Get Updates
Get notified of breaking news, exclusive insights, and must-see stories!

ಗದಗ ಜಿಲ್ಲೆಯಲ್ಲಿ 2 ಕಮಲ, 2 ಕ್ಷೇತ್ರಗಳು "ಕೈ" ವಶಕ್ಕೆ, ಫಲಿತಂಶದ ವಿವರ ಇಲ್ಲಿದೆ

ಗದಗ, ಮೇ, 14: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಅಭ್ಯರ್ಥಿಗಳ ಹಣೆಬರಹವು ನಿರ್ಧಾರವಾಗಿದೆ. ಹಾಗಾದರೆ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಯಾವ ಪಕ್ಷ ಗೆಲುವು ಸಾಧಿಸಿದೆ ಮತ್ತು ಅವರು ಪಡೆದಿರುವ ಮತಗಳು ಎಷ್ಟು ಅನ್ನವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಗದಗ ವಿಧಾನಸಭಾ ಕ್ಷೇತ್ರ

ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಪಾಟೀಲ್‌ ಅವರು 89,958 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಇವರಿಗೆ ಪೈಪೋಟಿ ನೀಡಿದ್ದ ಬಿಜೆಪಿ‌ ಅಭ್ಯರ್ಥಿ ಅನೀಲ್‌ ಮೆಣಸಿನಕಾಯಿ 74,828 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಎಚ್‌.ಕೆ.ಪಾಟೀಲ್‌ ಅವರು 15,130 ಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.

Gadag Assembly Election Results 2023

ನರಗುಂದ ವಿಧಾನಸಭಾ ಕ್ಷೇತ್ರ

ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಸಿ.ಪಾಟೀಲ್‌ 72,835 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಬಿಗ್‌ ಪೈಟ್‌ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ 71,044 ಪಡೆದು ಸೋಲನುಭವಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಸಿ.ಸಿ. ಪಾಟೀಲ್‌ ಅವರು 1,791 ಮತಗಳ ಅಂತರದಲ್ಲಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ರೋಣ ವಿಧಾನಸಭಾ ಕ್ಷೇತ್ರ

ರೋಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ್‌ 94,865 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದರೆ, ಇನ್ನು ಭಾರಿ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ 70,175 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ್‌ ಅವರು 24,690 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಶಿರಹಟ್ಟಿ ವಿಧಾನಸಭಾ ಕ್ಷೇತ್ರ

ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ‌ ಅಭ್ಯರ್ಥಿ ಚಂದ್ರು ಲಮಾಣಿ 73,600 ಮತಗಳನ್ನು ಪಡೆಯುವ ಮೂಲಕ 27,963 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಪೈಪೋಟಿ ನೀಡಿದ್ದ ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ‌ ದೊಡ್ಡಮನಿ ಅವರು 45,637 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಅವರು 34,550 ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ರೇಷ್ಮೆ ನಾಡಿನಲ್ಲೂ "ಕೈ" ದರ್ಬಾರ್‌

ಅದೇ ರೀತಿ ರೇಷ್ಮೆನಾಡು ರಾಮನಗರ ಜಿಲ್ಲೆಯ 4 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 3 ಕ್ಷೇತ್ರದಲ್ಲಿ ಗೆದ್ದು ಬೀಗಿದೆ. ಕಳೆದ ಬಾರಿ ಮೂರು ಕ್ಷೇತ್ರಗಳನ್ನು ತೆಕ್ಕೆಗೆ ಪಡೆದಿದ್ದ ಜೆಡಿಎಸ್, ಈ ಬಾರಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟಿದೆ. ಅಲ್ಲದೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಕರ್ಮಭೂಮಿ ಎನಿಸಿದ್ದ ರಾಮನಗರ ಕ್ಚೇತ್ರದಲ್ಲಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದಾರೆ. ಅಲ್ಲದೆ ಒಟ್ಟಾರೆ ಕ್ಷೇತ್ರವಾರು ಸೋಲು ಗೆಲುವಿನ ಲೆಕ್ಕಾಚಾರದ ಮಾಹಿತಿ ಇಲ್ಲಿದೆ.

ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಅವರು 94,650 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ. ಇಕ್ಬಾಲ್ ಹುಸೇನ್‍ ಅವರು 87,690 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅವರು 1,43,023 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 96,592 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+