭಾರತೀಯ ಜನತಾ ಪಕ್ಷದ ಮೇಲೆ ನಮಗೆ ಅಭಿಮಾನ ಇರುತ್ತದೆ. ಪಕ್ಷದ ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡುತ್ತೇನೆ. ಅಭಿಮಾನ ಅಂದ್ರೆ ಬಿಜೆಪಿ. ಹಿರಿಯರು, ನಾಯಕರು ಏನು ತೀರ್ಮಾನ ಮಾಡುತ್ತಾರೆ ಕಾದು ನೋಡುತ್ತೇನೆ. ಯಾವ ಕ್ಷೇತ್ರದಿಂದ ಚುನಾವಣೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

ಜನರ ನಡುವೆಯೇ ಇರಲು ಗಂಗಾವತಿಯಲ್ಲಿ ಮನೆ ಮಾಡಿದ್ದೇನೆ
ಇನ್ನು ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿದೆ. ಬಳ್ಳಾರಿಯಿಂದ ಹೊರಗಿರಬೇಕಿದೆ. ನನಗೆ ಬೆಂಗಳೂರಿನಲ್ಲಿ ಇರಲು ಇಷ್ಟ ಇಲ್ಲ. ಉತ್ತರ ಕರ್ನಾಟಕದ ಬಳ್ಳಾರಿ, ಬೀದರ್ನಿಂದ ಬೆಳಗಾವಿವರೆಗೆ ಎಲ್ಲಿಯಾದರೂ ಇರಬೇಕು. ಮನಸ್ಸಿಗೆ, ಆರೋಗ್ಯಕ್ಕೆ ಈ ವಾತಾವರಣ ತೃಪ್ತಿ ತರುತ್ತದೆ. ನಮ್ಮ ಜನರ ನಡುವೆಯೇ ಇರಬೇಕು ಎನ್ನುವ ಕಾರಣಕ್ಕೆ ಗಂಗಾವತಿಯಲ್ಲಿ ಮನೆ ಮಾಡಿದ್ದೇನೆ. ಹೊಸ ಪಕ್ಷದ ವಿಚಾರವಾಗಿ ಹೆಚ್ಚು ಮಾತಾಡಲ್ಲ. ಇನ್ನೂ ಸಮಯ ಇದೆ. ಜನರ ಜೊತೆ ಸಂಪರ್ಕದಲ್ಲಿರಲು ಸಂಚಾರ ನಡೆಸುತ್ತಿದ್ದೇನೆ ಎಂದರು.

ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ ಜನಾರ್ದನ್ ರೆಡ್ಡಿ
ಗಾಲಿ ಜನಾರ್ದನ್ ರೆಡ್ಡಿ ಅವರು ಸದ್ಯ ರಾಜಕೀಯವಾಗಿ ಮುಂದಿನ ನಡೆಯ ಬಗ್ಗೆ ಸಾಕಷ್ಟು ಕುತೂಹಲ ಇದೆ. ಈಗಾಗಲೇ ಜನರ ಜೊತೆ ಬೆರೆಯಲು ಜನಾರ್ದನ್ ರೆಡ್ಡಿ ಈಗಾಗಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಚಾರ ಆರಂಭಿಸಿದ್ದಾರೆ. ಸೋಮವಾರ ಹನುಮ ಮಾಲೆ ಧರಿಸಿ ಅಂಜನಾದ್ರಿ ಬೆಟ್ಟದಲ್ಲಿ ಆಂಜನೇಯ ದರ್ಶನ ಪಡೆಯುವ ಮೂಲಕ ಅಧಿಕೃತ ಎಂಬಂತೆ ಗಂಗಾವತಿ ಕ್ಷೇತ್ರದಲ್ಲಿ ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್ ಆರಂಭ ಮಾಡಿದ್ದಾರೆ. ಮಂಗಳವಾರ ಜನಾರ್ದನ್ ರೆಡ್ಡಿ ಗಂಗಾವತಿಯ ಹಿರೇಜಂತಕಲ್ನಲ್ಲಿರುವ ಐತಿಹಾಸಿಕ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಪಟ್ಟಣದ ಕಲ್ಮಠಕ್ಕೂ ಭೇಟಿ ನೀಡಿ ಕಲ್ಮಠದ ಗದ್ದುಗೆಗೆ ನಮಸ್ಕರಿಸಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ನಂತರ ಖಾಸಗಿ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದರು. ಅಲ್ಲದೇ ರೈತ ದಿನಾಚರಣೆ ಅಂಗವಾಗಿ ರೈತರಿಗೆ ಸನ್ಮಾನ ಮಾಡಿದರು. ಹೀಗೆ ಒಂದೊಂದಾಗಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಜನಾರ್ದನ್ ರೆಡ್ಡಿ ಭಾಗಿಯಾಗುತ್ತಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications