ಕುದಿಯುವ ಎಣ್ಣೆಯಲ್ಲಿ ಕೈ ಹಾಕುತ್ತಿದ್ದ ಡೋಂಗಿ ಬಾಬಾಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಗದಗ, ಜುಲೈ 13: ಎಲ್ಲಿಯವರೆಗೆ ಮೋಸಹೋಗುವವರು ಇರುತ್ತಾರೋ ಅಲ್ಲಿಯವರೆಗೆ ಮೋಸ ಮಾಡುವವರು ಇರುತ್ತಾರೆ ಎಂಬುದು ಈ ವಿಚಾರದಲ್ಲಿ ಅಕ್ಷರಶಃ ಸತ್ಯವಾಗಿದೆ.
Recommended Video
ನಿಂಬೆ ಹಣ್ಣು, ಬೂಧಿ ಕೊಟ್ಟು ಮೋಸಮಾಡುತ್ತಿದ್ದ ಡೋಂಗಿ ಬಾಬಾನಿಗೆ ಮೋಸಹೋದವರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಗದಗದಲ್ಲಿ ನಡೆದಿದೆ.
ಕುದಿಯೋ ಎಣ್ಣೆ ಹಾಗೂ ಸುಡು ಸುಡು ತುಪ್ಪದಲ್ಲಿ ಕೈ ಹಾಕುತ್ತಿದ್ದ ನಕಲಿ ಬಾಬಾ ಒಬ್ಬನಿಗೆ ಸಾರ್ವಜನಿಕರು ಥಳಿಸಿದ್ದಾರೆ. ಇಲ್ಲಿನ ಗಂಗಿಮಡಿ ಪ್ರದೇಶದ ಆಶ್ರಯ ಕಾಲೊನಿಯಲ್ಲಿ ಈ ಘಟನೆ ನಡೆದಿದ್ದು, ನಕಲಿ ಬಾಬಾ ಆಸೀಫ್ ಜಾಗಿರದಾರ ಎಂಬಾತನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮೂಲತಃ ಬಾಗಲಕೋಟೆ ಜಿಲ್ಲೆಯವನಾದ ಆಸೀಫ್, ಗಂಗಿಮಡಿಯ ಹೆಂಡತಿಯ ತವರಲ್ಲಿ ತಂಗಿದ್ದ. ಹಲವು ವರ್ಷಗಳಿಂದ ಗಂಗಿಮಡಿ ಪ್ರದೇಶದಲ್ಲಿ ಜನರಲ್ಲಿ ಮೂಢನಂಬಿಕೆ ಬಿತ್ತಿ ಹಣ ಕೀಳುವ ಕೆಲಸ ಮಾಡುತ್ತಿದ್ದ. ಮೈಮೇಲೆ ದೇವರು, ದೆವ್ವ ಬಂದಂತೆ ನಟಿಸಿ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದ ಎನ್ನಲಾಗಿದೆ.
ಈ ವೇಳೆ ನಾನು ತಪ್ಪು ಮಾಡಿದ್ದೇನೆ, ನನ್ನನ್ನು ಬಿಟ್ಟುಬಿಡಿ ಎಂದು ನಕಲಿ ಬಾಬಾ ಅಂಗಲಾಚಿದರೂ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ನಂತರ ಗ್ರಾಮೀಣ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ.
ಕುದಿಯೋ ಎಣ್ಣೆ ಹಾಗೂ ಸುಡು ಸುಡು ತುಪ್ಪದಲ್ಲಿ ಕೈ ಹಾಕುತ್ತಿದ್ದ ಈ ಡೋಂಗಿ ಬಾಬಾ, ನಿಂಬೆ ಹಣ್ಣು ಮಂತ್ರಿಸಿ ಕೊಡುವುದು, ಬೂದಿ ಕೊಟ್ಟು ಜನರಿಗೆ ಮೋಸ ಮಾಡುತ್ತಿದ್ದ.
ಅಲ್ಲದೆ ಹಿಂದೂ ದೇವರಿಗೆ ಅವಮಾನ ಮಾಡುತ್ತಿದ್ದ ಅಂತ ಜನರು ಆರೋಪಿಸಿದ್ದಾರೆ. ಈ ವಿಷಯ ಒಬ್ಬರಿಂದ ಒಬ್ಬರಿಗೆ ಹರಿದಾಡುತ್ತಿದ್ದಂತೆ ಮೋಸ ಹೋದ ಒಂದಷ್ಟು ಜನ ಸೇರಿ ಸೋಮವಾರ ಬಾಬಾನನ್ನು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.