ಮಹಾದಾಯಿ ಕಳಸಾ- ಬಂಡೂರಿ ಹೋರಾಟ: ನರಗುಂದ ಬಂದ್
ಗದಗ, ಡಿಸೆಂಬರ್ 09 : ಮಹಾದಾಯಿ, ಕಳಸಾ ಬಂಡೂರಿ ಹಾಗೂ ಬೆಳೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶನಿವಾರ ನರಗುಂದ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಮಹಾದಾಯಿ-ಕಳಸಾ ಬಂಡೂರಿ ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿದೆ, ಸಂದರ್ಭದಲ್ಲಿ ಟಯರ್ ಗೆ ಬೆಂಕಿ ಹಚ್ಚಿ, ರಾಜ್ಯ ಕೇಂದ್ರ ಸರ್ಕಾರಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಹೆದ್ದಾರಿಯಲ್ಲಿ ಸಿಮೆಂಟ್ ಪೈಪ್ ಇಟ್ಟು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ, ನರಗುಂದ ತಾಲೂಕಿನಲ್ಲಿ ಮುಂಜಾಗೃತಾ ಕ್ರಮವಾಗಿ ಸರ್ಕಾರಿ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ. ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸಾವಿರಾರು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications